Home / ಲೇಖನ / ಇತರೆ / ಭಾರತ ಕಮ್ಮಿಯಿಲ್ಲ

ಭಾರತ ಕಮ್ಮಿಯಿಲ್ಲ

“ಫಾರ್ಚೂನ್- ೫೦೦ ಲಾರ್‍ಜೆಸ್ಟ್ ಕಂಪೆನೀಸ್” ಪಟ್ಟಿಯಲ್ಲಿ ಇಡೀ ವಿಶ್ವದ ೫೦೦ ಬೃಹತ್ ಕಂಪನಿಗಳ ಪಟ್ಟಿಯಲ್ಲಿ ಭವ್ಯ ಭಾರತದ ಏಳು ಅದ್ಭುತ ಕಂಪನಿಗಳೂ ಸ್ಥಾನಮಾನ ಪಡೆದುಕೊಂಡಿರುವುದೊಂದು ಹೆಗ್ಗಳಿಕೆಯ ವಿಷಯವಾಗಿದೆ.

೧ ಭವ್ಯ ಭಾರತದ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒ‌ಎನ್‌ಜಿಸಿ)

೨ ಭಾರತೀಯ ತೈಲ ನಿಗಮ (ಐ‌ಒಸಿ)

೩ ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೊರೇಷಸನ್ ಲಿಮಿಟೆಡ್ (ಎಚ್ ಪಿಸಿ‌ಎಲ್)

೪ ರಿಲಿಯನ್ಸ್ ಇಂಡಸ್ಟ್ರೀಸ್

೫ ಟಾಟಾ ಮೋಟಾರ್‍ಸ್

೬ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿ‌ಐ)

೭ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿ‌ಎಲ್)

ಇವೆಲ್ಲ “ಫಾರ್ಚೂನ್ ೫೦೦ ಲಾರ್‍ಜ್‌ಸ್ಟ್ ಕಂಪನೀಸ್” ಪಟ್ಟಿಗೆ ಸೇರಿವೆ.

ಜಾಗತಿಕ ಮಟ್ಟದ ಈ ೫೦೦ ಬೃಹತ್ ಕಂಪನಿಗಳು ೨೦೧೪ ರಲ್ಲಿ ಒಟ್ಟಾರೆಯಾಗಿ ೩೧.೨ ಲಕ್ಷ ಕೋಟಿ ಅಮೆರಿಕನ್ ಡಾಲರ್ ವರಮಾನ ಗಳಿಸಿದ್ದು ಒಟ್ಟು ೧.೭೦ ಲಕ್ಷ ಕೋಟಿ ಡಾಲರ್‌ಗಳಷ್ಟು ನಿವ್ವಳ ಲಾಭದತ್ತ ಮುನ್ನಡೆದಿದ್ದವು!

ಈ ೫೦೦ ಕಂಪನಿಗಳು ವಿಶ್ವದ ೩೬ ದೇಶವಿದೇಶಗಳಲ್ಲಿ ವಹಿವಾಟು ನಡೆಸಿದ್ದು ಒಟ್ಟಾರೆಯಾಗಿ ೬೫ ಲಕ್ಷ ಮಂದಿಗೆ ಈಗಾಗಲೇ ಉದ್ಯೋಗ ನೀಡಿವೆ.

ಈ ಫಾರ್ಚೂನ್ ೫೦೦ ಲಾರ್‍ಜೆಸ್ಟ್ ಕಂಪನೀಸ್- ಪಟ್ಟಿಯಲ್ಲಿ ವಾಲ್‌ಮಾರ್ಟ್ ಮೊತ್ತ ಮೊದಲ ಸ್ಥಾನದಲ್ಲಿದೆ.

ಚೀನಾದ ತೈಲ ಸಂಸ್ಕರಣೆ ಕಂಪನಿ ಆನ್ ಒಪೆಕ್ ಗ್ರೂಪ್ ಎರಡನೆಯ ಸ್ಥಾನದಲ್ಲಿದೆ.

ನೆದರ್‌ಲೆಂಡಿನ ರಾಯಲ್ ಡಚ್‌ಷಲ್, ಚೀನಾ ನ್ಯಾಷನಲ್ ಪೆಟ್ರೋಲಿಯಂ ಎಕ್ಸಾನ್ ಮೊಬಿಲ್ ನಂತರದ ಸ್ಥಾನಮಾನದಲ್ಲಿದೆ.

ಈ ೫೦೦ ಜಾಗತಿಕ ಮಟ್ಟದ ಕಂಪನಿಗಳಲ್ಲಿ ಆಪಲ್ ೧೫ ನೇ ಸ್ಥಾನದಲ್ಲಿ ಜೆಪಿ ಮಾರ್ಗನ್ ಚೇಸ್ ೬೧ ನೇ ಸ್ಥಾನದಲ್ಲಿ, ಐಬಿ‌ಎಂ ೮೨ ನೆಯ ಸ್ಥಾನದಲ್ಲಿ, ಮೈಕ್ರೋಸಾಫ್ಟ್ ೯೫ ನೆಯ ಸ್ಥಾನದಲ್ಲಿ ಗೂಗಲ್ ೧೨೪ ನೆಯ ಸ್ಥಾನದಲ್ಲಿ ಪೆಪ್ಸಿ ೧೪೧ ನೆಯ ಸ್ಥಾನದಲ್ಲಿ ಇಂಟೆಲ್ ೧೮೨ ನೆಯ ಸ್ಥಾನದಲ್ಲಿ ಗೋಲ್ಡ್‌ಮನ್ ಸ್ಯಾಕ್ಸ್ ೨೭೮ ನೆಯ ಸ್ಥಾನದಲ್ಲಿ ಇವೆಲ್ಲ ಕಂಪನಿಗಳು ಅಮೆರಿಕ ಮೂಲದವೇ ಆಗಿವೆ.

ಹೋದ ವರ್ಷದೊಂದಿಗೆ ತುಲನೆ ಮಾಡಿದಲ್ಲಿ ಈ ಬಾರಿ ಟಾಟಾ ಮೋಟಾರ್ಸ್ ಹಾಗೂ ಎಸ್‌ಬಿ‌ಐ, ಒ‌ಎನ್‌ಜಿಸಿ- ರಿಲಯನ್ಸ್- ಎಚ್‌ಪಿಸಿ‌ಎಲ್‌- ಬಿಪಿಸಿ‌ಎಲ್ ಇವೆಲ್ಲ ಫಾರ್ಚೂನ್ ಪಟ್ಟಿಯ ಬ್ಯಾಂಕಿಂಗ್‌ನಲ್ಲಿ ಕೆಳಕ್ಕಿಳಿದಿವೆ.

ಏನೇ ಇದ್ದರೂ ಭವ್ಯ ಭಾರತದ ಕಂಪನಿಗಳು ಬೇರೆ ಯಾವುದೇ ದೇಶದ ಕಂಪನಿಗಳಿಗಿಂತ, ಕಡಿಮೆ ಇಲ್ಲವೆಂಬುದೊಂದು ಹೆಗ್ಗಳಿಕೆಯಲ್ಲವೇ??
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...