Home / ಕವನ / ಕವಿತೆ / ರನ್ನದುಡುಗುಣಿ

ರನ್ನದುಡುಗುಣಿ

ರನ್ನ ದುಡುಗುಣಿ ಚಿನ್ನದ ಕೊಂಡಿ
ಹೊನ್ನಿನಾ ಡಾಬಾ ಇಟ್ಟಿದಳಽ|
ಎಣಕೆನಿಲ್ಲದೆ ಮಾಣಿಕಸಽರ
ಎದಿಬದಿ ತಾನು ಹಾಕುವಳಽ|
ಕಡಿಯ ಕಂಕಣ ಕಮಳದ ಮುಖಿಯ
ಹೊಳಿವ ಮುತ್ತಿನ ವಾಲಿಗಳಽ|
ಜಯ ಜಯ ಮಂಗಳಽ| ಜಯ ಜಯ ಮಂಗಳಽ|
ಸುಂದರಿ ಸಾಂಬನಿಗೇ| ಜಯ ಜಯ ಮಂಗಳಽ ||೧||

ಕಸೂತಿ ಕುಬಸಾ ಕೈಯಲಿ ಕನ್ನಡಿ
ನೆರಽಳ ನೋಡಿ ಹಿಗ್ಗುವಳಽ|
ಬಸವೇಸೂರನ ಎಡದಲಿ ಕುಂತು
ಹಸ್ಯಾಮಾಡಿ ತಾ ನಗುವಳಽ|
ಕಡಿಯ ಕಂಕಣ ಕಮಳದ ಮುಖಿಯ
ಹೊಳಿವ ಮುತ್ತಿನ ವಾಲಿಗಳಽ|
ಜಯ ಜಯ ಮಂಗಳಽ| ಜಯ ಜಯ ಮಂಗಳಽ|
ಸುಂದರಿ ಸಾಂಬನಿಗೇ| ಜಯ ಜಯ ಮಂಗಳಽ ||೨||

ಮುಗಿನಾಗ ಹೊಳೆವ ಮುತ್ತಿನ ಮೂಗುತಿ
ಮಿಗಿಲಾದ ಆಭರಣಿಟ್ಟಿದಳಽ|
ಅಚ್ಚರಂಗದ ಶಾಲನುಟ್ಟು
ಅನಂತ ಕೋಟಿ ರೂಪವಳಽ|
ಕಡಿಯ ಕಂಕಣ ಕಮಳದ ಮುಖಿಯ
ಹೊಳಿವ ಮುತ್ತಿನ ವಾಲಿಗಳಽ|
ಜಯ ಜಯ ಮಂಗಳಽ| ಜಯ ಜಯ ಮಂಗಳಽ|
ಸುಂದರಿ ಸಾಂಬನಿಗೇ| ಜಯ ಜಯ ಮಂಗಳಽ ||೩||

ದುಂಡಗೈಯವಳು ದಿಮಿದಿಮಿಗಾರಳು
ದುಂಡಮುತ್ತಿನ ವಾರಳಽ|
ಹಿಂಡ ಗೆಳದ್ಯಾರು ಕಂಡುಸಿ ಕರದರ
ಹೆಣೂಲ ಭಂಗಾರ ಹಾಕುವಳಽ
ಕಡಿಯ ಕಂಕಣ ಕಮಳದ ಮುಖಿಯ
ಹೊಳಿವ ಮುತ್ತಿನ ವಾಲಿಗಳಽ|
ಜಯ ಜಯ ಮಂಗಳಽ| ಜಯ ಜಯ ಮಂಗಳಽ|
ಸುಂದರಿ ಸಾಂಬನಿಗೇ| ಜಯ ಜಯ ಮಂಗಳಽ ||೪||

ಧನೂರ ಬಣ್ಣಾ ಶಾಲ ಕೈಯಲಿ
ಐದು ಅಂಕುಶಾ ಹಿಡಿದವಳಽ
ಜಯ ಜಯ ಮಂಗಳಽ| ಜಯ ಜಯ ಮಂಗಳಽ|
ಸುಂದರಿ ಸಾಂಬನಿಗೇ| ಜಯ ಜಯ ಮಂಗಳಽ ||೫||
*****

ಈ ಹಾಡಿನಲ್ಲಿ ಪಸ್ತ್ರಾಭರಣಗಳ ವರ್ಣನೆಯಿದೆ.

ಛಂದಸ್ಸು:- ಮಂದಾನಿಲ ರಗಳೆ

ಶಬ್ದಪ್ರಯೋಗಗಳು:- ಇಟ್ಟಿದಳ=ಇಟ್ಟದ್ದಾಳೆ. ಎಣಿಕಿನಿಲ್ಲದೆ=ಎಣಿಕೆ ಇಲ್ಲದೆ, ಹಸ್ಯಾ ಮಾಡಿ=ಹಾಸ್ಯ ಮಾಡಿ. ದಿಮಿದಿಮಿಗಾರಳ=ತುಂಬು ಮೈಯವಳು. ವಾರಳು=ಓರಣವುಳ್ಳವಳ. ಕಂಡುಸಿ=ಖಂಡಿತವಾಗಿ. ಧನೂರ ಬಣ್ಣ=ಧನ್ನೂರಿನ ಸೀರೆ.

“ಬಸವೇಸೂರನ ಮಡದಿ.” ಇಲ್ಲಿ ವರನನ್ನು ಬಸವೇಶ್ವರನಿಗೆ ಹೋಲಿಸಿದೆ. ಹೀಗೆ ಇಂತಹ ಹಾಡುಗಳಲ್ಲಿ ಗಂಡಹೆಂಡಿರನ್ನು ಶಿವಪಾರ್ವತಿಯರಿಗೂ ಹರಿಲಕ್ಷ್ಮಿಯರಿಗೂ ಹೋಲಿಸುವುದುಂಟು.

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...