Home / ಕವನ / ಕವಿತೆ / ಅಡಿಕೆ ಆಡುವ ಹಾಡು

ಅಡಿಕೆ ಆಡುವ ಹಾಡು

ಐದು ಅಕ್ಷರದಿಂದ ತೆಯದು ಗಂಧಾಽದಿಂದ|
ಮಲ್ಲಿಗ್ಹೂವಿಽನ ಕ್ರಮಽದಿಂದ||
ಮಲ್ಲಿಗ್ಹೂವಿಽನ ಕ್ರಮದಿಂದ ತಂಗೆಮ ತನ್ನ|
ರಾಯರ ಶೀಪಾದಾಽ ತೊಳಂದಾಳ ||೧||

ರಾಯರ ಮಗಳ ಬಂಽದು ಪಾದಪೂಜಿ ಮಾಡಟಿಸಗೆ|
ಪಾದಲಿ ಕಂಡಾಳಽ ಪದಮವ||
ಪಾದಲಿ ಕಂಡಾಽಳೆ ಪದಮವ ರಾಯಿರ ನಿಮಗ|
ಆನಿ ಏರಂಥಾ ಬಲಽ ಬಂದ ||೨||

ಶಟ್ಟೆವರ ಮಗಳ ಬಂಽಮ ಬಟ್ಟ್‌ ಪೂಜಿ ಮಾಽಡಟಿಗೆ|
ಬಟ್ಟಿಲಿ ಕಂಡಾಳಽ ಪದಽಮಽವ||
ಬಟ್ಟಿಲಿ ಕಂಡಾಽಳ ಪದಮವ ರಾಯರ ನಿಮಗ|
ಮಂಚ ಏರಂಥಾಽ ಬಲಽ ಬಂದ ||೩||
* * *

ಹೆತ್ತೂರ ರಾಽಜ್ಯ ನಿಮ್ಮಪ್ಪ ಆಳಿದರೇನ|
ಒಂಕಿಗಿ ನಮ್ಮ ಕಾಲಽ ತೊಳಽದೆಲ್ಲ||
ಒಂಕಿಗಿ ನಿಮ ಕಾಽಲ ನಾವ್ಯಾಕ ತೊಳಿಯುನು ಧೊರಿಯ|
ಪ್ರೇಮ ಬಲ್ಲವರಽ ಗುಣಕಾಗಿ ||೪||

ಎಂಟೂರ ರಾಜ್ಯ ನಿಮ್ಮಣ್ಣ ಆಳಿದರೇನ|
ಸರಗಿಗಿ ನಮ ಕಾಲಽ ತೊಳಽದೆಲ್ಲ||
ಸರಗಿಗಿ ನಿಮ ಕಾಽಲ ನಾವ್ಯಾಕ ತೊಳೆಯುನು ಧೊರಿಯ|
ಚಿತ್ತ ಬಲ್ಲವರಽ ಗುಣಾಕಾಽಗಿ ||೫||

ಆರೂರ ರಾಽಜ್ಯ ನಿಮ ತಮ್ಮ ಆಳಿದರೇನ|
ನತ್ತಿಗಿ ನಮ ಕಾಲ ತೊಳಽದೆಲ್ಲ|
ನೆತ್ತಿಗಿ ನಿಮ ಕಾಲ ನಾವ್ಯಾಕ ತೊಳೆಯುನು ಧೊರಿಯ|
ಮುತ್ತೈೈದಿತನಽ ಪಡಽದೇವ ||೬||
* * *

ಬಾಳಿಯ ಕಾಯಾಂಽಗ ಬಾಗಿ ಬಂದಳ ಬಾಲಿ|
ಭಾಗ ಕೊಡು ರಾಯಾಽ ಎಡಽದಲ್ಲಿ||
ಭಾಗ ಕೊಡು ರಾಽಯ ಎಡದಲಿ ಸಾವಿರದ|
ಮಾಣೀಕ್ಹೇರವರಽ ಮಗಽಳೀಗಿ ||೭||

ನಿಂಬಿ ಕಾಯ್ಹಾಂಽಗ ತುಂಬಿ ಬಂದಳ ಬಾಲಿ|
ಇಂಬ ಕೊಡು ರಾಯಾಽ ಎಡಽದಲ್ಲಿ||
ಇಂಬ ಕೊಡು ರಾಽಯ ಎಡದಲ್ಲಿ ಸಾವಿರದ|
ಒಜ್ಜಿರ್‍ಹೇರವರಽ ಮಗಳೀಗಿ ||೮||
* * *

ರಾಜರಾಜರು ಕೂಽಡಿ ರಾಜೆಲ್ಲ ಹುಡುಕಿದರ|
ಮತ್ತೆಲ್ಲಿ ತಂದ್ಯೊಽ ಚೆಲಽವೀನ||
ಮತ್ತೆಲ್ಲಿ ತಂದ್ಯೋ ಚೆಲವೀನ ಹಲಸಂಗಿ|
ಆಗರದಾಗಿತ್ತೊಂದರಽಗಿಣಿಯ ||೯||

ಶೆಟ್ಟಿ ಶೆಟ್ಟೆರು ಕೂಽಡಿ ದಿಕ್ಕೆಲ್ಲಾ ಹುದುಕಿದರ|
ಮತ್ತೆಲ್ಲಿ ತಂದ್ಯೊಽ ಚೆಲಽವಿನ||
ಮತ್ತೆಲ್ಲಿ ತಂಜ್ಯೊ ಚೆಲವೀನ ಹಲಸಂಗಿ|
ಬಾಳಿ ಬನೆದಾನೊಂದರಽಗಿಣಿಯ ||೧೦||
*****

ವಧುವರರಿಗೆ ಸರ್ವಜನರು ಕೂಡಿ ಅಕ್ಕೀಕಾಳು (ಅಕ್ಷತೆ) ಒಗೆದ ಮೇಲೆ ತುಸು ಹೊತ್ತಿನಲ್ಲಿ ಅವರಿಂದ ನಗೆಯಾಟವನ್ನು ಆಡಿಸುತ್ತಾರೆ. ಆಗ ಒಬ್ಬರು ಅಡಿಕೆಯನ್ನು ಗಟ್ಟಿಯಾಗಿ ಹಿಡಿಯಬೇಕು; ಇನ್ನೊಬ್ಬರು ಅದನ್ನು ಬಿಡಿಸಿಕೊಳ್ಳಬೇಕು. ಆಗ ಸುತ್ತಮುತ್ತಲಿನ ಹೆಣ್ಣುಮಕ್ಕಳು ಈ ಹಾಡನ್ನು ಹಾಡುವರು.

ಛಂದಸ್ಸು:- ತ್ರಿಪದಿ.

ಶಬ್ದಪ್ರಯೋಗಗಳು:- ಐದು ಅಕ್ಷರ=ಶಿವಪಾರ್ವತಿ ಎಂಬ ಐದು ಅಕ್ಷರಗಳಾಗಿರಬಹುದು. ಮಲ್ಲಿಗ್ಹೂವಿನ ಕ್ರಮದಿಂದ= (ಅಡಿಗಳು) ಮಲ್ಲಿಗೆಯಂತೆ ಮೃದುವಾಗಿವೆಯೆಂದು ಭಾವಿಸಿ. ಪಾದಲಿ=ಪಾದದಲ್ಲಿ. ಪದಮ=ಪದ್ಮಚಿಹ್ನ. ಬಲಬಂದು=ಬಲವು ಬರಲಿ. ಬಟ್ಟಲಿ=ಬೆರಳಲ್ಲಿ. ಒಂಕಿ=ತೋಳಿನ ಆಭರಣ. ಸರಗಿ=ಕೊರಳಿನ ಆಭರಣ. ಕಾಯಾಂಗ-ಕಾಯಿಯಂತೆ. ಭಾಗ=ಸ್ಥಳ.

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...