ರನ್ನದುಡುಗುಣಿ

ರನ್ನ ದುಡುಗುಣಿ ಚಿನ್ನದ ಕೊಂಡಿ
ಹೊನ್ನಿನಾ ಡಾಬಾ ಇಟ್ಟಿದಳಽ|
ಎಣಕೆನಿಲ್ಲದೆ ಮಾಣಿಕಸಽರ
ಎದಿಬದಿ ತಾನು ಹಾಕುವಳಽ|
ಕಡಿಯ ಕಂಕಣ ಕಮಳದ ಮುಖಿಯ
ಹೊಳಿವ ಮುತ್ತಿನ ವಾಲಿಗಳಽ|
ಜಯ ಜಯ ಮಂಗಳಽ| ಜಯ ಜಯ ಮಂಗಳಽ|
ಸುಂದರಿ ಸಾಂಬನಿಗೇ| ಜಯ ಜಯ ಮಂಗಳಽ ||೧||

ಕಸೂತಿ ಕುಬಸಾ ಕೈಯಲಿ ಕನ್ನಡಿ
ನೆರಽಳ ನೋಡಿ ಹಿಗ್ಗುವಳಽ|
ಬಸವೇಸೂರನ ಎಡದಲಿ ಕುಂತು
ಹಸ್ಯಾಮಾಡಿ ತಾ ನಗುವಳಽ|
ಕಡಿಯ ಕಂಕಣ ಕಮಳದ ಮುಖಿಯ
ಹೊಳಿವ ಮುತ್ತಿನ ವಾಲಿಗಳಽ|
ಜಯ ಜಯ ಮಂಗಳಽ| ಜಯ ಜಯ ಮಂಗಳಽ|
ಸುಂದರಿ ಸಾಂಬನಿಗೇ| ಜಯ ಜಯ ಮಂಗಳಽ ||೨||

ಮುಗಿನಾಗ ಹೊಳೆವ ಮುತ್ತಿನ ಮೂಗುತಿ
ಮಿಗಿಲಾದ ಆಭರಣಿಟ್ಟಿದಳಽ|
ಅಚ್ಚರಂಗದ ಶಾಲನುಟ್ಟು
ಅನಂತ ಕೋಟಿ ರೂಪವಳಽ|
ಕಡಿಯ ಕಂಕಣ ಕಮಳದ ಮುಖಿಯ
ಹೊಳಿವ ಮುತ್ತಿನ ವಾಲಿಗಳಽ|
ಜಯ ಜಯ ಮಂಗಳಽ| ಜಯ ಜಯ ಮಂಗಳಽ|
ಸುಂದರಿ ಸಾಂಬನಿಗೇ| ಜಯ ಜಯ ಮಂಗಳಽ ||೩||

ದುಂಡಗೈಯವಳು ದಿಮಿದಿಮಿಗಾರಳು
ದುಂಡಮುತ್ತಿನ ವಾರಳಽ|
ಹಿಂಡ ಗೆಳದ್ಯಾರು ಕಂಡುಸಿ ಕರದರ
ಹೆಣೂಲ ಭಂಗಾರ ಹಾಕುವಳಽ
ಕಡಿಯ ಕಂಕಣ ಕಮಳದ ಮುಖಿಯ
ಹೊಳಿವ ಮುತ್ತಿನ ವಾಲಿಗಳಽ|
ಜಯ ಜಯ ಮಂಗಳಽ| ಜಯ ಜಯ ಮಂಗಳಽ|
ಸುಂದರಿ ಸಾಂಬನಿಗೇ| ಜಯ ಜಯ ಮಂಗಳಽ ||೪||

ಧನೂರ ಬಣ್ಣಾ ಶಾಲ ಕೈಯಲಿ
ಐದು ಅಂಕುಶಾ ಹಿಡಿದವಳಽ
ಜಯ ಜಯ ಮಂಗಳಽ| ಜಯ ಜಯ ಮಂಗಳಽ|
ಸುಂದರಿ ಸಾಂಬನಿಗೇ| ಜಯ ಜಯ ಮಂಗಳಽ ||೫||
*****

ಈ ಹಾಡಿನಲ್ಲಿ ಪಸ್ತ್ರಾಭರಣಗಳ ವರ್ಣನೆಯಿದೆ.

ಛಂದಸ್ಸು:- ಮಂದಾನಿಲ ರಗಳೆ

ಶಬ್ದಪ್ರಯೋಗಗಳು:- ಇಟ್ಟಿದಳ=ಇಟ್ಟದ್ದಾಳೆ. ಎಣಿಕಿನಿಲ್ಲದೆ=ಎಣಿಕೆ ಇಲ್ಲದೆ, ಹಸ್ಯಾ ಮಾಡಿ=ಹಾಸ್ಯ ಮಾಡಿ. ದಿಮಿದಿಮಿಗಾರಳ=ತುಂಬು ಮೈಯವಳು. ವಾರಳು=ಓರಣವುಳ್ಳವಳ. ಕಂಡುಸಿ=ಖಂಡಿತವಾಗಿ. ಧನೂರ ಬಣ್ಣ=ಧನ್ನೂರಿನ ಸೀರೆ.

“ಬಸವೇಸೂರನ ಮಡದಿ.” ಇಲ್ಲಿ ವರನನ್ನು ಬಸವೇಶ್ವರನಿಗೆ ಹೋಲಿಸಿದೆ. ಹೀಗೆ ಇಂತಹ ಹಾಡುಗಳಲ್ಲಿ ಗಂಡಹೆಂಡಿರನ್ನು ಶಿವಪಾರ್ವತಿಯರಿಗೂ ಹರಿಲಕ್ಷ್ಮಿಯರಿಗೂ ಹೋಲಿಸುವುದುಂಟು.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹಳೆಯ ಪ್ರಶಸ್ತಿ ಗೊತ್ತೇ?
Next post ಹೇಮಾವತಿಯ ತೀರದಲ್ಲಿ

ಸಣ್ಣ ಕತೆ

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

cheap jordans|wholesale air max|wholesale jordans|wholesale jewelry|wholesale jerseys