Home / ಕವನ / ಕವಿತೆ / ಗಿಳಿವಿಂಡು

ಗಿಳಿವಿಂಡು

ಒಂದರಳೆ ಮರದಲ್ಲಿ
ಸಂಜೆಯಾಗಿರುವಲ್ಲಿ
ಒಂದೊಂದೆ ಮರಳುವವು ಸಾಲುಗೊಂಡು :
ಒಂದೊಂದೆ ಮರಳುವವು
ಗಿಳಿಯೆಲ್ಲ ತೆರಳುವವು
ಗೂಡುಗೊಂಡಿಹ ಮರವನಿದಿರುಗೊಂಡು.

ಸಂಧ್ಯೆಯಿಂದೀಚೆಗೆನೆ
ಸ್ಮರನೆಚ್ಚ ಶರಗಳೆನೆ
ತಾಗುತಿದೆ ಗಿಳಿಹಿಂಡು ಬಂದು ಮರಕೆ.
ಕೊಂಬೆಮೇಲೆಳೆಮರಿಯು
ನಂಬಿ ತಾಯಿಯನರಿಯು-
ತಿರೆ ಮಿಡಿಯಿತೆನ್ನೆದೆಯು ದೀನ ಸ್ವರಕೆ.

ಮರ, ಸ್ಮರನ ಬೀಡೆಂದು-
ಗಿಳಿಗಾವಲಿಹುದೆಂದು-
ಗಳಹುತಿದ್ದನು ಹಳೆಯ ದಿನದ ಕವಿಯು :
ಅಂದಿನಾ ಬಾಳಿನಾ
ಇಂದಿನಾ ಹಾಳಿನಾ
ಗತಿ ಬೇರೆ ಶ್ರುತಿ ಬೇರೆ,-ಕಹಿಯು ಸವಿಯು,

ನೂರಾರು ಗಿಳಿಯ ಮನೆ-
ಯೊಳಗೊಂಡ ಮರದ ಕೊನೆ-
ಯೆಲೆಗಳಲಿ ತೂರಾಡಿ ಚೀರಾಡುತ
ಒಂದು ಗಿಳಿಯಿನ್ನೊಂದ-
ನಲ್ಲಿ ಭೀ ಥೂ ಎಂದು,
ತನ್ನದಿದು ತನಗೆಂದು ಹೋರಾಡುತ

ಬರೆ, ಕೇಳಿ ಚೀರ್‍ದನಿಯ,
ನೋಡಿಲ್ಲಿ! ಹೂಗಣೆಯ
ಹಬ್ಬ ವಿಹುದೆನಬಹುದೆ ಕಣ್ಣು ಮುಚ್ಚಿ?
ಒಂದು ಗಿಳಿಯಿನ್ನೊಂದ-
ನೆದುರಿಸಲು ಕಡುನೊಂದು
ಕದನವೆಸಗುತ ಕೂಕ್ಕೆ ಚುಚ್ಚಿ ಚುಚ್ಚಿ?

ಒಂದೊಂದು ಗಿಳಿಗೊಂದು
ಮನೆಯಿಹುದು ಇದ್ದರೂ
ಗಿಳಿಯ ಗೊಂದಣನಿಂತು ಹಾರ್‍ವುದೇಕೆ?
ಬೇರೊಂದು ಗಿಳಿಯ ಮನೆ-
ಯನ್ನು ಸೇರುತ ಕಲಹ-
ವೆಸಗಿ ತಿಳಿವಿಲ್ಲದಲೆ ಸಾರ್‍ವುದೇಕೆ?

ಎಲ್ಲರಿಗೆ ಸವಿಗನಸು,
ಎಲ್ಲರಿಗೆ ಸವಿತಿನಸು,
ಎಲ್ಲರಿಗದೆಲ್ಲವನು ಕೊಡುವಳಿಳೆಯು.
ಕಲ್ಲೆದೆಯವರು ಕೆಲರು
ಮೆಲ್ಲುವರದೆಲ್ಲವನು
ಇಲ್ಲಿಹುದು ನೋಡು ಅನ್ಯಾಯದೆಳೆಯು!

ಬಳಿಗೆ ಸುಳಿವಳು ರಾತ್ರಿ
ಇವಳೆ ಎಲ್ಲರ ಧಾತ್ರಿ!
ತಲೆಗೊಂದು ಮಂಚವನು ಮಲಗಲಿತ್ತು
ಹಗಲೆಲ್ಲ ಹಿರಿ ವಯಣ,
ಮುಗಿಲುದ್ದ ಕುಡ್ಯಾಣ-
ಕಣಿಗೊಳಿಸುವಳು ಗಿಳಿಯ, ಕ್ರಾಂತಿವೆತ್ತು.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...