Home / ಕವನ / ಕವಿತೆ / ಅಡಿಕೆ ಆಡುವ ಹಾಡು

ಅಡಿಕೆ ಆಡುವ ಹಾಡು

ಐದು ಅಕ್ಷರದಿಂದ ತೆಯದು ಗಂಧಾಽದಿಂದ|
ಮಲ್ಲಿಗ್ಹೂವಿಽನ ಕ್ರಮಽದಿಂದ||
ಮಲ್ಲಿಗ್ಹೂವಿಽನ ಕ್ರಮದಿಂದ ತಂಗೆಮ ತನ್ನ|
ರಾಯರ ಶೀಪಾದಾಽ ತೊಳಂದಾಳ ||೧||

ರಾಯರ ಮಗಳ ಬಂಽದು ಪಾದಪೂಜಿ ಮಾಡಟಿಸಗೆ|
ಪಾದಲಿ ಕಂಡಾಳಽ ಪದಮವ||
ಪಾದಲಿ ಕಂಡಾಽಳೆ ಪದಮವ ರಾಯಿರ ನಿಮಗ|
ಆನಿ ಏರಂಥಾ ಬಲಽ ಬಂದ ||೨||

ಶಟ್ಟೆವರ ಮಗಳ ಬಂಽಮ ಬಟ್ಟ್‌ ಪೂಜಿ ಮಾಽಡಟಿಗೆ|
ಬಟ್ಟಿಲಿ ಕಂಡಾಳಽ ಪದಽಮಽವ||
ಬಟ್ಟಿಲಿ ಕಂಡಾಽಳ ಪದಮವ ರಾಯರ ನಿಮಗ|
ಮಂಚ ಏರಂಥಾಽ ಬಲಽ ಬಂದ ||೩||
* * *

ಹೆತ್ತೂರ ರಾಽಜ್ಯ ನಿಮ್ಮಪ್ಪ ಆಳಿದರೇನ|
ಒಂಕಿಗಿ ನಮ್ಮ ಕಾಲಽ ತೊಳಽದೆಲ್ಲ||
ಒಂಕಿಗಿ ನಿಮ ಕಾಽಲ ನಾವ್ಯಾಕ ತೊಳಿಯುನು ಧೊರಿಯ|
ಪ್ರೇಮ ಬಲ್ಲವರಽ ಗುಣಕಾಗಿ ||೪||

ಎಂಟೂರ ರಾಜ್ಯ ನಿಮ್ಮಣ್ಣ ಆಳಿದರೇನ|
ಸರಗಿಗಿ ನಮ ಕಾಲಽ ತೊಳಽದೆಲ್ಲ||
ಸರಗಿಗಿ ನಿಮ ಕಾಽಲ ನಾವ್ಯಾಕ ತೊಳೆಯುನು ಧೊರಿಯ|
ಚಿತ್ತ ಬಲ್ಲವರಽ ಗುಣಾಕಾಽಗಿ ||೫||

ಆರೂರ ರಾಽಜ್ಯ ನಿಮ ತಮ್ಮ ಆಳಿದರೇನ|
ನತ್ತಿಗಿ ನಮ ಕಾಲ ತೊಳಽದೆಲ್ಲ|
ನೆತ್ತಿಗಿ ನಿಮ ಕಾಲ ನಾವ್ಯಾಕ ತೊಳೆಯುನು ಧೊರಿಯ|
ಮುತ್ತೈೈದಿತನಽ ಪಡಽದೇವ ||೬||
* * *

ಬಾಳಿಯ ಕಾಯಾಂಽಗ ಬಾಗಿ ಬಂದಳ ಬಾಲಿ|
ಭಾಗ ಕೊಡು ರಾಯಾಽ ಎಡಽದಲ್ಲಿ||
ಭಾಗ ಕೊಡು ರಾಽಯ ಎಡದಲಿ ಸಾವಿರದ|
ಮಾಣೀಕ್ಹೇರವರಽ ಮಗಽಳೀಗಿ ||೭||

ನಿಂಬಿ ಕಾಯ್ಹಾಂಽಗ ತುಂಬಿ ಬಂದಳ ಬಾಲಿ|
ಇಂಬ ಕೊಡು ರಾಯಾಽ ಎಡಽದಲ್ಲಿ||
ಇಂಬ ಕೊಡು ರಾಽಯ ಎಡದಲ್ಲಿ ಸಾವಿರದ|
ಒಜ್ಜಿರ್‍ಹೇರವರಽ ಮಗಳೀಗಿ ||೮||
* * *

ರಾಜರಾಜರು ಕೂಽಡಿ ರಾಜೆಲ್ಲ ಹುಡುಕಿದರ|
ಮತ್ತೆಲ್ಲಿ ತಂದ್ಯೊಽ ಚೆಲಽವೀನ||
ಮತ್ತೆಲ್ಲಿ ತಂದ್ಯೋ ಚೆಲವೀನ ಹಲಸಂಗಿ|
ಆಗರದಾಗಿತ್ತೊಂದರಽಗಿಣಿಯ ||೯||

ಶೆಟ್ಟಿ ಶೆಟ್ಟೆರು ಕೂಽಡಿ ದಿಕ್ಕೆಲ್ಲಾ ಹುದುಕಿದರ|
ಮತ್ತೆಲ್ಲಿ ತಂದ್ಯೊಽ ಚೆಲಽವಿನ||
ಮತ್ತೆಲ್ಲಿ ತಂಜ್ಯೊ ಚೆಲವೀನ ಹಲಸಂಗಿ|
ಬಾಳಿ ಬನೆದಾನೊಂದರಽಗಿಣಿಯ ||೧೦||
*****

ವಧುವರರಿಗೆ ಸರ್ವಜನರು ಕೂಡಿ ಅಕ್ಕೀಕಾಳು (ಅಕ್ಷತೆ) ಒಗೆದ ಮೇಲೆ ತುಸು ಹೊತ್ತಿನಲ್ಲಿ ಅವರಿಂದ ನಗೆಯಾಟವನ್ನು ಆಡಿಸುತ್ತಾರೆ. ಆಗ ಒಬ್ಬರು ಅಡಿಕೆಯನ್ನು ಗಟ್ಟಿಯಾಗಿ ಹಿಡಿಯಬೇಕು; ಇನ್ನೊಬ್ಬರು ಅದನ್ನು ಬಿಡಿಸಿಕೊಳ್ಳಬೇಕು. ಆಗ ಸುತ್ತಮುತ್ತಲಿನ ಹೆಣ್ಣುಮಕ್ಕಳು ಈ ಹಾಡನ್ನು ಹಾಡುವರು.

ಛಂದಸ್ಸು:- ತ್ರಿಪದಿ.

ಶಬ್ದಪ್ರಯೋಗಗಳು:- ಐದು ಅಕ್ಷರ=ಶಿವಪಾರ್ವತಿ ಎಂಬ ಐದು ಅಕ್ಷರಗಳಾಗಿರಬಹುದು. ಮಲ್ಲಿಗ್ಹೂವಿನ ಕ್ರಮದಿಂದ= (ಅಡಿಗಳು) ಮಲ್ಲಿಗೆಯಂತೆ ಮೃದುವಾಗಿವೆಯೆಂದು ಭಾವಿಸಿ. ಪಾದಲಿ=ಪಾದದಲ್ಲಿ. ಪದಮ=ಪದ್ಮಚಿಹ್ನ. ಬಲಬಂದು=ಬಲವು ಬರಲಿ. ಬಟ್ಟಲಿ=ಬೆರಳಲ್ಲಿ. ಒಂಕಿ=ತೋಳಿನ ಆಭರಣ. ಸರಗಿ=ಕೊರಳಿನ ಆಭರಣ. ಕಾಯಾಂಗ-ಕಾಯಿಯಂತೆ. ಭಾಗ=ಸ್ಥಳ.

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...