ಇಜ್ಜೋಡು

ಒಂದಿದ್ದರೊಂದಿಲ್ಲ; ಇಂದಿಗೂ ಎರಡು ಹೊಂ-
ದಿಲ್ಲ; ನಡೆದಿದೆ ಸೃಷ್ಟಿ; ಫಲವೀವ ಅಮೃತ ವೃ-
ಷ್ಟಿಯ ಬಯಸಿ, ಕೊನರುತಿದೆ ಕಮರುತಿದೆ. ಎಲೆಯ ಪಸ-
ರದಲಿ ಕಾಣದಿದೆ ಹೂ-ಹಣ್ಣು, ಪ್ರಥಮ ಪ್ರಾಯ-
ದಲ್ಲಿ ನಾಚಿಗೆ ಮುಸುಗಿ ಸುಕುಮಾರ ಕುಸುಮಸಮ-
ಸಿಂಗಾರವಡಗೆ, ಪುರುಷನನುರಾಗವು ಬಣ್ಣ-
ಗುಂದಿ, ಹಿಮಧವಲ ಶಾಂತಿಯಲಿ, ಚಂದಿರನ ಪಡಿ-
ನೆಳಲ ಕಾಂತಿಯಲಿಹುದು. ಸ್ವಗತ-ತೃಪ್ತನೊ ನಲ್ಲ.

ಹಣ್ಣೆಲೆಯು ಉದುರಲಿರುವಾಗ, ಶಾರದ ಶುಭ್ರ
ಕೌಮುದಿಯು ಕೆಣಕುತಿದೆ ವಿರಸ ಶಿಶಿರವನು, ಮಾ-
ಗಿಯ ದಾಟಿ ಸುಗ್ಗಿ ಕೆಂದಳಿರ, ಹದ ಪಡೆದ ಹೃದ-
ಯದ ಹವಣುಗೊಂಡ ಸತಿ ನೇತ್ರಪಲ್ಲವಿಸೀಗ
ಕರೆಯುವಳು. ಹತವಿಧಿಯೆ! ಕದ ತೆರೆಯಲಿಲ್ಲ, ಕದ
ತಟೆದಾಗ; ಕದ ತೆರೆಯೆ, ಆ ಪುರುಷ ಬರಲೊಲ್ಲ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸ್ತ್ರೀ ಶ್ರೇಷ್ಠ ಭೌತಿಕತೆ- ಆ ಮೂರು ದಿನಗಳು -ಸಾಮಾಜಿಕ ಅಸಮಾನತೆ
Next post ಬೇವಾರ್‍ಸಿಗೆ

ಸಣ್ಣ ಕತೆ

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

cheap jordans|wholesale air max|wholesale jordans|wholesale jewelry|wholesale jerseys