ಹಿಂಬಳಿ ಮುಂಬಳಿ

ಹಿಂಬಳಿ ಮುಂಬಳಿ ಗಂಧದ ಗೀರಾ
ಹೊಂದಿಸಿ ಇಟ್ಟಾಳ ಛೆಂದ ಗಿರಾಕಿ
ಜಾತ ಮಲ್ಲಿಗಿ ಜಾಳಿಗಿ ದಂಡಿ
ವಾನ್ಯಾಡು ತುರುಬ ಒನಪಿಲಿ ಕಟ್ಟಿ
ಖನ್ನಿ ಕೋಮಽಲಿ ಹಸೀಗೇಳಽ ಸೋ ||೧||

ನೀರೆಯ ಬಾವುಲಿ ಲಿಗಿಲಿಗಿನಾಡುತ
ಕಾಲುಂಗ್ರ ಪಿಲ್ಲ್ಯಾ ಝಗಝಗ ಹೊಳೆವುತ
ಹೊನ್ನಾ-ಭರಣಾ ಹರಡಿಗಿ ಮಲಕಽ
ಹೊನ್ನ ಪುತ್ತಳಿ ರುಳಿ ಸರಿಗಿಟಗೊಂಡು
ಕೋಗಿಲ ಮದ್ದಾಽನೇ ಹೆಸಿಗೇಳಽ ಸೋ ||೨||

ಇದುರಿನ ಮನಿಯೆ ಬಿದರೊಂಕೆವರ
ಮನ್ನುಸಿದಾರ ಮನಿ ಹೊಕ್ಕವರ
ಹತ್ತು ಮಂದಿಲಿ ಪಂತಿಲಿ ಕುಂಡ್ರೋ
ಚಿತ್ತಬಲ್ಲಬೋ ಶಿವಶಂಕರಗ
ಚಿತ್ರಾಂಗದರಸಾ ಹಸೀಗೇಳೋ ಸೋ ||೩||

ನಿಲಗುದರೆಂಬೋ ತೇಜಿಯನೇರಿ
ಮದನಾರಿ ಬಂದು ಬಾಗಿಲ್ಗಿ ನಿಂತಽ
ವಾರಿಗಿ ಗೆಳೆದ್ಯಾರು ಒಡಗೊಂಡು ಕರದರ
ಬಾ ಎನ್ನ ಮಡಽದೀ ಹಸಿಗೇಳಽ ಸೋ ||೪||

ಇಂಜನ ಮಳಿಯ ಗಂಧದ ಗೀರ
ಇಂದ್ನಮ ತಂಗೆಮನ ಗಂಡನ ಸದರಽ
ಇಂದ್ರನ ಖಳಿಯುಳ ಚಂದ್ರನ ಮಗಳ
ಇಂದ ಮನ್ನ ಸರೇ ಶುಬಽದಿಂದ ಸೋ ||೫||
*****

ಈ ಹಾಡಿನಲ್ಲಿ ಮೊದಲಿನ ಎರಡು ನುಡಿಗಳಲ್ಲಿ ಕನ್ನೆಯ ಅಲಂಕಾರ ವರ್ಣನೆಯಿದೆ. ಮೂರನೆಯ ನುಡಿಯಲ್ಲಿ ವರನ ಘನವಂತಿಕೆಯನ್ನು ಹೇಳಿದೆ. ನಾಲ್ಕನೆಯ ಮತ್ತು ಐದನೆಯ ನುಡಿಗಳಲ್ಲಿ ಕನ್ನೆಯನ್ನು ಗೆಳತಿಯರು ಮನ್ನಿಸುತ್ತಾರೆ.

ಛಂದಸ್ಸು:- ಮಂದಾನಿಲ ರಗಳೆ.

ಶಬ್ದಪ್ರಯೋಗಗಳು:- ಗಿರಾಕಿ=ಹರದಿ (ಸುಂದರಿ). ವಾನ್ಯಾಡು ತುರಬ=ಅಲೆದಾಡುವ ಮುಡಿ. ವನಪಿಲೆ=ಒಯ್ಯಾರದಿಂದ. ಖನ್ನಿ=ಕನ್ನೆ. ಚಿತ್ತ ಒಲ್ಲಬೊ=ಚಿತ್ತವಲ್ಲಭ (ಪ್ರೀಯ). ನಿಲಗುದರಿ=ನಿಲುವಿಕೆಯುಳ್ಳೆ ಕುದುರೆ. ಮದನಾರಿ=ಯೌವನೆ. ಸದರ=ಸರಿಗದ್ದುಗೆ. ಇಂಜನ ಮಳಿಯ ಗಂಧದ ಗೀರ=ಭೋರಮಳೆಯ ಹಸಿಯ ಧಾರೆಗಳಂತೆ ಒಪ್ಪುವ ಗಂಧದ ಗೀರುಗಳು (ಕೈಗೆ).

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜೈವಿಕ ಡಿಸೆಲ್ – ಹೊಂಗೆ ಎಣ್ಣೆ
Next post ನಿನ್ನ ನಾನರಿಯೆನೈ

ಸಣ್ಣ ಕತೆ

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…