ಇಜ್ಜೋಡು

ಒಂದಿದ್ದರೊಂದಿಲ್ಲ; ಇಂದಿಗೂ ಎರಡು ಹೊಂ-
ದಿಲ್ಲ; ನಡೆದಿದೆ ಸೃಷ್ಟಿ; ಫಲವೀವ ಅಮೃತ ವೃ-
ಷ್ಟಿಯ ಬಯಸಿ, ಕೊನರುತಿದೆ ಕಮರುತಿದೆ. ಎಲೆಯ ಪಸ-
ರದಲಿ ಕಾಣದಿದೆ ಹೂ-ಹಣ್ಣು, ಪ್ರಥಮ ಪ್ರಾಯ-
ದಲ್ಲಿ ನಾಚಿಗೆ ಮುಸುಗಿ ಸುಕುಮಾರ ಕುಸುಮಸಮ-
ಸಿಂಗಾರವಡಗೆ, ಪುರುಷನನುರಾಗವು ಬಣ್ಣ-
ಗುಂದಿ, ಹಿಮಧವಲ ಶಾಂತಿಯಲಿ, ಚಂದಿರನ ಪಡಿ-
ನೆಳಲ ಕಾಂತಿಯಲಿಹುದು. ಸ್ವಗತ-ತೃಪ್ತನೊ ನಲ್ಲ.

ಹಣ್ಣೆಲೆಯು ಉದುರಲಿರುವಾಗ, ಶಾರದ ಶುಭ್ರ
ಕೌಮುದಿಯು ಕೆಣಕುತಿದೆ ವಿರಸ ಶಿಶಿರವನು, ಮಾ-
ಗಿಯ ದಾಟಿ ಸುಗ್ಗಿ ಕೆಂದಳಿರ, ಹದ ಪಡೆದ ಹೃದ-
ಯದ ಹವಣುಗೊಂಡ ಸತಿ ನೇತ್ರಪಲ್ಲವಿಸೀಗ
ಕರೆಯುವಳು. ಹತವಿಧಿಯೆ! ಕದ ತೆರೆಯಲಿಲ್ಲ, ಕದ
ತಟೆದಾಗ; ಕದ ತೆರೆಯೆ, ಆ ಪುರುಷ ಬರಲೊಲ್ಲ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸ್ತ್ರೀ ಶ್ರೇಷ್ಠ ಭೌತಿಕತೆ- ಆ ಮೂರು ದಿನಗಳು -ಸಾಮಾಜಿಕ ಅಸಮಾನತೆ
Next post ಬೇವಾರ್‍ಸಿಗೆ

ಸಣ್ಣ ಕತೆ

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…