Home / ಕವನ / ಅನುವಾದ / ನೀ ಮುದುಕಿಯಾದಾಗ

ನೀ ಮುದುಕಿಯಾದಾಗ

ನೀ ಮುದುಕಿಯಾಗಿ ಕೂದಲು ನರೆತು ಕಣ್ಣಲ್ಲಿ ನಿದ್ದೆ ತುಂಬಿರಲು,
ಬೆಂಕಿಗೂಡಿನ ಬದಿಗೆ ಕುಳಿತು ಈ ಪುಸ್ತಕವ ಕೈಗೆತ್ತಿಕೊ.
ಓದು ನಿಧಾನವಾಗಿ, ಪ್ರಾಯದ ದಿನಗಳಲ್ಲಿ ನಿನ್ನ ಕಣ್ಣಲ್ಲಿ
ಹೊಮ್ಮುತ್ತಿದ್ದ ಮಧುರ ನೋಟ, ದಟ್ಟನೆ ನೆರಳ ಸ್ಮರಿಸು ಮನದಲ್ಲಿ.

ಪ್ರೀತಿಸಿದ್ದೆಷ್ಟು ಜನ ನಿನ್ನ ಹರ್‍ಷೋಲ್ಲಾಸಭರಿತ ಗಳಿಗೆಗಳನ್ನ?
ನಿಜದ ಪ್ರೀತಿಯೊ ಸುಳ್ಳೊ, ಪ್ರೀತಿಸಿದ್ದರು ಅವರು ನಿನ್ನ ಚೆಲುವನ್ನ
ಪ್ರೀತಿಸಿದ್ದೊಬ್ಬನೇ ನಿನ್ನಲ್ಲಿ ಹುದುಗಿದ್ದ ಯಾತ್ರಿಕ ಪವಿತ್ರಾತ್ಮವನ್ನ
ಪ್ರೀತಿಸಿದ ಹಾಗೆಯೇ, ಬದಲುತ್ತಿದ್ದ ನಿನ್ನ ಮುಖದ ದುಗುಡಗಳನ್ನ

ಜಗಜಗಿಸಿ ಹೊಳೆವ ಉರಿ ಸರಳುಗಳ ಬಳಿ ಕೂತು ಮುಖ ಬಾಗಿಸಿ,
ಉಸುರಿಕೋ ನಿನ್ನೊಳಗೆ ನೀನೆ ವ್ಯಥೆದನಿಯಲ್ಲಿ, ಹೇಗೆ ಪ್ರೀತಿ
ಓಡಿಹೋಯಿತು ಎಂದು ದೂರದಲ್ಲಿರುವ ಗಿರಿಶಿಖರವೇರಿ
ಮರೆಸಿಕೊಂಡಿತು ತನ್ನ ಮುಖವ ನಕ್ಷತ್ರಗಳ ಮಧ್ಯೆ ತೂರಿ.
*****
ಮೂಲ: ವಿಲಿಯಂ ಬಟ್ಲರ್ ಏಟ್ಸ್

ಟಿಪ್ಪಣಿ:
ಕವಿ ತಾನು ಪ್ರೇಮಿಸಿದ ಹೆಣ್ಣು ಮಾಡ್ ಗಾನಳನ್ನು ಕೇಂದ್ರವಾಗಿಟ್ಟುಕೊಂಡು ಕೆಲವು ಪದ್ಯಗಳನ್ನು ಬರೆದಿದ್ದಾನೆ.

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...