Home / ಲೇಖನ / ವಿಜ್ಞಾನ / ಅಪಾಯಗಳಿಗೆ ಮುನ್ಸೂಚನೆ ನೀಡುವ ಪ್ರಾಣಿಲೋಕ!

ಅಪಾಯಗಳಿಗೆ ಮುನ್ಸೂಚನೆ ನೀಡುವ ಪ್ರಾಣಿಲೋಕ!

ಇದ್ದಕ್ಕಿದ್ದಂತೆ ನೈಸರ್‍ಗಿಕ ವಿಕೋಪಗಳಾಗಿ ಸಾವಿರಾರು ಜನ ಸತ್ತುಹೋದರು. ನೂರಾರು ಜನ ಭೂಕಂಪದಲ್ಲಿ ಮಡಿದರು, ಸಮುದ್ರ ಬಿರುಗಾಳಿಯಿಂದ ನೌಕೆಗಳು ಅಪ್ಪಳಿಸಿದವು! ಮುಂತಾದ ವರದಿಗಳನ್ನು ನೋಡುತ್ತೇವೆ. ಇದೆಲ್ಲ ಅನಿರಿಕ್ಷಿತ ಮತ್ತು ಇದ್ವಕ್ಕಿದ್ದಂತೆ ಆಕ್ರಮಿಸಿಕೊಂಡ ಆಘಾತವೆಂದು ಅಂದು ಕೊಳ್ಳುತ್ತವೆ. ಆದರೆ ಇಂಥಹ ಅಪಾಯಗಳನ್ನು ಮುಂಚಿತವಾಗಿಯೇ ಮನಗಂಡ ಅನೇಕ ಪಕ್ಷಿ ಪ್ರಾಣಿಗಳು ನಮಗೆ ಅನೇಕ ಸೂಚನೆಗಳನ್ನು ನೀಡುತ್ತವೆ. ನಾವು ಗಮನಿಸುವುದೇ ಇಲ್ಲ. ಈಗ ನೋಡಿ ಪ್ರಾಣಿ, ಪಕ್ಷಿ, ಜಲಚರಗಳು ಅಪಾಯಗಳ ಮುನ್ಸೂಚನೆಯನ್ನು ಹೀಗೆ ನೀಡುತ್ತದೆ. (ವೈಜ್ಞಾನಿಕವಾಗಿ ಕಂಡು ಹಿಡಿಯಲಾಗಿದೆ.) ಹಾವು ಮತ್ತು ಇಲಿಗಳು ತಮ್ಮ ಬಿಲಗಳನ್ನು ಬಿಟ್ಟು ದಿಕ್ಕೆಟ್ಟು ಓಡುತ್ತವೆ. ಮೀನುಗಳು ನೀರಿನಿಂದ ಹಾರುತ್ತವೆ. ಆಕ್ವೇರಿಯಂ ಮೀನುಗಳು ಡಿಕ್ಕಿ ಹೊಡೆಯುತ್ತವೆ. ಆಮೆಗಳು ಪಲ್ಟಿ ಹೊಡೆಯುತ್ತ ಧಾವಿಸುತ್ತದೆ. ದನ, ಕರು, ಕುರಿ, ಮತ್ತು ಕುದುರೆಗಳು ತಾವು ಇರುವ ಸ್ಥಳಕ್ಕೆ ಹೋಗುವದಿಲ್ಲ, ಕೋಳಿಮರಿಗಳು ಗಿಡ ಏರುತ್ತವೆ. ಬಾತು ಕೋಳಿಗಳು ನೀರಿಗೆ ಹೋಗಲು ನಿರಾಕರಿಸುತ್ತವೆ. ನಾಯಿಗಳು ವಿನಾಕಾರಣ ಬೊಗಳುತ್ತವೆ, ಹಂದಿಗಳು ಪರಸ್ಪರ ಕಚ್ಚಾಡುತ್ತವೆ. ಜಿಂಕೆಗಳು ದಿಕ್ಕೆಟ್ಟು ಓಡುತ್ತವೆ ಮತ್ತು ಜಿರಳೆಗಳು ವೃತ್ತಾಕಾರವಾಗಿ ಸುತ್ತುತ್ತವೆ. ಇದೆಲ್ಲ ಕ್ರಿಯೆ ನಡೆಯುವದು ಭೂಕಂಪದ ಮುನ್ಸೂಚನೆಯನ್ನು ತಿಳಿಸುತ್ತದೆ. ಜ್ವಾಲಾಮುಖಿ, ಬಿರುಗಾಳಿ, ಅಥವಾ ನೈಸರ್‍ಗಿಕ ವಿಕೋಪಗಳಾದರೆ, ಜೆಲ್ಲಿ ಮೀನು ೧೦-೧೫ ಗಂಟೆಗಳ ಮೊದಲೇ ಬಿರುಗಾಳಿಯ ಮುನ್ಸೂಚನ ಅರಿಯುತ್ತದೆ. ಆದ್ದರಿಂದ ಸಮುದ್ರ ದಂಡೆಯಿಂದ ಸಮುದ್ರದಾಳಕ್ಕೆ ಹೋಗುತ್ತದೆ. ಕೇಡುಗಾಲ ಬಂದಾಗ ಅದನ್ನರಿತ ಮೀನು ಸಮುದ್ರದಾಳದ ಮೀನು ನೀರಿನ ಮೇಲೆ ಬರುತ್ತದೆ. ಆರ್‍ಕ್ಟಿಕ್ ಪ್ರದೇಶದಲ್ಲಿ ವಾಸಿಸುವ ಟಾರಾಮಿಗಾನ್ ಎಂಬ ಹಕ್ಕಿಯನ್ನು ಪಕ್ಷಿ ಸಂಕುಲದ ಜೋತಿಷಿ ಎಂದೇ ಗುರುತಿಸಲಾಗುತ್ತದೆ. ಏಕೆಂದರೆ ತನ್ನ ಪರಿಸರದಲ್ಲಿ ಮುಂದೆ ಆಗಲಿರುವ ಬದಲಾವಣೆಗಳನ್ನು ಗುರುತಿಸುತ್ತದೆ. ವೈಪರಿತ್ಯವಾದ ಸೂಚನೆಗಳೆನಾದರೂ ತಿಳಿದರೆ ಅಲ್ಲಿಂದ ಜಾಗ ಖಾಲಿಮಾಡಿ ಬಿಡುತ್ತವೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...