Home / ಕವನ / ಅನುವಾದ / ಇನ್ನಿಸ್ ಫ್ರೀ ದ್ವೀಪ

ಇನ್ನಿಸ್ ಫ್ರೀ ದ್ವೀಪ

ಇದೋ ಎದ್ದೆ ನಾನೀಗಲೆ ಹೋಗುವೆ ಇನ್ನಿಸ್ ಫ್ರೀ ದ್ವೀಪಕ್ಕೆ
ಕಟ್ಟುವೆನಲ್ಲಿ ಮಣ್ಣಿನದೊಂದು ಪುಟ್ಟ ಮನೆಯನ್ನು ವಾಸಕ್ಕೆ;
ಚಪ್ಪರದವರೆಯ ಬಳ್ಳಿಮಾಡಗಳ, ಜೇನುಗೂಡಗಳ ಹಬ್ಬಿಸುವೆ
ತುಂಬಿಯ ಗುಂಜಾರವದಲಿ ತುಂಬಿದ ಬಯಲಲ್ಲೊಬ್ಬನೆ ವಾಸಿಸುವೆ.

ಶಾಂತಿ ಸಿಕ್ಕುವುದು ಅಂಥಲ್ಲೇ, ಅದು ತುಂತುರು ಹನಿಯುವ ಬಾಳಿನಲೇ
ನಸುಕನು ಕವಿದ ಮುಸುಕಿನಿಂದ ಜೀರುಂಡೆಯ ಜಿರ್ರನೆ ದನಿವರೆಗೆ;
ಮಬ್ಬು ಮಿನುಗುವುದು ನಟ್ಟಿರುಳು ಮಧ್ಯಾಹ್ನಕೆ ನೇರಳೆ ಹೊಳಪಲ್ಲಿ
ತುಂಬಿ ನಿಲ್ಲುವುವು ಸಂಜೆಗಳು ಕೋಗಿಲೆಗಳ ರೆಕ್ಕೆಯ ಬಡಿತದಲಿ.

ಹೋಗುವೆನೀಗಲೆ ಅಲ್ಲಿಗೆಂದು, ಯಾಕೆಂದರೆ ಹಗಲಿರುಳೂ ಅಲ್ಲಿ
ಸರೋವರದ ತೆರೆ ಗುಣುಗುಣಿಸುವುವು ಸವರುತ ದಡವನು ಅಂಚಿನಲಿ;
ನಿಲ್ಲುವೆ ದಾರಿಯ ನಡುವೆಯೆ, ಇಲ್ಲವೆ ಪಾದಚಾರಿಗಳ ಹಾದಿಯಲಿ,
ಹೃದಯದಿಂದಲೇ ಎದ್ದು ಬರುವ ಆ ಸದ್ದನು ಆಲಿಸಿ ಕೇಳುತಲಿ.
*****
ಮೂಲ: ವಿಲಿಯಂ ಬಟ್ಲರ್ ಏಟ್ಸ್

ಟಿಪ್ಪಣಿ:
ಏಟ್ಸ್ ತನ್ನ ಕಾವ್ಯಜೀವನದ ಆರಂಭದ ದಿನಗಳಲ್ಲಿ ಬರೆದ ಭಾವಗೀತಾತ್ಮಕವಾದ ಕವಿತೆ. ರೊಮ್ಯಾಂಟಿಕ್ ಮನೋಧರ್‍ಮವನ್ನು ಬಿಂಬಿಸುವ ಈ ಕವನ ಏಟ್ಸ್ ಮುಂದೆ ಬರೆದ ಪ್ರಸಿದ್ಧ ಕವನಗಳ ಶೈಲಿ ರುಚಿಗಳಿಗೆ ಹೊರತಾದದ್ದು. ಆದರೂ ಕವಿಗೆ ಮುಜುಗರ ತರುವಷ್ಟು ಜನಪ್ರಿಯವಾದದ್ದು. ‘ನನ್ನದೇ ಆದ ಗೀತಲಯ ಕೊಂಚವಾದರೂ ಇರುವ ನನ್ನ ಮೊದಲ ಭಾವಗೀತೆ’ ಎಂದು ಏಟ್ಸ್ ಅದರ ಬಗ್ಗೆ ಹೇಳುತ್ತಾನೆ. ಕವಿಯ ಸ್ವಂತ ಪದ್ಯಗಳ ವಾಚನದ ಧ್ವನಿಸುರುಳಿಯೊಂದರಲ್ಲಿ ಈ ಪದ್ಯವೂ ಸೇರಿದೆ.

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...