Home / ಲೇಖನ / ಇತರೆ / ಶಾಲೆಗೆ ಬಂದ ಚಿರತೆ

ಶಾಲೆಗೆ ಬಂದ ಚಿರತೆ

ಜುಲೈ ೨೦೧೫ ರಂದು ಗುರುವಾರ ದಿನದಂದು ಚಿಕ್ಕ ಮಗಳೂರಿನಲ್ಲಿ ಜರುಗಿದ ಕತೆಯಿದು. ಚಿಕ್ಕ ಮಗಳೂರಿನ ಹೃದಯ ಭಾಗದಲ್ಲಿರುವ ಟೌನ್ ಮಹಿಳಾ ಸಮಾಜ ಶಾಲೆಗೆ (ಟಿ‌ಎಂಎಸ್) ಚಿರತೆಯೊಂದು ಬಂದೇ ಬಿಟ್ಟಿತು!

ಅಲ್ಲಿದ್ದ ಮಕ್ಕಳು ಶಿಕ್ಷಕರೆಲ್ಲ ಗಾಬರಿ ಬಿದ್ದು ಓಡಿದರು. ಈ ಚಿರತೆ ಶಾಲೆಗೆ ಬರುವ ಮುನ್ನ- ಕೋರ್ಟು ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಪಟ್ಟಾಭಿರಾಮೇಗೌಡ ಎಂಬುವವರ ಮೇಲೆ ಎರಗಿ ಗಾಯ ಮಾಡಿದೆ!

ಶಾಲೆಗೆ ಬಂದ ಚಿರತೆಯನ್ನು ಕೊಠಡಿಯಲ್ಲಿ ಬಂದಿಯನ್ನಾಗಿಸಿ ಉಪಾಯವಾಗಿ ಮೆಲ್ಲಗೆ ಕಿಟಕಿ ಹಾಕುವಾಗ ಅದು ಅರಣ್ಯ ಇಲಾಖೆಯ ಚಾಲಕ ಗಣೇಶ್ ಎಂಬುವರ ಬಲಗೈಯ ನಾಲ್ಕು ಬೆರಳುಗಳನ್ನು ಕಚ್ಚಿದೆ! ಇವರನ್ನು ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳಿಸಿದ್ದಾರೆ! ಶಾಲೆ ಪಕ್ಕದ ಕಡೂರು ಕ್ಲಬ್ ಕಡೆಯಿಂದ ಮರದ ಮೇಲಿಂದ ರಸ್ತೆಗೆ ಚಿರತೆ ಜಿಗಿದಿದೆ. ಅಲ್ಲಿಂದ ಶಾಲೆಗೆ ಬಂದಿದೆ. ಅದನ್ನು ಕಂಡು ಎಲ್ಲರೂ ಹೌಹಾರಿದ್ದಾರೆ. ಅಲ್ಲೇ ಇದ್ದ ನೆರಳಚ್ಚು ಯಂತ್ರದ ಕೊಠಡಿ ಸೇರಿಕೊಂಡಿದೆ.

ತದ ನಂತರ ಸ್ಥಳಕ್ಕೆ ಬಂದ ಅರಣ್ಯ ಸಿಬ್ಬಂದಿ ಸತತವಾಗಿ ಐದಾರು ತಾಸು ಕಾರ್ಯಚರಣೆಯ ಮೂಲಕ ಸುರಕ್ಷಿತವಾಗಿ ಚಿರತೆಯನ್ನು ಸೆರೆ ಹಿಡಿದರು.

ಶಿವಮೊಗ್ಗದ ಪಶು ವೈದ್ಯಕೀಯ ಕಾಲೇಜಿನ ಡಾ. ವಿನಯ್‌ ಅವರು ಅರಿವಳಿಕೆಯ ಚುಚ್ಚುಮದ್ದನ್ನು ಅಲ್ಲಿದ್ದ ಚಿರತೆಗೆ ಯಶಸ್ವಿಯಾಗಿ ಸಿಡಿಸಿ ಅಲ್ಲಿದ್ದ ಜನರಿಂದ ಮೆಚ್ಚುಗೆ ಗಳಿಸಿದರು.

ಈ ಅರಿವಳಿಕೆಯ ಚುಚ್ಚುಮದ್ದನ್ನು ಸಿಡಿಸುವ ಪರಿಣಿತ ಪಶು ವೈದ್ಯರು ಇಡೀ ಚಿಕ್ಕಮಗಳೂರು ಜಿಲ್ಲೆಯಲ್ಲೇ ಇಲ್ಲದಿರುವುದರಿಂದ ಈ ಒಂದು ಚಿರತೆಯ ಕಾರ್‍ಯಚರಣೆಯು ತುಂಬಾ ತಡವಾಯಿತು.

ತದನಂತರ ಈ ಚಿರತೆಯನ್ನು ಸುರಕ್ಷಿತವಾಗಿ ಅರಣ್ಯ ಸಿಬ್ಬಂದಿ ಹಿಡಿದರು. ಸಕಲ ಬಂದೋಬಸ್ತೋವಿನ ನಡುವಿನ ಮಧ್ಯೆ ಭದ್ರಾ ಅಭಯಾರಣ್ಯಕ್ಕೆ ಕ್ಷೇಮವಾಗಿ ಬಿಟ್ಟು ಟಾಟಾ ಮಾಡಿ ಬಂದರು.

ಚಿಕ್ಕಮಂಗಳೂರಿನ ತುಂಬೆಲ್ಲ ಎರಡು ಮೂರು ದಿನ ಚಿರತೆ ಶಾಲೆಗೆ ಬಂದ ಸುದ್ದಿನೇ ಚರ್‍ಚೆಗೆ ಗ್ರಾಸವಾಯಿತು.

ಈಗೀಗ ಕಾಡಿನ ಪ್ರಾಣಿಗಳು ಆಹಾರ, ನೀರು, ಹರಸುತ್ತಾ ನಾಡಿಗೆ ಬರುತ್ತಿವೆ. ನಾಡಿನ ಜನ ಕಾಡನ್ನು ಉಳಿಸಿದರೆ ಮಾತ್ರ ನಾಡು ಉಳಿದೀತೂ ಇಲ್ಲವಾದರೆ ವಿಪತ್ತು ತಪ್ಪಿದ್ದಲ್ಲ! ಗಂಡಾಂತರ ಕಟ್ಟಿಟ್ಟ ಬುತ್ತಿ…
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...