ಜೈವಿಕ ಡಿಸೆಲ್ – ಹೊಂಗೆ ಎಣ್ಣೆ

ಜೈವಿಕ ಡಿಸೆಲ್ – ಹೊಂಗೆ ಎಣ್ಣೆ

ನಮ್ಮ ದೇಶದಲ್ಲಿ ಪೆಟ್ರೋಲ್, ಡಿಸೆಲ್ ಆಮದಿನ ಮೇಲೆ ಅಪಾರ ಪ್ರಮಾಣದ ವಿದೇಶಿ ವಿನಿಮಯ ವ್ಯಚ್ಚವಾಗುತ್ತದೆ. ಇದರಿಂದ ದೇಶದ ಸಮಗ್ರ ಅಭಿವೃದ್ಧಿಯ ಮೇಲೆ ಗಂಭೀರ ಪರಿಣಾಮಗಳು ಬೀರುತ್ತವೆ. ಇದಕ್ಕಿಂತಲೂ ಮಿಗಿಲಾಗಿ ವಾಯು ಮಾಲಿನ್ಯ, ಪರಿಸರ ಮಾಲಿನ್ಯವನ್ನು ನಾವೇ ತಂದು ಕೊಂಡಂತಾಗುತ್ತದೆ. ಇದೆಲ್ಲ ಸಮಸ್ಯೆಗಳಿಗೆ ಮಾರ್‍ಗೋಪಾಯ ಕಂಡು ಹಿಡಿಯಲಾಗಿದೆ. ಪೆಟ್ರೋಲಿಯಂ ಇಂಧನಗಳ ಬದಲಿಗೆ ಸಸ್ಯಗಳಿಂದ ಉತ್ಪತ್ತಿಯಾಗುವ ಜೈವಿಕ ಇಂಧನವನ್ನು ಬಳಸುವುದು. ಹೀಗೆ ಹಲವಾರು ಸಸ್ಯಗಳ ಎಣ್ಣೆಗಳನ್ನು ಬದಲಿ ಇಂಧನವಾಗಿ ಬಳಸಬಹುದುದಾಗಿದೆ. ಇವುಗಳಲ್ಲಿ ಹೊಂಗೆ ಎಣ್ಣೆ ಪ್ರಮುಖವಾಗುತ್ತದೆ. ಬಹು ಉಪಯೋಗಿ ಹೊಂಗೆಮರ ರೈತರಿಗೆ ಉಪಕಾರಿಯಾಗಿದೆ. ಈ ಮರವು ದೇಶದೆಲ್ಲೆಡೆ ಬೆಳೆಯುತ್ತದೆ. ಹೆಚ್ಚಾಗಿ ಮಳೆ ಕಡಿಮೆ ಬೀಳುವ ಎಲ್ಲ ತರಹದ ಭೂಮಿಗಳಲ್ಲಿ ಹೇರಳವಾಗಿ ಹುಲುಸಾಗಿ, ಬೆಳೆಯುತ್ತದೆ. ಈ ಹೊಂಗೆಮರದ ಶಾಸ್ತ್ರೀಯ ಹೆಸರು “ಪೊಂಗೆಮಿಯಾ ಪಿನ್ನೇಟಿ” ಎಂದು ಕರೆಯುತ್ತಿದ್ದು, ಇದರ ಬೀಜದಿಂದ ಬರುವ ಎಣ್ಣೆಯನ್ನು ಸಾಂಪ್ರದಾಯಿಕ ದೀಪ ಬೆಳೆಗಿಸಲು ಔಷಧಿ ರೂಪದಲ್ಲಿ ಉಪಯೋಗಿಸುತ್ತಾರೆ. ಇದರ ಎಣ್ಣೆಯನ್ನು ಡಿಸೆಲ್‌ಗೆ ಬದಲಾಗಿ ಬಳಸುವ ಸಂಶೋಧನೆ ಯಶಸ್ವಿಯಾಗಿದೆ. ಜತೆಗೆ ದೇಶಿ ತಯಾರಿಕೆಯುಳ್ಳ ಬಹು ಉಪಯೋಗಿ ವಸ್ತು ಕೂಡ ಆಗಿದೆ ಎಂದು ವಿಜ್ಞಾನಿಗಳ ಅಭಿಪ್ರಾಯ. ಕಾರು, ಟ್ರಾಕ್ಟರ್, ಗಿರಣಿಗಳಿಗೆ ಈ ಎಣ್ಣೆಯನ್ನು ಹಾಕಿ ಓಡಿಸಬಹುದು. ಇದಕ್ಕೆ “ಜೈವಿಕ ಡಿಸೆಲ್” ಎಂದೇ ಕರೆಯುತ್ತಾರೆ.

ಈ ಹೊಂಗೆಮರಗಳನ್ನು ನಮ್ಮ ರೈತರು ತಮ್ಮ ಜಮೀನುಗಳ ಬದುಗಳಲ್ಲಿ ಬೆಳೆಸಬಹುದು. ದಾರಿಯುದ್ದಕ್ಕೂ ಹಾಕಬಹುದು. ಒಳ್ಳೆಯ ನೆರಳಿನ ಮರಕೂಡ. ಇದರ ಎಣ್ಣೆಯಿಂದ ಕೃಷಿ ಆಧಾರಿತ ಸಣ್ಣಸಣ್ಣ ಕೈಗಾರಿಕೆಗಳಿಗೆ ಉಪಯೋಗಿಸಲು ಇತ್ತೀಚೆಗೆ ಹೆಚ್ಚಿನ ಮಹತ್ವ ಬರುತ್ತಿದೆ.

ಡಿಸೆಲ್‌ಗೆ ಬದಲಾಗಿ ಈ ಎಣ್ಣೆಯನ್ನು ಬಳೆಸಿದರೆ ದುಬಾರಿ ಹಣ ನೀಡಿ, ಪೆಟ್ರೋಲ್ ಡಿಸೆಲ್‌ ತರಬೇಕಿಲ್ಲ. ಗ್ರಾಮೀಣ ಕೈಗಾರಿಕೆಗಳಲ್ಲಿಯೇ ಈ ಎಣ್ಣೆಯನ್ನು ತಯಾರಿಸಬಹುದು. ಕೃಷಿ ಕಾರ್‍ಯಗಳು ಸುಲಭವಾಗಿ, ಸಮಯ ಉಳಿಯುತ್ತದೆ. ಹೊಂಗೆ ಎಣ್ಣೆ ತೆಗೆದ ನಂತರ ಉಳಿಯುವ ಹೂಂಗೆಹಿಂಡಿ ಜಮೀನುಗಳಿಗೆ ಉತ್ತಮ ಸಾವಯವ ಗೊಬ್ಬರವಾಗುತ್ತದೆ. ಇಳುವರಿ ಕೂಡ ಹೆಚ್ಚಾಗುತ್ತದೆ. ಹೊಂಗೆ ಹಿಂಡಿ ಬಳಸುವುದರಿಂದ ಮಣ್ಣಿನ ಫಲವತ್ತತೆ ಹೆಚ್ಚಾಗುತ್ತದೆ. ತೇವಾಂಶ ಕೀಟನಾಶಕವಾಗಿಯೂ ಕೆಲಸ ಮಾಡುತ್ತದೆ ಮತ್ತು ಮಣ್ಣಿನ ಸಂಪೂರ್‍ಣ ಆರೋಗ್ಯ ಕಾಪಾಡುತ್ತದೆ. ರಸಗೂಬ್ಬರಕ್ಕಾಗಿ ಮಾಡುತ್ತಿದ್ದ ವೆಚ್ಚ ಕಡಿಮೆಯಾಗುತ್ತದೆ.

ಹೊಂಗೆ ಎಣ್ಣೆಯಿಂದ ಉಗಳುವ ಹೊಗೆಯಲ್ಲಿ ವಿಷಾಧಾರಿತ ಆಮ್ಲಗಳು ಕಡಿಮೆ ಇರುತ್ತವೆ ಎಂದು ಕಂಡು ಹಿಡಿಯಲಾಗಿದೆ. ವಾಯುಮಾಲಿನ್ಯ ಕಡಿಮೆಯಾಗಿ ಆರೋಗ್ಯಕರ ಪರಿಸರ ನಿರ್‍ಮಾಣವಾಗುತ್ತದೆ. ಈ ಸತ್ಯವನ್ನು ನಮ್ಮ ವಿದ್ಯಾವಂತ ರೈತರು, ಪ್ರಗತಿಪರ ಕೃಷಿಕರು ಚಿಂತನೆ ಮಾಡಿ ಹೊಂಗೆ ಎಣ್ಣೆಯಿಂದಾಗುವ ಮಹತ್ವವನ್ನು ಅರಿಯಬೇಕಿದೆ. *****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪಾತರಗಿತ್ತಿಗೆ
Next post ಹಿಂಬಳಿ ಮುಂಬಳಿ

ಸಣ್ಣ ಕತೆ

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…