Home / ಕವನ / ಅನುವಾದ / ಇನ್ನಿಸ್ ಫ್ರೀ ದ್ವೀಪ

ಇನ್ನಿಸ್ ಫ್ರೀ ದ್ವೀಪ

ಇದೋ ಎದ್ದೆ ನಾನೀಗಲೆ ಹೋಗುವೆ ಇನ್ನಿಸ್ ಫ್ರೀ ದ್ವೀಪಕ್ಕೆ
ಕಟ್ಟುವೆನಲ್ಲಿ ಮಣ್ಣಿನದೊಂದು ಪುಟ್ಟ ಮನೆಯನ್ನು ವಾಸಕ್ಕೆ;
ಚಪ್ಪರದವರೆಯ ಬಳ್ಳಿಮಾಡಗಳ, ಜೇನುಗೂಡಗಳ ಹಬ್ಬಿಸುವೆ
ತುಂಬಿಯ ಗುಂಜಾರವದಲಿ ತುಂಬಿದ ಬಯಲಲ್ಲೊಬ್ಬನೆ ವಾಸಿಸುವೆ.

ಶಾಂತಿ ಸಿಕ್ಕುವುದು ಅಂಥಲ್ಲೇ, ಅದು ತುಂತುರು ಹನಿಯುವ ಬಾಳಿನಲೇ
ನಸುಕನು ಕವಿದ ಮುಸುಕಿನಿಂದ ಜೀರುಂಡೆಯ ಜಿರ್ರನೆ ದನಿವರೆಗೆ;
ಮಬ್ಬು ಮಿನುಗುವುದು ನಟ್ಟಿರುಳು ಮಧ್ಯಾಹ್ನಕೆ ನೇರಳೆ ಹೊಳಪಲ್ಲಿ
ತುಂಬಿ ನಿಲ್ಲುವುವು ಸಂಜೆಗಳು ಕೋಗಿಲೆಗಳ ರೆಕ್ಕೆಯ ಬಡಿತದಲಿ.

ಹೋಗುವೆನೀಗಲೆ ಅಲ್ಲಿಗೆಂದು, ಯಾಕೆಂದರೆ ಹಗಲಿರುಳೂ ಅಲ್ಲಿ
ಸರೋವರದ ತೆರೆ ಗುಣುಗುಣಿಸುವುವು ಸವರುತ ದಡವನು ಅಂಚಿನಲಿ;
ನಿಲ್ಲುವೆ ದಾರಿಯ ನಡುವೆಯೆ, ಇಲ್ಲವೆ ಪಾದಚಾರಿಗಳ ಹಾದಿಯಲಿ,
ಹೃದಯದಿಂದಲೇ ಎದ್ದು ಬರುವ ಆ ಸದ್ದನು ಆಲಿಸಿ ಕೇಳುತಲಿ.
*****
ಮೂಲ: ವಿಲಿಯಂ ಬಟ್ಲರ್ ಏಟ್ಸ್

ಟಿಪ್ಪಣಿ:
ಏಟ್ಸ್ ತನ್ನ ಕಾವ್ಯಜೀವನದ ಆರಂಭದ ದಿನಗಳಲ್ಲಿ ಬರೆದ ಭಾವಗೀತಾತ್ಮಕವಾದ ಕವಿತೆ. ರೊಮ್ಯಾಂಟಿಕ್ ಮನೋಧರ್‍ಮವನ್ನು ಬಿಂಬಿಸುವ ಈ ಕವನ ಏಟ್ಸ್ ಮುಂದೆ ಬರೆದ ಪ್ರಸಿದ್ಧ ಕವನಗಳ ಶೈಲಿ ರುಚಿಗಳಿಗೆ ಹೊರತಾದದ್ದು. ಆದರೂ ಕವಿಗೆ ಮುಜುಗರ ತರುವಷ್ಟು ಜನಪ್ರಿಯವಾದದ್ದು. ‘ನನ್ನದೇ ಆದ ಗೀತಲಯ ಕೊಂಚವಾದರೂ ಇರುವ ನನ್ನ ಮೊದಲ ಭಾವಗೀತೆ’ ಎಂದು ಏಟ್ಸ್ ಅದರ ಬಗ್ಗೆ ಹೇಳುತ್ತಾನೆ. ಕವಿಯ ಸ್ವಂತ ಪದ್ಯಗಳ ವಾಚನದ ಧ್ವನಿಸುರುಳಿಯೊಂದರಲ್ಲಿ ಈ ಪದ್ಯವೂ ಸೇರಿದೆ.

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...