Home / ಕವನ / ಕವಿತೆ / ರನ್ನದುಡುಗುಣಿ

ರನ್ನದುಡುಗುಣಿ

ರನ್ನ ದುಡುಗುಣಿ ಚಿನ್ನದ ಕೊಂಡಿ
ಹೊನ್ನಿನಾ ಡಾಬಾ ಇಟ್ಟಿದಳಽ|
ಎಣಕೆನಿಲ್ಲದೆ ಮಾಣಿಕಸಽರ
ಎದಿಬದಿ ತಾನು ಹಾಕುವಳಽ|
ಕಡಿಯ ಕಂಕಣ ಕಮಳದ ಮುಖಿಯ
ಹೊಳಿವ ಮುತ್ತಿನ ವಾಲಿಗಳಽ|
ಜಯ ಜಯ ಮಂಗಳಽ| ಜಯ ಜಯ ಮಂಗಳಽ|
ಸುಂದರಿ ಸಾಂಬನಿಗೇ| ಜಯ ಜಯ ಮಂಗಳಽ ||೧||

ಕಸೂತಿ ಕುಬಸಾ ಕೈಯಲಿ ಕನ್ನಡಿ
ನೆರಽಳ ನೋಡಿ ಹಿಗ್ಗುವಳಽ|
ಬಸವೇಸೂರನ ಎಡದಲಿ ಕುಂತು
ಹಸ್ಯಾಮಾಡಿ ತಾ ನಗುವಳಽ|
ಕಡಿಯ ಕಂಕಣ ಕಮಳದ ಮುಖಿಯ
ಹೊಳಿವ ಮುತ್ತಿನ ವಾಲಿಗಳಽ|
ಜಯ ಜಯ ಮಂಗಳಽ| ಜಯ ಜಯ ಮಂಗಳಽ|
ಸುಂದರಿ ಸಾಂಬನಿಗೇ| ಜಯ ಜಯ ಮಂಗಳಽ ||೨||

ಮುಗಿನಾಗ ಹೊಳೆವ ಮುತ್ತಿನ ಮೂಗುತಿ
ಮಿಗಿಲಾದ ಆಭರಣಿಟ್ಟಿದಳಽ|
ಅಚ್ಚರಂಗದ ಶಾಲನುಟ್ಟು
ಅನಂತ ಕೋಟಿ ರೂಪವಳಽ|
ಕಡಿಯ ಕಂಕಣ ಕಮಳದ ಮುಖಿಯ
ಹೊಳಿವ ಮುತ್ತಿನ ವಾಲಿಗಳಽ|
ಜಯ ಜಯ ಮಂಗಳಽ| ಜಯ ಜಯ ಮಂಗಳಽ|
ಸುಂದರಿ ಸಾಂಬನಿಗೇ| ಜಯ ಜಯ ಮಂಗಳಽ ||೩||

ದುಂಡಗೈಯವಳು ದಿಮಿದಿಮಿಗಾರಳು
ದುಂಡಮುತ್ತಿನ ವಾರಳಽ|
ಹಿಂಡ ಗೆಳದ್ಯಾರು ಕಂಡುಸಿ ಕರದರ
ಹೆಣೂಲ ಭಂಗಾರ ಹಾಕುವಳಽ
ಕಡಿಯ ಕಂಕಣ ಕಮಳದ ಮುಖಿಯ
ಹೊಳಿವ ಮುತ್ತಿನ ವಾಲಿಗಳಽ|
ಜಯ ಜಯ ಮಂಗಳಽ| ಜಯ ಜಯ ಮಂಗಳಽ|
ಸುಂದರಿ ಸಾಂಬನಿಗೇ| ಜಯ ಜಯ ಮಂಗಳಽ ||೪||

ಧನೂರ ಬಣ್ಣಾ ಶಾಲ ಕೈಯಲಿ
ಐದು ಅಂಕುಶಾ ಹಿಡಿದವಳಽ
ಜಯ ಜಯ ಮಂಗಳಽ| ಜಯ ಜಯ ಮಂಗಳಽ|
ಸುಂದರಿ ಸಾಂಬನಿಗೇ| ಜಯ ಜಯ ಮಂಗಳಽ ||೫||
*****

ಈ ಹಾಡಿನಲ್ಲಿ ಪಸ್ತ್ರಾಭರಣಗಳ ವರ್ಣನೆಯಿದೆ.

ಛಂದಸ್ಸು:- ಮಂದಾನಿಲ ರಗಳೆ

ಶಬ್ದಪ್ರಯೋಗಗಳು:- ಇಟ್ಟಿದಳ=ಇಟ್ಟದ್ದಾಳೆ. ಎಣಿಕಿನಿಲ್ಲದೆ=ಎಣಿಕೆ ಇಲ್ಲದೆ, ಹಸ್ಯಾ ಮಾಡಿ=ಹಾಸ್ಯ ಮಾಡಿ. ದಿಮಿದಿಮಿಗಾರಳ=ತುಂಬು ಮೈಯವಳು. ವಾರಳು=ಓರಣವುಳ್ಳವಳ. ಕಂಡುಸಿ=ಖಂಡಿತವಾಗಿ. ಧನೂರ ಬಣ್ಣ=ಧನ್ನೂರಿನ ಸೀರೆ.

“ಬಸವೇಸೂರನ ಮಡದಿ.” ಇಲ್ಲಿ ವರನನ್ನು ಬಸವೇಶ್ವರನಿಗೆ ಹೋಲಿಸಿದೆ. ಹೀಗೆ ಇಂತಹ ಹಾಡುಗಳಲ್ಲಿ ಗಂಡಹೆಂಡಿರನ್ನು ಶಿವಪಾರ್ವತಿಯರಿಗೂ ಹರಿಲಕ್ಷ್ಮಿಯರಿಗೂ ಹೋಲಿಸುವುದುಂಟು.

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...