ಷೇಕ್ಸ್‌ಪಿಯರನನ್ನು ಕುರಿತು

ನನ್ನ ಷೇಕ್ಸ್‌ಪಿಯರನ ಪವಿತ್ರ ಅಸ್ಥಿಯನಿಡಲು
ಯುಗ ದುಡಿದು ಜೋಡಿಸಿದ ಕಲ್ಲರಾಶಿಯ ಮಹಲು
ಬೇಕೆ ? ಅಥವಾ ಮುಗಿಲ ಇರಿವ ಪಿರಿಮಿಡ್ಡುಗಳ
ತೆರೆ ಸಾಕೆ ಮರೆಸಲು ಪುನೀತ ಅವಶೇಷಗಳ?
ಸ್ಮೃತಿಯ ಪ್ರಿಯಪುತ್ರನೇ, ಪ್ರಥಮಪಾತ್ರನೆ ಎಲ್ಲ
ಕೀರ್‍ತಿಗೂ, ನಿನಗಂಥ ಕಳಪೆ ಸಾಕ್ಷಿಯು ಸಲ್ಲ;
ನಮ್ಮ ಎದೆಯಲಿ ಉಕ್ಕಿ ಸುರಿವ ಸಂತಸ ಬೆರಗೆ
ನೀನು ನಿರ್‍ಮಿಸಿಕೊಂಡ ಚಿರಸ್ಮಾರಕವು ನಿನಗೆ.
ಕೃತಿಯ ಸಾಲೇ ಹರಿಸಿ ಕಲೆಯ ಬಲು ಮೆಲುನಡೆಯ
ಅಪಹಾಸ್ಯಕೆಳೆದ ಹಿರಿಕವಿಯೆ, ನಿನ್ನ ಅಮೂಲ್ಯ
ಪುಟಪುಟಗಳಿಂದಲೂ ಅಮೃತ ಸೂಕ್ತಿಗಳನ್ನ
ಹೆಕ್ಕಿಕೊಂಡಿದೆ ಜನರ ಹೃದಯ. ಓದಲು ನಿನ್ನ,
ನಮ್ಮಲ್ಪ ಕಲ್ಪನೆಯ ಕೊಚ್ಚಿ ಕವಿವುದು ಬೆರಗು,
ನಾವಾಗುವೆವು ಅಮೃತಶಿಲೆ ಪೂರ್‍ತಿ ಮೈಮರೆದು.

ಎಂಥ ಸ್ಮಾರಕ ನಿನಗೆ, ಏನು ಭವ್ಯ ಪ್ರಸಿದ್ಧ,
ರಾಜರೂ ಅದರ ಸಲುವಾಗಿ ಸಾಯಲು ಸಿದ್ಧ!

– ಜಾನ್ ಮಿಲ್ಟನ್
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹುಲಿಯೂ ಬೆಕ್ಕೂ
Next post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೩೭

ಸಣ್ಣ ಕತೆ

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…