Home / ಕವನ / ಕವಿತೆ / ರನ್ನದುಡುಗುಣಿ

ರನ್ನದುಡುಗುಣಿ

ರನ್ನ ದುಡುಗುಣಿ ಚಿನ್ನದ ಕೊಂಡಿ
ಹೊನ್ನಿನಾ ಡಾಬಾ ಇಟ್ಟಿದಳಽ|
ಎಣಕೆನಿಲ್ಲದೆ ಮಾಣಿಕಸಽರ
ಎದಿಬದಿ ತಾನು ಹಾಕುವಳಽ|
ಕಡಿಯ ಕಂಕಣ ಕಮಳದ ಮುಖಿಯ
ಹೊಳಿವ ಮುತ್ತಿನ ವಾಲಿಗಳಽ|
ಜಯ ಜಯ ಮಂಗಳಽ| ಜಯ ಜಯ ಮಂಗಳಽ|
ಸುಂದರಿ ಸಾಂಬನಿಗೇ| ಜಯ ಜಯ ಮಂಗಳಽ ||೧||

ಕಸೂತಿ ಕುಬಸಾ ಕೈಯಲಿ ಕನ್ನಡಿ
ನೆರಽಳ ನೋಡಿ ಹಿಗ್ಗುವಳಽ|
ಬಸವೇಸೂರನ ಎಡದಲಿ ಕುಂತು
ಹಸ್ಯಾಮಾಡಿ ತಾ ನಗುವಳಽ|
ಕಡಿಯ ಕಂಕಣ ಕಮಳದ ಮುಖಿಯ
ಹೊಳಿವ ಮುತ್ತಿನ ವಾಲಿಗಳಽ|
ಜಯ ಜಯ ಮಂಗಳಽ| ಜಯ ಜಯ ಮಂಗಳಽ|
ಸುಂದರಿ ಸಾಂಬನಿಗೇ| ಜಯ ಜಯ ಮಂಗಳಽ ||೨||

ಮುಗಿನಾಗ ಹೊಳೆವ ಮುತ್ತಿನ ಮೂಗುತಿ
ಮಿಗಿಲಾದ ಆಭರಣಿಟ್ಟಿದಳಽ|
ಅಚ್ಚರಂಗದ ಶಾಲನುಟ್ಟು
ಅನಂತ ಕೋಟಿ ರೂಪವಳಽ|
ಕಡಿಯ ಕಂಕಣ ಕಮಳದ ಮುಖಿಯ
ಹೊಳಿವ ಮುತ್ತಿನ ವಾಲಿಗಳಽ|
ಜಯ ಜಯ ಮಂಗಳಽ| ಜಯ ಜಯ ಮಂಗಳಽ|
ಸುಂದರಿ ಸಾಂಬನಿಗೇ| ಜಯ ಜಯ ಮಂಗಳಽ ||೩||

ದುಂಡಗೈಯವಳು ದಿಮಿದಿಮಿಗಾರಳು
ದುಂಡಮುತ್ತಿನ ವಾರಳಽ|
ಹಿಂಡ ಗೆಳದ್ಯಾರು ಕಂಡುಸಿ ಕರದರ
ಹೆಣೂಲ ಭಂಗಾರ ಹಾಕುವಳಽ
ಕಡಿಯ ಕಂಕಣ ಕಮಳದ ಮುಖಿಯ
ಹೊಳಿವ ಮುತ್ತಿನ ವಾಲಿಗಳಽ|
ಜಯ ಜಯ ಮಂಗಳಽ| ಜಯ ಜಯ ಮಂಗಳಽ|
ಸುಂದರಿ ಸಾಂಬನಿಗೇ| ಜಯ ಜಯ ಮಂಗಳಽ ||೪||

ಧನೂರ ಬಣ್ಣಾ ಶಾಲ ಕೈಯಲಿ
ಐದು ಅಂಕುಶಾ ಹಿಡಿದವಳಽ
ಜಯ ಜಯ ಮಂಗಳಽ| ಜಯ ಜಯ ಮಂಗಳಽ|
ಸುಂದರಿ ಸಾಂಬನಿಗೇ| ಜಯ ಜಯ ಮಂಗಳಽ ||೫||
*****

ಈ ಹಾಡಿನಲ್ಲಿ ಪಸ್ತ್ರಾಭರಣಗಳ ವರ್ಣನೆಯಿದೆ.

ಛಂದಸ್ಸು:- ಮಂದಾನಿಲ ರಗಳೆ

ಶಬ್ದಪ್ರಯೋಗಗಳು:- ಇಟ್ಟಿದಳ=ಇಟ್ಟದ್ದಾಳೆ. ಎಣಿಕಿನಿಲ್ಲದೆ=ಎಣಿಕೆ ಇಲ್ಲದೆ, ಹಸ್ಯಾ ಮಾಡಿ=ಹಾಸ್ಯ ಮಾಡಿ. ದಿಮಿದಿಮಿಗಾರಳ=ತುಂಬು ಮೈಯವಳು. ವಾರಳು=ಓರಣವುಳ್ಳವಳ. ಕಂಡುಸಿ=ಖಂಡಿತವಾಗಿ. ಧನೂರ ಬಣ್ಣ=ಧನ್ನೂರಿನ ಸೀರೆ.

“ಬಸವೇಸೂರನ ಮಡದಿ.” ಇಲ್ಲಿ ವರನನ್ನು ಬಸವೇಶ್ವರನಿಗೆ ಹೋಲಿಸಿದೆ. ಹೀಗೆ ಇಂತಹ ಹಾಡುಗಳಲ್ಲಿ ಗಂಡಹೆಂಡಿರನ್ನು ಶಿವಪಾರ್ವತಿಯರಿಗೂ ಹರಿಲಕ್ಷ್ಮಿಯರಿಗೂ ಹೋಲಿಸುವುದುಂಟು.

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...