Home / ಕವನ / ಕವಿತೆ / ಹಿಂಬಳಿ ಮುಂಬಳಿ

ಹಿಂಬಳಿ ಮುಂಬಳಿ

ಹಿಂಬಳಿ ಮುಂಬಳಿ ಗಂಧದ ಗೀರಾ
ಹೊಂದಿಸಿ ಇಟ್ಟಾಳ ಛೆಂದ ಗಿರಾಕಿ
ಜಾತ ಮಲ್ಲಿಗಿ ಜಾಳಿಗಿ ದಂಡಿ
ವಾನ್ಯಾಡು ತುರುಬ ಒನಪಿಲಿ ಕಟ್ಟಿ
ಖನ್ನಿ ಕೋಮಽಲಿ ಹಸೀಗೇಳಽ ಸೋ ||೧||

ನೀರೆಯ ಬಾವುಲಿ ಲಿಗಿಲಿಗಿನಾಡುತ
ಕಾಲುಂಗ್ರ ಪಿಲ್ಲ್ಯಾ ಝಗಝಗ ಹೊಳೆವುತ
ಹೊನ್ನಾ-ಭರಣಾ ಹರಡಿಗಿ ಮಲಕಽ
ಹೊನ್ನ ಪುತ್ತಳಿ ರುಳಿ ಸರಿಗಿಟಗೊಂಡು
ಕೋಗಿಲ ಮದ್ದಾಽನೇ ಹೆಸಿಗೇಳಽ ಸೋ ||೨||

ಇದುರಿನ ಮನಿಯೆ ಬಿದರೊಂಕೆವರ
ಮನ್ನುಸಿದಾರ ಮನಿ ಹೊಕ್ಕವರ
ಹತ್ತು ಮಂದಿಲಿ ಪಂತಿಲಿ ಕುಂಡ್ರೋ
ಚಿತ್ತಬಲ್ಲಬೋ ಶಿವಶಂಕರಗ
ಚಿತ್ರಾಂಗದರಸಾ ಹಸೀಗೇಳೋ ಸೋ ||೩||

ನಿಲಗುದರೆಂಬೋ ತೇಜಿಯನೇರಿ
ಮದನಾರಿ ಬಂದು ಬಾಗಿಲ್ಗಿ ನಿಂತಽ
ವಾರಿಗಿ ಗೆಳೆದ್ಯಾರು ಒಡಗೊಂಡು ಕರದರ
ಬಾ ಎನ್ನ ಮಡಽದೀ ಹಸಿಗೇಳಽ ಸೋ ||೪||

ಇಂಜನ ಮಳಿಯ ಗಂಧದ ಗೀರ
ಇಂದ್ನಮ ತಂಗೆಮನ ಗಂಡನ ಸದರಽ
ಇಂದ್ರನ ಖಳಿಯುಳ ಚಂದ್ರನ ಮಗಳ
ಇಂದ ಮನ್ನ ಸರೇ ಶುಬಽದಿಂದ ಸೋ ||೫||
*****

ಈ ಹಾಡಿನಲ್ಲಿ ಮೊದಲಿನ ಎರಡು ನುಡಿಗಳಲ್ಲಿ ಕನ್ನೆಯ ಅಲಂಕಾರ ವರ್ಣನೆಯಿದೆ. ಮೂರನೆಯ ನುಡಿಯಲ್ಲಿ ವರನ ಘನವಂತಿಕೆಯನ್ನು ಹೇಳಿದೆ. ನಾಲ್ಕನೆಯ ಮತ್ತು ಐದನೆಯ ನುಡಿಗಳಲ್ಲಿ ಕನ್ನೆಯನ್ನು ಗೆಳತಿಯರು ಮನ್ನಿಸುತ್ತಾರೆ.

ಛಂದಸ್ಸು:- ಮಂದಾನಿಲ ರಗಳೆ.

ಶಬ್ದಪ್ರಯೋಗಗಳು:- ಗಿರಾಕಿ=ಹರದಿ (ಸುಂದರಿ). ವಾನ್ಯಾಡು ತುರಬ=ಅಲೆದಾಡುವ ಮುಡಿ. ವನಪಿಲೆ=ಒಯ್ಯಾರದಿಂದ. ಖನ್ನಿ=ಕನ್ನೆ. ಚಿತ್ತ ಒಲ್ಲಬೊ=ಚಿತ್ತವಲ್ಲಭ (ಪ್ರೀಯ). ನಿಲಗುದರಿ=ನಿಲುವಿಕೆಯುಳ್ಳೆ ಕುದುರೆ. ಮದನಾರಿ=ಯೌವನೆ. ಸದರ=ಸರಿಗದ್ದುಗೆ. ಇಂಜನ ಮಳಿಯ ಗಂಧದ ಗೀರ=ಭೋರಮಳೆಯ ಹಸಿಯ ಧಾರೆಗಳಂತೆ ಒಪ್ಪುವ ಗಂಧದ ಗೀರುಗಳು (ಕೈಗೆ).

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...