ಸಂತತಿ

“ವರನೆ ಬಾ ಇಲ್ಲ; ಮುಗಿಲಿಗೆ ನೆಲವನಿತ್ತಂತೆ
ನಿನಗೊಪ್ಪಿಸುವೆನಿವಳ. ಇವಳು ಸುಕ್ಷೇತ್ರ, ಕಾ-
ದುದಲಿ ಅರ್‍ಥದಲಿ ಸಹಧರ್‍ಮಿಣಿಯು ಮುಕ್ತರೊಲು,
ಚೆಲುವರನು, ಕಟ್ಟಾಳುಗಳನು, ಗಂಭೀರರನು
ಪಡೆದು ಇವಳಲಿ ಬುನಾದಿಯ ಮನೆಯ ಕಟ್ಟುಮುಂ-
ದಕೆ. ದೇವ ದೇವತಾ ಗಣಕೆ ಮೇಲ್ಪಂಕ್ತಿಯೆನೆ
ನಿನ್ನ ಮನದಲಿ ಹೊಳೆದು ಬೆಳೆವ, ಕನಸಲಿ ಇವಳು-
ಕೊಂಡು ಕೊನೆಯುವ ಮೂರ್‍ತಿಗಳನ್ನು ಮೂಡಿಸಿರಿನ್ನು”

“ಕೃತಯುಗವು ಕಲಿಯುಗಕೆ ಇಳಿದು ನಿಂತಿತು; ಮಾನ-
ವನ ದುಃಖದರ್‍ಶನವು ಬೆಳೆದು ಬಂದಿತು; ಸುಖವು
ಕಣಸಿನಲಿ ಕೆಣಕುತಿದೆ. ವಾನರರು ನರರಾದ-
ರೋ, ನರರೆ ವಾನರರು ಆಗುತಿಹರೋ? ಕವಲು
ಕವಲಾಗುತಿದೆ ಆಸೆ; ಕುಣಿಯುತಿದೆ ಪ್ರಾಣ, ಮಂ-
ತ್ರವನೆ ನುಂಗಿತೊ ತಂತ್ರ, ಎಲೆ ಕನ್ನೆ, ಮನದನ್ನೆ?”
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸ್ತ್ರೀ ಸಾಮರ್‍ಥ್ಯಹರಣ-ಲಿಂಗತ್ವ ರಾಜಕಾರಣ
Next post ಯೆಂಡ ಕುಡಿಯೋರ್ ನಾವು

ಸಣ್ಣ ಕತೆ

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

cheap jordans|wholesale air max|wholesale jordans|wholesale jewelry|wholesale jerseys