ರನ್ನದುಡುಗುಣಿ

ರನ್ನ ದುಡುಗುಣಿ ಚಿನ್ನದ ಕೊಂಡಿ
ಹೊನ್ನಿನಾ ಡಾಬಾ ಇಟ್ಟಿದಳಽ|
ಎಣಕೆನಿಲ್ಲದೆ ಮಾಣಿಕಸಽರ
ಎದಿಬದಿ ತಾನು ಹಾಕುವಳಽ|
ಕಡಿಯ ಕಂಕಣ ಕಮಳದ ಮುಖಿಯ
ಹೊಳಿವ ಮುತ್ತಿನ ವಾಲಿಗಳಽ|
ಜಯ ಜಯ ಮಂಗಳಽ| ಜಯ ಜಯ ಮಂಗಳಽ|
ಸುಂದರಿ ಸಾಂಬನಿಗೇ| ಜಯ ಜಯ ಮಂಗಳಽ ||೧||

ಕಸೂತಿ ಕುಬಸಾ ಕೈಯಲಿ ಕನ್ನಡಿ
ನೆರಽಳ ನೋಡಿ ಹಿಗ್ಗುವಳಽ|
ಬಸವೇಸೂರನ ಎಡದಲಿ ಕುಂತು
ಹಸ್ಯಾಮಾಡಿ ತಾ ನಗುವಳಽ|
ಕಡಿಯ ಕಂಕಣ ಕಮಳದ ಮುಖಿಯ
ಹೊಳಿವ ಮುತ್ತಿನ ವಾಲಿಗಳಽ|
ಜಯ ಜಯ ಮಂಗಳಽ| ಜಯ ಜಯ ಮಂಗಳಽ|
ಸುಂದರಿ ಸಾಂಬನಿಗೇ| ಜಯ ಜಯ ಮಂಗಳಽ ||೨||

ಮುಗಿನಾಗ ಹೊಳೆವ ಮುತ್ತಿನ ಮೂಗುತಿ
ಮಿಗಿಲಾದ ಆಭರಣಿಟ್ಟಿದಳಽ|
ಅಚ್ಚರಂಗದ ಶಾಲನುಟ್ಟು
ಅನಂತ ಕೋಟಿ ರೂಪವಳಽ|
ಕಡಿಯ ಕಂಕಣ ಕಮಳದ ಮುಖಿಯ
ಹೊಳಿವ ಮುತ್ತಿನ ವಾಲಿಗಳಽ|
ಜಯ ಜಯ ಮಂಗಳಽ| ಜಯ ಜಯ ಮಂಗಳಽ|
ಸುಂದರಿ ಸಾಂಬನಿಗೇ| ಜಯ ಜಯ ಮಂಗಳಽ ||೩||

ದುಂಡಗೈಯವಳು ದಿಮಿದಿಮಿಗಾರಳು
ದುಂಡಮುತ್ತಿನ ವಾರಳಽ|
ಹಿಂಡ ಗೆಳದ್ಯಾರು ಕಂಡುಸಿ ಕರದರ
ಹೆಣೂಲ ಭಂಗಾರ ಹಾಕುವಳಽ
ಕಡಿಯ ಕಂಕಣ ಕಮಳದ ಮುಖಿಯ
ಹೊಳಿವ ಮುತ್ತಿನ ವಾಲಿಗಳಽ|
ಜಯ ಜಯ ಮಂಗಳಽ| ಜಯ ಜಯ ಮಂಗಳಽ|
ಸುಂದರಿ ಸಾಂಬನಿಗೇ| ಜಯ ಜಯ ಮಂಗಳಽ ||೪||

ಧನೂರ ಬಣ್ಣಾ ಶಾಲ ಕೈಯಲಿ
ಐದು ಅಂಕುಶಾ ಹಿಡಿದವಳಽ
ಜಯ ಜಯ ಮಂಗಳಽ| ಜಯ ಜಯ ಮಂಗಳಽ|
ಸುಂದರಿ ಸಾಂಬನಿಗೇ| ಜಯ ಜಯ ಮಂಗಳಽ ||೫||
*****

ಈ ಹಾಡಿನಲ್ಲಿ ಪಸ್ತ್ರಾಭರಣಗಳ ವರ್ಣನೆಯಿದೆ.

ಛಂದಸ್ಸು:- ಮಂದಾನಿಲ ರಗಳೆ

ಶಬ್ದಪ್ರಯೋಗಗಳು:- ಇಟ್ಟಿದಳ=ಇಟ್ಟದ್ದಾಳೆ. ಎಣಿಕಿನಿಲ್ಲದೆ=ಎಣಿಕೆ ಇಲ್ಲದೆ, ಹಸ್ಯಾ ಮಾಡಿ=ಹಾಸ್ಯ ಮಾಡಿ. ದಿಮಿದಿಮಿಗಾರಳ=ತುಂಬು ಮೈಯವಳು. ವಾರಳು=ಓರಣವುಳ್ಳವಳ. ಕಂಡುಸಿ=ಖಂಡಿತವಾಗಿ. ಧನೂರ ಬಣ್ಣ=ಧನ್ನೂರಿನ ಸೀರೆ.

“ಬಸವೇಸೂರನ ಮಡದಿ.” ಇಲ್ಲಿ ವರನನ್ನು ಬಸವೇಶ್ವರನಿಗೆ ಹೋಲಿಸಿದೆ. ಹೀಗೆ ಇಂತಹ ಹಾಡುಗಳಲ್ಲಿ ಗಂಡಹೆಂಡಿರನ್ನು ಶಿವಪಾರ್ವತಿಯರಿಗೂ ಹರಿಲಕ್ಷ್ಮಿಯರಿಗೂ ಹೋಲಿಸುವುದುಂಟು.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹಳೆಯ ಪ್ರಶಸ್ತಿ ಗೊತ್ತೇ?
Next post ಹೇಮಾವತಿಯ ತೀರದಲ್ಲಿ

ಸಣ್ಣ ಕತೆ

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…