Home / ಕವನ / ಕವಿತೆ / ಹಿಂಬಳಿ ಮುಂಬಳಿ

ಹಿಂಬಳಿ ಮುಂಬಳಿ

ಹಿಂಬಳಿ ಮುಂಬಳಿ ಗಂಧದ ಗೀರಾ
ಹೊಂದಿಸಿ ಇಟ್ಟಾಳ ಛೆಂದ ಗಿರಾಕಿ
ಜಾತ ಮಲ್ಲಿಗಿ ಜಾಳಿಗಿ ದಂಡಿ
ವಾನ್ಯಾಡು ತುರುಬ ಒನಪಿಲಿ ಕಟ್ಟಿ
ಖನ್ನಿ ಕೋಮಽಲಿ ಹಸೀಗೇಳಽ ಸೋ ||೧||

ನೀರೆಯ ಬಾವುಲಿ ಲಿಗಿಲಿಗಿನಾಡುತ
ಕಾಲುಂಗ್ರ ಪಿಲ್ಲ್ಯಾ ಝಗಝಗ ಹೊಳೆವುತ
ಹೊನ್ನಾ-ಭರಣಾ ಹರಡಿಗಿ ಮಲಕಽ
ಹೊನ್ನ ಪುತ್ತಳಿ ರುಳಿ ಸರಿಗಿಟಗೊಂಡು
ಕೋಗಿಲ ಮದ್ದಾಽನೇ ಹೆಸಿಗೇಳಽ ಸೋ ||೨||

ಇದುರಿನ ಮನಿಯೆ ಬಿದರೊಂಕೆವರ
ಮನ್ನುಸಿದಾರ ಮನಿ ಹೊಕ್ಕವರ
ಹತ್ತು ಮಂದಿಲಿ ಪಂತಿಲಿ ಕುಂಡ್ರೋ
ಚಿತ್ತಬಲ್ಲಬೋ ಶಿವಶಂಕರಗ
ಚಿತ್ರಾಂಗದರಸಾ ಹಸೀಗೇಳೋ ಸೋ ||೩||

ನಿಲಗುದರೆಂಬೋ ತೇಜಿಯನೇರಿ
ಮದನಾರಿ ಬಂದು ಬಾಗಿಲ್ಗಿ ನಿಂತಽ
ವಾರಿಗಿ ಗೆಳೆದ್ಯಾರು ಒಡಗೊಂಡು ಕರದರ
ಬಾ ಎನ್ನ ಮಡಽದೀ ಹಸಿಗೇಳಽ ಸೋ ||೪||

ಇಂಜನ ಮಳಿಯ ಗಂಧದ ಗೀರ
ಇಂದ್ನಮ ತಂಗೆಮನ ಗಂಡನ ಸದರಽ
ಇಂದ್ರನ ಖಳಿಯುಳ ಚಂದ್ರನ ಮಗಳ
ಇಂದ ಮನ್ನ ಸರೇ ಶುಬಽದಿಂದ ಸೋ ||೫||
*****

ಈ ಹಾಡಿನಲ್ಲಿ ಮೊದಲಿನ ಎರಡು ನುಡಿಗಳಲ್ಲಿ ಕನ್ನೆಯ ಅಲಂಕಾರ ವರ್ಣನೆಯಿದೆ. ಮೂರನೆಯ ನುಡಿಯಲ್ಲಿ ವರನ ಘನವಂತಿಕೆಯನ್ನು ಹೇಳಿದೆ. ನಾಲ್ಕನೆಯ ಮತ್ತು ಐದನೆಯ ನುಡಿಗಳಲ್ಲಿ ಕನ್ನೆಯನ್ನು ಗೆಳತಿಯರು ಮನ್ನಿಸುತ್ತಾರೆ.

ಛಂದಸ್ಸು:- ಮಂದಾನಿಲ ರಗಳೆ.

ಶಬ್ದಪ್ರಯೋಗಗಳು:- ಗಿರಾಕಿ=ಹರದಿ (ಸುಂದರಿ). ವಾನ್ಯಾಡು ತುರಬ=ಅಲೆದಾಡುವ ಮುಡಿ. ವನಪಿಲೆ=ಒಯ್ಯಾರದಿಂದ. ಖನ್ನಿ=ಕನ್ನೆ. ಚಿತ್ತ ಒಲ್ಲಬೊ=ಚಿತ್ತವಲ್ಲಭ (ಪ್ರೀಯ). ನಿಲಗುದರಿ=ನಿಲುವಿಕೆಯುಳ್ಳೆ ಕುದುರೆ. ಮದನಾರಿ=ಯೌವನೆ. ಸದರ=ಸರಿಗದ್ದುಗೆ. ಇಂಜನ ಮಳಿಯ ಗಂಧದ ಗೀರ=ಭೋರಮಳೆಯ ಹಸಿಯ ಧಾರೆಗಳಂತೆ ಒಪ್ಪುವ ಗಂಧದ ಗೀರುಗಳು (ಕೈಗೆ).

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್