Home / ಕವನ / ಅನುವಾದ / ಇನ್ನಿಸ್ ಫ್ರೀ ದ್ವೀಪ

ಇನ್ನಿಸ್ ಫ್ರೀ ದ್ವೀಪ

ಇದೋ ಎದ್ದೆ ನಾನೀಗಲೆ ಹೋಗುವೆ ಇನ್ನಿಸ್ ಫ್ರೀ ದ್ವೀಪಕ್ಕೆ
ಕಟ್ಟುವೆನಲ್ಲಿ ಮಣ್ಣಿನದೊಂದು ಪುಟ್ಟ ಮನೆಯನ್ನು ವಾಸಕ್ಕೆ;
ಚಪ್ಪರದವರೆಯ ಬಳ್ಳಿಮಾಡಗಳ, ಜೇನುಗೂಡಗಳ ಹಬ್ಬಿಸುವೆ
ತುಂಬಿಯ ಗುಂಜಾರವದಲಿ ತುಂಬಿದ ಬಯಲಲ್ಲೊಬ್ಬನೆ ವಾಸಿಸುವೆ.

ಶಾಂತಿ ಸಿಕ್ಕುವುದು ಅಂಥಲ್ಲೇ, ಅದು ತುಂತುರು ಹನಿಯುವ ಬಾಳಿನಲೇ
ನಸುಕನು ಕವಿದ ಮುಸುಕಿನಿಂದ ಜೀರುಂಡೆಯ ಜಿರ್ರನೆ ದನಿವರೆಗೆ;
ಮಬ್ಬು ಮಿನುಗುವುದು ನಟ್ಟಿರುಳು ಮಧ್ಯಾಹ್ನಕೆ ನೇರಳೆ ಹೊಳಪಲ್ಲಿ
ತುಂಬಿ ನಿಲ್ಲುವುವು ಸಂಜೆಗಳು ಕೋಗಿಲೆಗಳ ರೆಕ್ಕೆಯ ಬಡಿತದಲಿ.

ಹೋಗುವೆನೀಗಲೆ ಅಲ್ಲಿಗೆಂದು, ಯಾಕೆಂದರೆ ಹಗಲಿರುಳೂ ಅಲ್ಲಿ
ಸರೋವರದ ತೆರೆ ಗುಣುಗುಣಿಸುವುವು ಸವರುತ ದಡವನು ಅಂಚಿನಲಿ;
ನಿಲ್ಲುವೆ ದಾರಿಯ ನಡುವೆಯೆ, ಇಲ್ಲವೆ ಪಾದಚಾರಿಗಳ ಹಾದಿಯಲಿ,
ಹೃದಯದಿಂದಲೇ ಎದ್ದು ಬರುವ ಆ ಸದ್ದನು ಆಲಿಸಿ ಕೇಳುತಲಿ.
*****
ಮೂಲ: ವಿಲಿಯಂ ಬಟ್ಲರ್ ಏಟ್ಸ್

ಟಿಪ್ಪಣಿ:
ಏಟ್ಸ್ ತನ್ನ ಕಾವ್ಯಜೀವನದ ಆರಂಭದ ದಿನಗಳಲ್ಲಿ ಬರೆದ ಭಾವಗೀತಾತ್ಮಕವಾದ ಕವಿತೆ. ರೊಮ್ಯಾಂಟಿಕ್ ಮನೋಧರ್‍ಮವನ್ನು ಬಿಂಬಿಸುವ ಈ ಕವನ ಏಟ್ಸ್ ಮುಂದೆ ಬರೆದ ಪ್ರಸಿದ್ಧ ಕವನಗಳ ಶೈಲಿ ರುಚಿಗಳಿಗೆ ಹೊರತಾದದ್ದು. ಆದರೂ ಕವಿಗೆ ಮುಜುಗರ ತರುವಷ್ಟು ಜನಪ್ರಿಯವಾದದ್ದು. ‘ನನ್ನದೇ ಆದ ಗೀತಲಯ ಕೊಂಚವಾದರೂ ಇರುವ ನನ್ನ ಮೊದಲ ಭಾವಗೀತೆ’ ಎಂದು ಏಟ್ಸ್ ಅದರ ಬಗ್ಗೆ ಹೇಳುತ್ತಾನೆ. ಕವಿಯ ಸ್ವಂತ ಪದ್ಯಗಳ ವಾಚನದ ಧ್ವನಿಸುರುಳಿಯೊಂದರಲ್ಲಿ ಈ ಪದ್ಯವೂ ಸೇರಿದೆ.

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...