ಶಾಲೆಗೆ ಬಂದ ಚಿರತೆ

ಶಾಲೆಗೆ ಬಂದ ಚಿರತೆ

ಜುಲೈ ೨೦೧೫ ರಂದು ಗುರುವಾರ ದಿನದಂದು ಚಿಕ್ಕ ಮಗಳೂರಿನಲ್ಲಿ ಜರುಗಿದ ಕತೆಯಿದು. ಚಿಕ್ಕ ಮಗಳೂರಿನ ಹೃದಯ ಭಾಗದಲ್ಲಿರುವ ಟೌನ್ ಮಹಿಳಾ ಸಮಾಜ ಶಾಲೆಗೆ (ಟಿ‌ಎಂಎಸ್) ಚಿರತೆಯೊಂದು ಬಂದೇ ಬಿಟ್ಟಿತು!

ಅಲ್ಲಿದ್ದ ಮಕ್ಕಳು ಶಿಕ್ಷಕರೆಲ್ಲ ಗಾಬರಿ ಬಿದ್ದು ಓಡಿದರು. ಈ ಚಿರತೆ ಶಾಲೆಗೆ ಬರುವ ಮುನ್ನ- ಕೋರ್ಟು ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಪಟ್ಟಾಭಿರಾಮೇಗೌಡ ಎಂಬುವವರ ಮೇಲೆ ಎರಗಿ ಗಾಯ ಮಾಡಿದೆ!

ಶಾಲೆಗೆ ಬಂದ ಚಿರತೆಯನ್ನು ಕೊಠಡಿಯಲ್ಲಿ ಬಂದಿಯನ್ನಾಗಿಸಿ ಉಪಾಯವಾಗಿ ಮೆಲ್ಲಗೆ ಕಿಟಕಿ ಹಾಕುವಾಗ ಅದು ಅರಣ್ಯ ಇಲಾಖೆಯ ಚಾಲಕ ಗಣೇಶ್ ಎಂಬುವರ ಬಲಗೈಯ ನಾಲ್ಕು ಬೆರಳುಗಳನ್ನು ಕಚ್ಚಿದೆ! ಇವರನ್ನು ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳಿಸಿದ್ದಾರೆ! ಶಾಲೆ ಪಕ್ಕದ ಕಡೂರು ಕ್ಲಬ್ ಕಡೆಯಿಂದ ಮರದ ಮೇಲಿಂದ ರಸ್ತೆಗೆ ಚಿರತೆ ಜಿಗಿದಿದೆ. ಅಲ್ಲಿಂದ ಶಾಲೆಗೆ ಬಂದಿದೆ. ಅದನ್ನು ಕಂಡು ಎಲ್ಲರೂ ಹೌಹಾರಿದ್ದಾರೆ. ಅಲ್ಲೇ ಇದ್ದ ನೆರಳಚ್ಚು ಯಂತ್ರದ ಕೊಠಡಿ ಸೇರಿಕೊಂಡಿದೆ.

ತದ ನಂತರ ಸ್ಥಳಕ್ಕೆ ಬಂದ ಅರಣ್ಯ ಸಿಬ್ಬಂದಿ ಸತತವಾಗಿ ಐದಾರು ತಾಸು ಕಾರ್ಯಚರಣೆಯ ಮೂಲಕ ಸುರಕ್ಷಿತವಾಗಿ ಚಿರತೆಯನ್ನು ಸೆರೆ ಹಿಡಿದರು.

ಶಿವಮೊಗ್ಗದ ಪಶು ವೈದ್ಯಕೀಯ ಕಾಲೇಜಿನ ಡಾ. ವಿನಯ್‌ ಅವರು ಅರಿವಳಿಕೆಯ ಚುಚ್ಚುಮದ್ದನ್ನು ಅಲ್ಲಿದ್ದ ಚಿರತೆಗೆ ಯಶಸ್ವಿಯಾಗಿ ಸಿಡಿಸಿ ಅಲ್ಲಿದ್ದ ಜನರಿಂದ ಮೆಚ್ಚುಗೆ ಗಳಿಸಿದರು.

ಈ ಅರಿವಳಿಕೆಯ ಚುಚ್ಚುಮದ್ದನ್ನು ಸಿಡಿಸುವ ಪರಿಣಿತ ಪಶು ವೈದ್ಯರು ಇಡೀ ಚಿಕ್ಕಮಗಳೂರು ಜಿಲ್ಲೆಯಲ್ಲೇ ಇಲ್ಲದಿರುವುದರಿಂದ ಈ ಒಂದು ಚಿರತೆಯ ಕಾರ್‍ಯಚರಣೆಯು ತುಂಬಾ ತಡವಾಯಿತು.

ತದನಂತರ ಈ ಚಿರತೆಯನ್ನು ಸುರಕ್ಷಿತವಾಗಿ ಅರಣ್ಯ ಸಿಬ್ಬಂದಿ ಹಿಡಿದರು. ಸಕಲ ಬಂದೋಬಸ್ತೋವಿನ ನಡುವಿನ ಮಧ್ಯೆ ಭದ್ರಾ ಅಭಯಾರಣ್ಯಕ್ಕೆ ಕ್ಷೇಮವಾಗಿ ಬಿಟ್ಟು ಟಾಟಾ ಮಾಡಿ ಬಂದರು.

ಚಿಕ್ಕಮಂಗಳೂರಿನ ತುಂಬೆಲ್ಲ ಎರಡು ಮೂರು ದಿನ ಚಿರತೆ ಶಾಲೆಗೆ ಬಂದ ಸುದ್ದಿನೇ ಚರ್‍ಚೆಗೆ ಗ್ರಾಸವಾಯಿತು.

ಈಗೀಗ ಕಾಡಿನ ಪ್ರಾಣಿಗಳು ಆಹಾರ, ನೀರು, ಹರಸುತ್ತಾ ನಾಡಿಗೆ ಬರುತ್ತಿವೆ. ನಾಡಿನ ಜನ ಕಾಡನ್ನು ಉಳಿಸಿದರೆ ಮಾತ್ರ ನಾಡು ಉಳಿದೀತೂ ಇಲ್ಲವಾದರೆ ವಿಪತ್ತು ತಪ್ಪಿದ್ದಲ್ಲ! ಗಂಡಾಂತರ ಕಟ್ಟಿಟ್ಟ ಬುತ್ತಿ…
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಿಶ್ವಾಂಜಲಿ
Next post ಅಡಿಕೆ ಆಡುವ ಹಾಡು

ಸಣ್ಣ ಕತೆ

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

cheap jordans|wholesale air max|wholesale jordans|wholesale jewelry|wholesale jerseys