Home / ಕವನ / ಕವಿತೆ / ಹಿಂಬಳಿ ಮುಂಬಳಿ

ಹಿಂಬಳಿ ಮುಂಬಳಿ

ಹಿಂಬಳಿ ಮುಂಬಳಿ ಗಂಧದ ಗೀರಾ
ಹೊಂದಿಸಿ ಇಟ್ಟಾಳ ಛೆಂದ ಗಿರಾಕಿ
ಜಾತ ಮಲ್ಲಿಗಿ ಜಾಳಿಗಿ ದಂಡಿ
ವಾನ್ಯಾಡು ತುರುಬ ಒನಪಿಲಿ ಕಟ್ಟಿ
ಖನ್ನಿ ಕೋಮಽಲಿ ಹಸೀಗೇಳಽ ಸೋ ||೧||

ನೀರೆಯ ಬಾವುಲಿ ಲಿಗಿಲಿಗಿನಾಡುತ
ಕಾಲುಂಗ್ರ ಪಿಲ್ಲ್ಯಾ ಝಗಝಗ ಹೊಳೆವುತ
ಹೊನ್ನಾ-ಭರಣಾ ಹರಡಿಗಿ ಮಲಕಽ
ಹೊನ್ನ ಪುತ್ತಳಿ ರುಳಿ ಸರಿಗಿಟಗೊಂಡು
ಕೋಗಿಲ ಮದ್ದಾಽನೇ ಹೆಸಿಗೇಳಽ ಸೋ ||೨||

ಇದುರಿನ ಮನಿಯೆ ಬಿದರೊಂಕೆವರ
ಮನ್ನುಸಿದಾರ ಮನಿ ಹೊಕ್ಕವರ
ಹತ್ತು ಮಂದಿಲಿ ಪಂತಿಲಿ ಕುಂಡ್ರೋ
ಚಿತ್ತಬಲ್ಲಬೋ ಶಿವಶಂಕರಗ
ಚಿತ್ರಾಂಗದರಸಾ ಹಸೀಗೇಳೋ ಸೋ ||೩||

ನಿಲಗುದರೆಂಬೋ ತೇಜಿಯನೇರಿ
ಮದನಾರಿ ಬಂದು ಬಾಗಿಲ್ಗಿ ನಿಂತಽ
ವಾರಿಗಿ ಗೆಳೆದ್ಯಾರು ಒಡಗೊಂಡು ಕರದರ
ಬಾ ಎನ್ನ ಮಡಽದೀ ಹಸಿಗೇಳಽ ಸೋ ||೪||

ಇಂಜನ ಮಳಿಯ ಗಂಧದ ಗೀರ
ಇಂದ್ನಮ ತಂಗೆಮನ ಗಂಡನ ಸದರಽ
ಇಂದ್ರನ ಖಳಿಯುಳ ಚಂದ್ರನ ಮಗಳ
ಇಂದ ಮನ್ನ ಸರೇ ಶುಬಽದಿಂದ ಸೋ ||೫||
*****

ಈ ಹಾಡಿನಲ್ಲಿ ಮೊದಲಿನ ಎರಡು ನುಡಿಗಳಲ್ಲಿ ಕನ್ನೆಯ ಅಲಂಕಾರ ವರ್ಣನೆಯಿದೆ. ಮೂರನೆಯ ನುಡಿಯಲ್ಲಿ ವರನ ಘನವಂತಿಕೆಯನ್ನು ಹೇಳಿದೆ. ನಾಲ್ಕನೆಯ ಮತ್ತು ಐದನೆಯ ನುಡಿಗಳಲ್ಲಿ ಕನ್ನೆಯನ್ನು ಗೆಳತಿಯರು ಮನ್ನಿಸುತ್ತಾರೆ.

ಛಂದಸ್ಸು:- ಮಂದಾನಿಲ ರಗಳೆ.

ಶಬ್ದಪ್ರಯೋಗಗಳು:- ಗಿರಾಕಿ=ಹರದಿ (ಸುಂದರಿ). ವಾನ್ಯಾಡು ತುರಬ=ಅಲೆದಾಡುವ ಮುಡಿ. ವನಪಿಲೆ=ಒಯ್ಯಾರದಿಂದ. ಖನ್ನಿ=ಕನ್ನೆ. ಚಿತ್ತ ಒಲ್ಲಬೊ=ಚಿತ್ತವಲ್ಲಭ (ಪ್ರೀಯ). ನಿಲಗುದರಿ=ನಿಲುವಿಕೆಯುಳ್ಳೆ ಕುದುರೆ. ಮದನಾರಿ=ಯೌವನೆ. ಸದರ=ಸರಿಗದ್ದುಗೆ. ಇಂಜನ ಮಳಿಯ ಗಂಧದ ಗೀರ=ಭೋರಮಳೆಯ ಹಸಿಯ ಧಾರೆಗಳಂತೆ ಒಪ್ಪುವ ಗಂಧದ ಗೀರುಗಳು (ಕೈಗೆ).

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...