Home / ಕವನ / ಕವಿತೆ / ಗುಬ್ಬಿಮರಿ

ಗುಬ್ಬಿಮರಿ

ಮಬ್ಬುಗವಿದು ಕತ್ತಲಾಗೆ
ಎತ್ತ ಏನು ಕಾಣದಾಗೆ
ಮಳೆಯ ಹನಿಯು ಮೊತ್ತವಾಗಿ
ಬಂದು ಮೊಗವ ತಿವಿಯುತಿರಲು
ಸತ್ತು ಬಿದ್ದ ಬಂಟನಂತೆ
ಇಳೆಯು ಸುಮ್ಮನೊರಗುತಿರಲು
ಕತ್ತನೆತ್ತಿ ಅತ್ತ ಇತ್ತ
ನೋಡುತಿಹುದು ಗುಬ್ಬಿ ಎತ್ತ
ತನ್ನ ಪಯಣ ಬೆಳೆಸಿತೋ!
ತನ್ನ ಮನವ ಕಳಿಸಿತೋ!

ಮೇಲಿನಿಂದ ಬಿದ್ದ ಮರಿ!
ಸುತ್ತಲಿಹವು ನಾಯಿ ನರಿ!
ಭೋರೆಂದು ಗಾಳಿಮೊಳಗು!
ನೀರೆ ನೀರು ಮೇಲು ಕೆಳಗು!
ಎತ್ತಣಿಂದೆತ್ತ ಪಯಣ?
ಕತ್ತ ನೆತ್ತಿ ಎದೆಯನೊತ್ತಿ
ಮರಿಯು ಹೆಜ್ಜೆಯೆಳೆಯಿತು.
ಸಾಯುವಂಥ ಬೀಳುವಂಥ
ಮಳೆಯ ಸೆಳೆತ ಸೆಳೆಯಿತು!

ಮೋಡದಾಚೆ ತಮ್ಮ ಬೆಳಕ
ಬಯ್ತಿರಿಸಿತು ಅರಿಲ ಗಣವು.
ಮನೆಯೊಳೆಲ್ಲ ನಗೆಯ ಬೀರಿ
ನಲಿಯುತಿತ್ತು ಮರ್‍ತ್ಯಗಣವು.
ಮರಿಯು ನಿಲ್ಲಲದರ ಸಾವು
ಬರಲದೊಂದೆ, ಒಂದೆ, ಕ್ಷಣವು!
ಕತ್ತ ನೆತ್ತಿ ಎದೆಯನೊತ್ತಿ
ಮರಿಯು ಹೆಜ್ಜೆಯೆಳೆಯಿತು.
ಸಾಯುವಂಥ ಬೀಳುವಂಥ
ಮಳೆಯ ಸೆಳೆತ ಸೆಳೆಯಿತು!

ರಕ್ತಪಾತದಿಂದ ಬಲಿತ
ರಾಜ್ಯಗಳಿಗೆ ಸಾವೆ ಇಲ್ಲ!
ವ್ಯರ್‍ಥವಿರುವನರ್‍ಥಗಳಾ
ಮೊನೆಗೆ ಕೊನೆಯೆ ಕೊನೆಯೆ ಇಲ್ಲ!
ನಿರಪರಾಧಿಯಾದ ಬಾಳು
ಏಕೊ ಏನೊ! ಹಾಳು ಎಲ್ಲ!
ನಾಣ್ದೊರೆದನೊ ಲೋಕದೊಡೆಯ?
ಸಣ್ಣ ಮರಿಯ ಕಾವರಿಲ್ಲ!
ಕತ್ತ ನೆತ್ತಿ ಎದೆಯನೊತ್ತಿ
ಮರಿಯು ಹೆಜ್ಜೆಯೆಳೆಯಿತು.
ಸಾಯುವಂಥ ಬೀಳುವಂಥ
ಮಳೆಯ ಸೆಳೆತ ಸೆಳೆಯಿತು

ಎತ್ತಿಕೊಂಡೆ ಸಣ್ಣ ಮರಿಯ,
ಅದುವೆ ಕಿರಿಯ, ನಾನು ಹಿರಿಯ!
ಚಳಿಗೆ ಮರಿಯ ಮೈ ಮುದುಡಿತು
ಅದಕೆ ನನ್ನ ಬಗೆ ಕದಡಿತು
ಕೈಯ್ಯಲಿಟ್ಟು ಕೊಂಡೆ ಇನ್ನು
ತೆರೆಯದಿರುವದದರ ಕಣ್ಣು
ನೆಲಮುಗಿಲಿನ ನಡುವೆ, ಮರಿಯೆ!
ಕೂಡಿ ನಡೆವೆವೆಂದೆನು!
ಇದ್ದ ದೇವನೆಡೆಗೆ ಹೋಗಿ
ಮೊರೆಯಿಡೋಣವೆಂದೆನು.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...