Home / ಕವನ / ಕವಿತೆ / ಅಡಿಕೆ ಆಡುವ ಹಾಡು

ಅಡಿಕೆ ಆಡುವ ಹಾಡು

ಐದು ಅಕ್ಷರದಿಂದ ತೆಯದು ಗಂಧಾಽದಿಂದ|
ಮಲ್ಲಿಗ್ಹೂವಿಽನ ಕ್ರಮಽದಿಂದ||
ಮಲ್ಲಿಗ್ಹೂವಿಽನ ಕ್ರಮದಿಂದ ತಂಗೆಮ ತನ್ನ|
ರಾಯರ ಶೀಪಾದಾಽ ತೊಳಂದಾಳ ||೧||

ರಾಯರ ಮಗಳ ಬಂಽದು ಪಾದಪೂಜಿ ಮಾಡಟಿಸಗೆ|
ಪಾದಲಿ ಕಂಡಾಳಽ ಪದಮವ||
ಪಾದಲಿ ಕಂಡಾಽಳೆ ಪದಮವ ರಾಯಿರ ನಿಮಗ|
ಆನಿ ಏರಂಥಾ ಬಲಽ ಬಂದ ||೨||

ಶಟ್ಟೆವರ ಮಗಳ ಬಂಽಮ ಬಟ್ಟ್‌ ಪೂಜಿ ಮಾಽಡಟಿಗೆ|
ಬಟ್ಟಿಲಿ ಕಂಡಾಳಽ ಪದಽಮಽವ||
ಬಟ್ಟಿಲಿ ಕಂಡಾಽಳ ಪದಮವ ರಾಯರ ನಿಮಗ|
ಮಂಚ ಏರಂಥಾಽ ಬಲಽ ಬಂದ ||೩||
* * *

ಹೆತ್ತೂರ ರಾಽಜ್ಯ ನಿಮ್ಮಪ್ಪ ಆಳಿದರೇನ|
ಒಂಕಿಗಿ ನಮ್ಮ ಕಾಲಽ ತೊಳಽದೆಲ್ಲ||
ಒಂಕಿಗಿ ನಿಮ ಕಾಽಲ ನಾವ್ಯಾಕ ತೊಳಿಯುನು ಧೊರಿಯ|
ಪ್ರೇಮ ಬಲ್ಲವರಽ ಗುಣಕಾಗಿ ||೪||

ಎಂಟೂರ ರಾಜ್ಯ ನಿಮ್ಮಣ್ಣ ಆಳಿದರೇನ|
ಸರಗಿಗಿ ನಮ ಕಾಲಽ ತೊಳಽದೆಲ್ಲ||
ಸರಗಿಗಿ ನಿಮ ಕಾಽಲ ನಾವ್ಯಾಕ ತೊಳೆಯುನು ಧೊರಿಯ|
ಚಿತ್ತ ಬಲ್ಲವರಽ ಗುಣಾಕಾಽಗಿ ||೫||

ಆರೂರ ರಾಽಜ್ಯ ನಿಮ ತಮ್ಮ ಆಳಿದರೇನ|
ನತ್ತಿಗಿ ನಮ ಕಾಲ ತೊಳಽದೆಲ್ಲ|
ನೆತ್ತಿಗಿ ನಿಮ ಕಾಲ ನಾವ್ಯಾಕ ತೊಳೆಯುನು ಧೊರಿಯ|
ಮುತ್ತೈೈದಿತನಽ ಪಡಽದೇವ ||೬||
* * *

ಬಾಳಿಯ ಕಾಯಾಂಽಗ ಬಾಗಿ ಬಂದಳ ಬಾಲಿ|
ಭಾಗ ಕೊಡು ರಾಯಾಽ ಎಡಽದಲ್ಲಿ||
ಭಾಗ ಕೊಡು ರಾಽಯ ಎಡದಲಿ ಸಾವಿರದ|
ಮಾಣೀಕ್ಹೇರವರಽ ಮಗಽಳೀಗಿ ||೭||

ನಿಂಬಿ ಕಾಯ್ಹಾಂಽಗ ತುಂಬಿ ಬಂದಳ ಬಾಲಿ|
ಇಂಬ ಕೊಡು ರಾಯಾಽ ಎಡಽದಲ್ಲಿ||
ಇಂಬ ಕೊಡು ರಾಽಯ ಎಡದಲ್ಲಿ ಸಾವಿರದ|
ಒಜ್ಜಿರ್‍ಹೇರವರಽ ಮಗಳೀಗಿ ||೮||
* * *

ರಾಜರಾಜರು ಕೂಽಡಿ ರಾಜೆಲ್ಲ ಹುಡುಕಿದರ|
ಮತ್ತೆಲ್ಲಿ ತಂದ್ಯೊಽ ಚೆಲಽವೀನ||
ಮತ್ತೆಲ್ಲಿ ತಂದ್ಯೋ ಚೆಲವೀನ ಹಲಸಂಗಿ|
ಆಗರದಾಗಿತ್ತೊಂದರಽಗಿಣಿಯ ||೯||

ಶೆಟ್ಟಿ ಶೆಟ್ಟೆರು ಕೂಽಡಿ ದಿಕ್ಕೆಲ್ಲಾ ಹುದುಕಿದರ|
ಮತ್ತೆಲ್ಲಿ ತಂದ್ಯೊಽ ಚೆಲಽವಿನ||
ಮತ್ತೆಲ್ಲಿ ತಂಜ್ಯೊ ಚೆಲವೀನ ಹಲಸಂಗಿ|
ಬಾಳಿ ಬನೆದಾನೊಂದರಽಗಿಣಿಯ ||೧೦||
*****

ವಧುವರರಿಗೆ ಸರ್ವಜನರು ಕೂಡಿ ಅಕ್ಕೀಕಾಳು (ಅಕ್ಷತೆ) ಒಗೆದ ಮೇಲೆ ತುಸು ಹೊತ್ತಿನಲ್ಲಿ ಅವರಿಂದ ನಗೆಯಾಟವನ್ನು ಆಡಿಸುತ್ತಾರೆ. ಆಗ ಒಬ್ಬರು ಅಡಿಕೆಯನ್ನು ಗಟ್ಟಿಯಾಗಿ ಹಿಡಿಯಬೇಕು; ಇನ್ನೊಬ್ಬರು ಅದನ್ನು ಬಿಡಿಸಿಕೊಳ್ಳಬೇಕು. ಆಗ ಸುತ್ತಮುತ್ತಲಿನ ಹೆಣ್ಣುಮಕ್ಕಳು ಈ ಹಾಡನ್ನು ಹಾಡುವರು.

ಛಂದಸ್ಸು:- ತ್ರಿಪದಿ.

ಶಬ್ದಪ್ರಯೋಗಗಳು:- ಐದು ಅಕ್ಷರ=ಶಿವಪಾರ್ವತಿ ಎಂಬ ಐದು ಅಕ್ಷರಗಳಾಗಿರಬಹುದು. ಮಲ್ಲಿಗ್ಹೂವಿನ ಕ್ರಮದಿಂದ= (ಅಡಿಗಳು) ಮಲ್ಲಿಗೆಯಂತೆ ಮೃದುವಾಗಿವೆಯೆಂದು ಭಾವಿಸಿ. ಪಾದಲಿ=ಪಾದದಲ್ಲಿ. ಪದಮ=ಪದ್ಮಚಿಹ್ನ. ಬಲಬಂದು=ಬಲವು ಬರಲಿ. ಬಟ್ಟಲಿ=ಬೆರಳಲ್ಲಿ. ಒಂಕಿ=ತೋಳಿನ ಆಭರಣ. ಸರಗಿ=ಕೊರಳಿನ ಆಭರಣ. ಕಾಯಾಂಗ-ಕಾಯಿಯಂತೆ. ಭಾಗ=ಸ್ಥಳ.

Tagged:

Leave a Reply

Your email address will not be published. Required fields are marked *

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...