ಕರುಳು

ತಾಮ್ರಪರ್‍ಣಿಯ ಒಡಲ ರಾಜಮೌಕ್ತಿಕದ ಭಂ-
ಡಾರ ಮುದ್ರೆಯನೊಡೆಯೆ, ದಿನವು ನೀರನು ಧುಮುಕು-
ವಂಥ ಕುಂಗನು ಪಡೆವುದೇನು? ಮೈಮುರಿ ದುಡಿಯೆ
ಮರುದಿನವು ಅಣಿಗೊಳುವದಕೆ ಕೂಳತುತ್ತು; ಮನ
ಮರೆಯೆ ಕುಡಿಯಲು ಗುಟುಕು. ಹೆತ್ತ ಹೊಟ್ಟೆಯನ್ನು, ಕೈ
ಹಿಡಿದ ಮೈಯನು ತಣಿಸಲೆಂದು ದುಡಿವನೊ! ಮುತ್ತು-
ಗಾರ ಭಾಗ್ಯವನ್ನು ಲೆಕ್ಕಿಸನವನು, ತಾಯ ಮಡ-
ದಿಯ ಹರ್‍ಷ ಬಾಷ್ಪವೇ ಅವನ ಬದುಕಿನ ಹುರುಳು.

ಭವಜಲಧಿಯಲಿ ಮುಳುಗುತೇಳುತಿವೀ ಜೀವ-
ರಾಶಿ ಕಾಣುವದೇನು ಕೊನೆಗೆ, ಮಕ್ಕಳ ಮುದ್ದು-
ಕೂಟಕ್ಕೆ ಬಯಸಿ? ಆ ಸಾವುಕಾರನ ಹಾಗೆ
ಕಾಳ ಕೊಸರುವ ದುಡಿಮೆ; ಮಡಿವನಕ ಬದುಕವದು
ತಪ್ಪಿಲ್ಲ. ಇಲ್ಲಿಯ ಇರದೆ “ಅಯ್ಯೋ, ನೋಂದೆ.
ಬಂದೆಯಾ ಬಾ ಕಂದ ದಣಿದೆ” ಎನ್ನುವ ಕರುಳು?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭೂತಾಯಿ ರಕ್ಷಣೆ
Next post ರತ್ನನ್ ಯೋಚ್ನೆ

ಸಣ್ಣ ಕತೆ

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…