Home / ಕವನ / ಕವಿತೆ / ಹಣಿಯೆಂಬೊ ಭಾಂವಕ

ಹಣಿಯೆಂಬೊ ಭಾಂವಕ

ಹಣಿಯೆಂಬೊ ಭಾಂವಕ ಹೆಣಿಯಂದ ದಂಡೀಯ|
ಮಗ್ಗಿ ತಿರುವಂದ ಮಲಕೀಲಿ| ಸೋ ಎನ್ನೀರೆ ||೧||

ಹುಬ್ಬಂಬು ಭಾಂವಕ ತಿದ್ದೊಂದ ದಂಡೀಯ|
ಗೊನಿಯ ತಿರುವಂದ ಮಲಕೀಲಿ| ಸೋ… ||೨||

ಕಡಗಽವ ಇಡಸ್ಯಾರ ಕಡಗಣ್ಣಿಲಿ ನೋಡ್ಯಾರ|
ಕೊಡವೀಗಿ ತಮಗ ವರನೆಂದ| ಸೋ… ||೩||

ದ್ವಾರ್‍ಯಾಗೋಳಿಡಿಸ್ಯಾರ ಮಾರೀಯ ನೊಡ್ಯಾರ|
ನಾರೀಗಿ ತಮಗ ವರನಂದ| ಸೋ… ||೪||

ಹಸಿಯ ಜಗಲಿಯ ಮ್ಯಾಲ ಒಯ್ದಿಟ್ಟರ ಭಾಸಿಂಗ|
ತಂಗೆವ್ವಾ ಹೋಗಿ ತಗತಾರ| ಸೋ… ||೫||

ತಂಗೀಯವ್ವಾ ಹೋಗಿ ತಗತಾರ ಭಾಸಿಂಗ|
ನಂದಿ ಸೋಪನದ ನಸಲೀಗಿ| ಸೋ… ||೬||

ದಂಡಿ ತಂದಣ್ಣಾಗ ಕುಂಡ್ರೂ ಗದ್ದೀಗ್ಹಾಕಿ|
ಗುಂಡ ಗದ್ದ್ಯಾಣದ ಹೊಲ ಕೊಟ್ಟ| ಸೋ… ||೭||

ಗುಂಡಽನೆ ಗದ್ದ್ಯಾಣದ ಹೊಲ ಕೊಟ್ಟ ತಮ್ಮಾಽಗ|
ದಂಡಿ ತಂದಣಗ ಉಣಕೊಟ್ಟ| ಸೋ… ||೮||
*****

ಈ ಹಾಡಿನಲ್ಲಿ ಸತಿಯ ವಿಷಯದಲ್ಲಿ ಪತಿಗಿರುವ ಅಕ್ಕರತೆ ವರ್ಣಿಸಲ್ಪಟ್ಟಿದೆ. ಹಣೆಗೆ ದಂಡೆಯನ್ನು ಕಟ್ಟಿ ನೋಡುತ್ತಾನೆ. ಕೈಗೆ ಕಡೆಗ, ದ್ವಾರೇ ಮುಂತಾದ ಆಭರಣಗಳನ್ನಿಡಿಸಿ ನೋಡುತ್ತಾನೆ. ಅಷ್ಟಕ್ಕೂ ಸಾಲದೆ ಬಾಸಿಗವನ್ನು ತನ್ನಿರೆನ್ನುತ್ತಾನೆ. ತಂದು ಕೊಟ್ಟವರಿಗೆ ಪಾರಿತೋಷಿಕವನ್ನು ಕೊಡುತ್ತಾನೆ.

ಛಂದಸ್ಸು:- ತ್ರಿಪದಿಯ ಪೂರ್ವಾರ್ಧದಂತಿದೆ.

ಶಬ್ದ ಪ್ರಯೋಗಗಳು:- ಭಾಂವಕ್ಕ=ಸ್ಥಾನಕ್ಕೆ. ಗೊನಿ=ಗೊಂಚಲು. ಕೊಡವಿ=ದಸುವುಗಳು. ತಗತಾರ=ತೆಗೆದುಕೊಂಡು ಬಾರೆ. ನಂದಿಸೋಪಾನ=ಪೂರ್ವಕಾಲದಲ್ಲಿ ಪ್ರಚಾರದಲ್ಲಿದ್ದ ಮೆಟ್ಟಿಲುಗಳ ಸಾಲು. ನಸಲೀಗಿ=ನೊಸಲಿಗೆ(ಹಣೆಗೆ). ಗುಂಡುಗದ್ಯಾಣದ ಹೊಲ=ದುಂಡಗಿನ ಆಕಾರದ ಹೊನ್ನಿನ ನಾಣ್ಯಗಳನ್ನು ಕೊಟ್ಟು ಕೊಂಡ ಹೊಲ.

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...