Home / ಕವನ / ಕವಿತೆ / ಹಸುಮಗಳಽ ನೀಲಮ್ಮ

ಹಸುಮಗಳಽ ನೀಲಮ್ಮ

ಹಸುಮಗಳ ನೀಲಮ್ಮ ಬಸವಗ ಶರಣೆನ್ನ|
ನಸಲಿ ಮಾರಗದ ವಡಿಯಾಗ| ಈ ಶರಣವು ಮಾಡಿ|
ಹಸಿಗಿ ಬಾಗನ್ನಿ ಗರುಡಽವ ||೧||

ಹಕ್ಕಿ ಹಸಿಗೊಯ್ಯ ಕೋಗಿಲ ಪತ್ತಽಲೊಯ್ಯ|
ಅಕ್ಕ ನಾಗಮ್ಮ ಕತೀ ನಡಿಸ| ಈ ಸೋಬಾನಾ|
ಸಾಗನೂರವರ ಮನಿಯಾಗ ||೨||

ಆರಸರ ಹೆಂಡಽರ್‍ಯಾ ಅರವತ್ತಿನ ರಾಣ್ಯರ್‍ಯಾ|
ನೀಲವಽರಣ ಬಳಿಯವರ್‍ಯಾ| ನಮ್ಮವ್ವಗಳಿರ್‍ಯಾ|
ಬೇಗ ಸೋಬನಕ ಬರಽಬೇಕ ||೩||

ಗೌಡರ ಹೆಂಡರ್‍ಯಾ ಅರವತ್ತಿನ ರಾಣ್ಯಾರ್‍ಯಾ|
ನೀಲವಽರಣದ ಬಳಿಯವರ್‍ಯಾ| ನಮ್ಮವ್ವಗಳಿರ್‍ಯಾ|
ಬೇಗ ಸೋಬನಕ ಬರಽಬೇಕ ||೪||

ಹೆಂದಽರ ಮ್ಯಾಲಲ್ಲಿ ಜೋಡೆಡ್ಡು ಗಿಣಿ ಕೂತು|
ಪಂಕನಲ್ಲಾಡಿ ನಗತಾವ| ಅವು ಮಾತಾಡ್ಯಾವ|
ಅಕ್ಕ ಭಾವಾಗ ವರನಂದ ||೫||

ಕುಂಬೀಯನೆ ಮ್ಯಾಲ ಜೋಡೆಡ್ಡ ಗಿಣಿ ಕೂತು|
ಕಂಗನಲ್ಲಾಡಿ ನಗತಾವ| ಅವು ಮಾತಾಡ್ಯಾವ|
ತಂಗಿ ಮೈದುನಗ ವರನಂದ ||೬||

ಇಟ್ಟು ಹಾಡನೆಲ್ಲ ಒತ್ತಿ ಭರಣವ ತುಂಬಿ|
ವಜ್ಜರದ ಕೀಲಿ ಜಡಽದೇವ| ಈ ನಮ್ಮಽ ಹಾಡ|
ಸೋಬನಿದ್ದಲ್ಲಿ ತಗಽದೇವ ||೭||
*****

ಫಲಶೋಭನದ ಸಂಭ್ರಮವು ಇದರಲ್ಲಿ ವರ್ಣಿಸಲ್ಪಟ್ಟಿದೆ.

ಛಂದಸ್ಸು:- ತ್ರಿಪದಿ.

ಶಬ್ದ ಪ್ರಯೋಗಗಳು:- ನಸಲಿಮಾರಗ=ನೊಸಲಮಾರ್ಗ(?) ಅರವತ್ತಿನ ರಾಣ್ಯರ್‍ಯಾ=ದೊಡ್ಡ ಮನೆತನದ ಮೂಲಕ ಮನೆಗೆಲಸವು ಮುಗಿಯುವುದಕ್ಕೆ ತಡೆವಾಗುವುದರಿಂದ ಅರವೊತ್ತಿಗೆ ಸರವೊತ್ತಿಗೆ ಊಟ ಮಾಡುವರು. ಎಡ್ಡು=ಎರಡು. ಪಂಕನಲ್ಲಾಡಿ-ಪಕ್ಕಗಳನ್ನು ಅಲುಗಿಸಿ. ಕಂಗದಲ್ಲಾಡಿ=ಗರಿಗಳನ್ನು ಅದುರಿಸಿ. ವರ=ತಕ್ಕ. ಹೆಕ್ಕಿ ಹಸಿಗೊಯ್ಯ=ಹಕ್ಕಿಗಳಿರಾ ಸೇಸೆ ಎರೆಯಿರಿ. ಕತೀ ನಡಿಸು=ಕಾರ್ಯವನ್ನು ಸಾಗಿಸು.

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...