ಅಡಿಕೆ ಆಡುವ ಹಾಡು

ಐದು ಅಕ್ಷರದಿಂದ ತೆಯದು ಗಂಧಾಽದಿಂದ|
ಮಲ್ಲಿಗ್ಹೂವಿಽನ ಕ್ರಮಽದಿಂದ||
ಮಲ್ಲಿಗ್ಹೂವಿಽನ ಕ್ರಮದಿಂದ ತಂಗೆಮ ತನ್ನ|
ರಾಯರ ಶೀಪಾದಾಽ ತೊಳಂದಾಳ ||೧||

ರಾಯರ ಮಗಳ ಬಂಽದು ಪಾದಪೂಜಿ ಮಾಡಟಿಸಗೆ|
ಪಾದಲಿ ಕಂಡಾಳಽ ಪದಮವ||
ಪಾದಲಿ ಕಂಡಾಽಳೆ ಪದಮವ ರಾಯಿರ ನಿಮಗ|
ಆನಿ ಏರಂಥಾ ಬಲಽ ಬಂದ ||೨||

ಶಟ್ಟೆವರ ಮಗಳ ಬಂಽಮ ಬಟ್ಟ್‌ ಪೂಜಿ ಮಾಽಡಟಿಗೆ|
ಬಟ್ಟಿಲಿ ಕಂಡಾಳಽ ಪದಽಮಽವ||
ಬಟ್ಟಿಲಿ ಕಂಡಾಽಳ ಪದಮವ ರಾಯರ ನಿಮಗ|
ಮಂಚ ಏರಂಥಾಽ ಬಲಽ ಬಂದ ||೩||
* * *

ಹೆತ್ತೂರ ರಾಽಜ್ಯ ನಿಮ್ಮಪ್ಪ ಆಳಿದರೇನ|
ಒಂಕಿಗಿ ನಮ್ಮ ಕಾಲಽ ತೊಳಽದೆಲ್ಲ||
ಒಂಕಿಗಿ ನಿಮ ಕಾಽಲ ನಾವ್ಯಾಕ ತೊಳಿಯುನು ಧೊರಿಯ|
ಪ್ರೇಮ ಬಲ್ಲವರಽ ಗುಣಕಾಗಿ ||೪||

ಎಂಟೂರ ರಾಜ್ಯ ನಿಮ್ಮಣ್ಣ ಆಳಿದರೇನ|
ಸರಗಿಗಿ ನಮ ಕಾಲಽ ತೊಳಽದೆಲ್ಲ||
ಸರಗಿಗಿ ನಿಮ ಕಾಽಲ ನಾವ್ಯಾಕ ತೊಳೆಯುನು ಧೊರಿಯ|
ಚಿತ್ತ ಬಲ್ಲವರಽ ಗುಣಾಕಾಽಗಿ ||೫||

ಆರೂರ ರಾಽಜ್ಯ ನಿಮ ತಮ್ಮ ಆಳಿದರೇನ|
ನತ್ತಿಗಿ ನಮ ಕಾಲ ತೊಳಽದೆಲ್ಲ|
ನೆತ್ತಿಗಿ ನಿಮ ಕಾಲ ನಾವ್ಯಾಕ ತೊಳೆಯುನು ಧೊರಿಯ|
ಮುತ್ತೈೈದಿತನಽ ಪಡಽದೇವ ||೬||
* * *

ಬಾಳಿಯ ಕಾಯಾಂಽಗ ಬಾಗಿ ಬಂದಳ ಬಾಲಿ|
ಭಾಗ ಕೊಡು ರಾಯಾಽ ಎಡಽದಲ್ಲಿ||
ಭಾಗ ಕೊಡು ರಾಽಯ ಎಡದಲಿ ಸಾವಿರದ|
ಮಾಣೀಕ್ಹೇರವರಽ ಮಗಽಳೀಗಿ ||೭||

ನಿಂಬಿ ಕಾಯ್ಹಾಂಽಗ ತುಂಬಿ ಬಂದಳ ಬಾಲಿ|
ಇಂಬ ಕೊಡು ರಾಯಾಽ ಎಡಽದಲ್ಲಿ||
ಇಂಬ ಕೊಡು ರಾಽಯ ಎಡದಲ್ಲಿ ಸಾವಿರದ|
ಒಜ್ಜಿರ್‍ಹೇರವರಽ ಮಗಳೀಗಿ ||೮||
* * *

ರಾಜರಾಜರು ಕೂಽಡಿ ರಾಜೆಲ್ಲ ಹುಡುಕಿದರ|
ಮತ್ತೆಲ್ಲಿ ತಂದ್ಯೊಽ ಚೆಲಽವೀನ||
ಮತ್ತೆಲ್ಲಿ ತಂದ್ಯೋ ಚೆಲವೀನ ಹಲಸಂಗಿ|
ಆಗರದಾಗಿತ್ತೊಂದರಽಗಿಣಿಯ ||೯||

ಶೆಟ್ಟಿ ಶೆಟ್ಟೆರು ಕೂಽಡಿ ದಿಕ್ಕೆಲ್ಲಾ ಹುದುಕಿದರ|
ಮತ್ತೆಲ್ಲಿ ತಂದ್ಯೊಽ ಚೆಲಽವಿನ||
ಮತ್ತೆಲ್ಲಿ ತಂಜ್ಯೊ ಚೆಲವೀನ ಹಲಸಂಗಿ|
ಬಾಳಿ ಬನೆದಾನೊಂದರಽಗಿಣಿಯ ||೧೦||
*****

ವಧುವರರಿಗೆ ಸರ್ವಜನರು ಕೂಡಿ ಅಕ್ಕೀಕಾಳು (ಅಕ್ಷತೆ) ಒಗೆದ ಮೇಲೆ ತುಸು ಹೊತ್ತಿನಲ್ಲಿ ಅವರಿಂದ ನಗೆಯಾಟವನ್ನು ಆಡಿಸುತ್ತಾರೆ. ಆಗ ಒಬ್ಬರು ಅಡಿಕೆಯನ್ನು ಗಟ್ಟಿಯಾಗಿ ಹಿಡಿಯಬೇಕು; ಇನ್ನೊಬ್ಬರು ಅದನ್ನು ಬಿಡಿಸಿಕೊಳ್ಳಬೇಕು. ಆಗ ಸುತ್ತಮುತ್ತಲಿನ ಹೆಣ್ಣುಮಕ್ಕಳು ಈ ಹಾಡನ್ನು ಹಾಡುವರು.

ಛಂದಸ್ಸು:- ತ್ರಿಪದಿ.

ಶಬ್ದಪ್ರಯೋಗಗಳು:- ಐದು ಅಕ್ಷರ=ಶಿವಪಾರ್ವತಿ ಎಂಬ ಐದು ಅಕ್ಷರಗಳಾಗಿರಬಹುದು. ಮಲ್ಲಿಗ್ಹೂವಿನ ಕ್ರಮದಿಂದ= (ಅಡಿಗಳು) ಮಲ್ಲಿಗೆಯಂತೆ ಮೃದುವಾಗಿವೆಯೆಂದು ಭಾವಿಸಿ. ಪಾದಲಿ=ಪಾದದಲ್ಲಿ. ಪದಮ=ಪದ್ಮಚಿಹ್ನ. ಬಲಬಂದು=ಬಲವು ಬರಲಿ. ಬಟ್ಟಲಿ=ಬೆರಳಲ್ಲಿ. ಒಂಕಿ=ತೋಳಿನ ಆಭರಣ. ಸರಗಿ=ಕೊರಳಿನ ಆಭರಣ. ಕಾಯಾಂಗ-ಕಾಯಿಯಂತೆ. ಭಾಗ=ಸ್ಥಳ.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶಾಲೆಗೆ ಬಂದ ಚಿರತೆ
Next post ಹೋದ ಬಾಲ್ಯ

ಸಣ್ಣ ಕತೆ

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…