Home / ಕವನ / ಕವಿತೆ / ಹಿಂಬಳಿ ಮುಂಬಳಿ

ಹಿಂಬಳಿ ಮುಂಬಳಿ

ಹಿಂಬಳಿ ಮುಂಬಳಿ ಗಂಧದ ಗೀರಾ
ಹೊಂದಿಸಿ ಇಟ್ಟಾಳ ಛೆಂದ ಗಿರಾಕಿ
ಜಾತ ಮಲ್ಲಿಗಿ ಜಾಳಿಗಿ ದಂಡಿ
ವಾನ್ಯಾಡು ತುರುಬ ಒನಪಿಲಿ ಕಟ್ಟಿ
ಖನ್ನಿ ಕೋಮಽಲಿ ಹಸೀಗೇಳಽ ಸೋ ||೧||

ನೀರೆಯ ಬಾವುಲಿ ಲಿಗಿಲಿಗಿನಾಡುತ
ಕಾಲುಂಗ್ರ ಪಿಲ್ಲ್ಯಾ ಝಗಝಗ ಹೊಳೆವುತ
ಹೊನ್ನಾ-ಭರಣಾ ಹರಡಿಗಿ ಮಲಕಽ
ಹೊನ್ನ ಪುತ್ತಳಿ ರುಳಿ ಸರಿಗಿಟಗೊಂಡು
ಕೋಗಿಲ ಮದ್ದಾಽನೇ ಹೆಸಿಗೇಳಽ ಸೋ ||೨||

ಇದುರಿನ ಮನಿಯೆ ಬಿದರೊಂಕೆವರ
ಮನ್ನುಸಿದಾರ ಮನಿ ಹೊಕ್ಕವರ
ಹತ್ತು ಮಂದಿಲಿ ಪಂತಿಲಿ ಕುಂಡ್ರೋ
ಚಿತ್ತಬಲ್ಲಬೋ ಶಿವಶಂಕರಗ
ಚಿತ್ರಾಂಗದರಸಾ ಹಸೀಗೇಳೋ ಸೋ ||೩||

ನಿಲಗುದರೆಂಬೋ ತೇಜಿಯನೇರಿ
ಮದನಾರಿ ಬಂದು ಬಾಗಿಲ್ಗಿ ನಿಂತಽ
ವಾರಿಗಿ ಗೆಳೆದ್ಯಾರು ಒಡಗೊಂಡು ಕರದರ
ಬಾ ಎನ್ನ ಮಡಽದೀ ಹಸಿಗೇಳಽ ಸೋ ||೪||

ಇಂಜನ ಮಳಿಯ ಗಂಧದ ಗೀರ
ಇಂದ್ನಮ ತಂಗೆಮನ ಗಂಡನ ಸದರಽ
ಇಂದ್ರನ ಖಳಿಯುಳ ಚಂದ್ರನ ಮಗಳ
ಇಂದ ಮನ್ನ ಸರೇ ಶುಬಽದಿಂದ ಸೋ ||೫||
*****

ಈ ಹಾಡಿನಲ್ಲಿ ಮೊದಲಿನ ಎರಡು ನುಡಿಗಳಲ್ಲಿ ಕನ್ನೆಯ ಅಲಂಕಾರ ವರ್ಣನೆಯಿದೆ. ಮೂರನೆಯ ನುಡಿಯಲ್ಲಿ ವರನ ಘನವಂತಿಕೆಯನ್ನು ಹೇಳಿದೆ. ನಾಲ್ಕನೆಯ ಮತ್ತು ಐದನೆಯ ನುಡಿಗಳಲ್ಲಿ ಕನ್ನೆಯನ್ನು ಗೆಳತಿಯರು ಮನ್ನಿಸುತ್ತಾರೆ.

ಛಂದಸ್ಸು:- ಮಂದಾನಿಲ ರಗಳೆ.

ಶಬ್ದಪ್ರಯೋಗಗಳು:- ಗಿರಾಕಿ=ಹರದಿ (ಸುಂದರಿ). ವಾನ್ಯಾಡು ತುರಬ=ಅಲೆದಾಡುವ ಮುಡಿ. ವನಪಿಲೆ=ಒಯ್ಯಾರದಿಂದ. ಖನ್ನಿ=ಕನ್ನೆ. ಚಿತ್ತ ಒಲ್ಲಬೊ=ಚಿತ್ತವಲ್ಲಭ (ಪ್ರೀಯ). ನಿಲಗುದರಿ=ನಿಲುವಿಕೆಯುಳ್ಳೆ ಕುದುರೆ. ಮದನಾರಿ=ಯೌವನೆ. ಸದರ=ಸರಿಗದ್ದುಗೆ. ಇಂಜನ ಮಳಿಯ ಗಂಧದ ಗೀರ=ಭೋರಮಳೆಯ ಹಸಿಯ ಧಾರೆಗಳಂತೆ ಒಪ್ಪುವ ಗಂಧದ ಗೀರುಗಳು (ಕೈಗೆ).

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...