Home / ಲೇಖನ / ಇತರೆ / ಶಾಲೆಗೆ ಬಂದ ಚಿರತೆ

ಶಾಲೆಗೆ ಬಂದ ಚಿರತೆ

ಜುಲೈ ೨೦೧೫ ರಂದು ಗುರುವಾರ ದಿನದಂದು ಚಿಕ್ಕ ಮಗಳೂರಿನಲ್ಲಿ ಜರುಗಿದ ಕತೆಯಿದು. ಚಿಕ್ಕ ಮಗಳೂರಿನ ಹೃದಯ ಭಾಗದಲ್ಲಿರುವ ಟೌನ್ ಮಹಿಳಾ ಸಮಾಜ ಶಾಲೆಗೆ (ಟಿ‌ಎಂಎಸ್) ಚಿರತೆಯೊಂದು ಬಂದೇ ಬಿಟ್ಟಿತು!

ಅಲ್ಲಿದ್ದ ಮಕ್ಕಳು ಶಿಕ್ಷಕರೆಲ್ಲ ಗಾಬರಿ ಬಿದ್ದು ಓಡಿದರು. ಈ ಚಿರತೆ ಶಾಲೆಗೆ ಬರುವ ಮುನ್ನ- ಕೋರ್ಟು ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಪಟ್ಟಾಭಿರಾಮೇಗೌಡ ಎಂಬುವವರ ಮೇಲೆ ಎರಗಿ ಗಾಯ ಮಾಡಿದೆ!

ಶಾಲೆಗೆ ಬಂದ ಚಿರತೆಯನ್ನು ಕೊಠಡಿಯಲ್ಲಿ ಬಂದಿಯನ್ನಾಗಿಸಿ ಉಪಾಯವಾಗಿ ಮೆಲ್ಲಗೆ ಕಿಟಕಿ ಹಾಕುವಾಗ ಅದು ಅರಣ್ಯ ಇಲಾಖೆಯ ಚಾಲಕ ಗಣೇಶ್ ಎಂಬುವರ ಬಲಗೈಯ ನಾಲ್ಕು ಬೆರಳುಗಳನ್ನು ಕಚ್ಚಿದೆ! ಇವರನ್ನು ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳಿಸಿದ್ದಾರೆ! ಶಾಲೆ ಪಕ್ಕದ ಕಡೂರು ಕ್ಲಬ್ ಕಡೆಯಿಂದ ಮರದ ಮೇಲಿಂದ ರಸ್ತೆಗೆ ಚಿರತೆ ಜಿಗಿದಿದೆ. ಅಲ್ಲಿಂದ ಶಾಲೆಗೆ ಬಂದಿದೆ. ಅದನ್ನು ಕಂಡು ಎಲ್ಲರೂ ಹೌಹಾರಿದ್ದಾರೆ. ಅಲ್ಲೇ ಇದ್ದ ನೆರಳಚ್ಚು ಯಂತ್ರದ ಕೊಠಡಿ ಸೇರಿಕೊಂಡಿದೆ.

ತದ ನಂತರ ಸ್ಥಳಕ್ಕೆ ಬಂದ ಅರಣ್ಯ ಸಿಬ್ಬಂದಿ ಸತತವಾಗಿ ಐದಾರು ತಾಸು ಕಾರ್ಯಚರಣೆಯ ಮೂಲಕ ಸುರಕ್ಷಿತವಾಗಿ ಚಿರತೆಯನ್ನು ಸೆರೆ ಹಿಡಿದರು.

ಶಿವಮೊಗ್ಗದ ಪಶು ವೈದ್ಯಕೀಯ ಕಾಲೇಜಿನ ಡಾ. ವಿನಯ್‌ ಅವರು ಅರಿವಳಿಕೆಯ ಚುಚ್ಚುಮದ್ದನ್ನು ಅಲ್ಲಿದ್ದ ಚಿರತೆಗೆ ಯಶಸ್ವಿಯಾಗಿ ಸಿಡಿಸಿ ಅಲ್ಲಿದ್ದ ಜನರಿಂದ ಮೆಚ್ಚುಗೆ ಗಳಿಸಿದರು.

ಈ ಅರಿವಳಿಕೆಯ ಚುಚ್ಚುಮದ್ದನ್ನು ಸಿಡಿಸುವ ಪರಿಣಿತ ಪಶು ವೈದ್ಯರು ಇಡೀ ಚಿಕ್ಕಮಗಳೂರು ಜಿಲ್ಲೆಯಲ್ಲೇ ಇಲ್ಲದಿರುವುದರಿಂದ ಈ ಒಂದು ಚಿರತೆಯ ಕಾರ್‍ಯಚರಣೆಯು ತುಂಬಾ ತಡವಾಯಿತು.

ತದನಂತರ ಈ ಚಿರತೆಯನ್ನು ಸುರಕ್ಷಿತವಾಗಿ ಅರಣ್ಯ ಸಿಬ್ಬಂದಿ ಹಿಡಿದರು. ಸಕಲ ಬಂದೋಬಸ್ತೋವಿನ ನಡುವಿನ ಮಧ್ಯೆ ಭದ್ರಾ ಅಭಯಾರಣ್ಯಕ್ಕೆ ಕ್ಷೇಮವಾಗಿ ಬಿಟ್ಟು ಟಾಟಾ ಮಾಡಿ ಬಂದರು.

ಚಿಕ್ಕಮಂಗಳೂರಿನ ತುಂಬೆಲ್ಲ ಎರಡು ಮೂರು ದಿನ ಚಿರತೆ ಶಾಲೆಗೆ ಬಂದ ಸುದ್ದಿನೇ ಚರ್‍ಚೆಗೆ ಗ್ರಾಸವಾಯಿತು.

ಈಗೀಗ ಕಾಡಿನ ಪ್ರಾಣಿಗಳು ಆಹಾರ, ನೀರು, ಹರಸುತ್ತಾ ನಾಡಿಗೆ ಬರುತ್ತಿವೆ. ನಾಡಿನ ಜನ ಕಾಡನ್ನು ಉಳಿಸಿದರೆ ಮಾತ್ರ ನಾಡು ಉಳಿದೀತೂ ಇಲ್ಲವಾದರೆ ವಿಪತ್ತು ತಪ್ಪಿದ್ದಲ್ಲ! ಗಂಡಾಂತರ ಕಟ್ಟಿಟ್ಟ ಬುತ್ತಿ…
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...