ನೀ ಮುದುಕಿಯಾದಾಗ

ನೀ ಮುದುಕಿಯಾಗಿ ಕೂದಲು ನರೆತು ಕಣ್ಣಲ್ಲಿ ನಿದ್ದೆ ತುಂಬಿರಲು,
ಬೆಂಕಿಗೂಡಿನ ಬದಿಗೆ ಕುಳಿತು ಈ ಪುಸ್ತಕವ ಕೈಗೆತ್ತಿಕೊ.
ಓದು ನಿಧಾನವಾಗಿ, ಪ್ರಾಯದ ದಿನಗಳಲ್ಲಿ ನಿನ್ನ ಕಣ್ಣಲ್ಲಿ
ಹೊಮ್ಮುತ್ತಿದ್ದ ಮಧುರ ನೋಟ, ದಟ್ಟನೆ ನೆರಳ ಸ್ಮರಿಸು ಮನದಲ್ಲಿ.

ಪ್ರೀತಿಸಿದ್ದೆಷ್ಟು ಜನ ನಿನ್ನ ಹರ್‍ಷೋಲ್ಲಾಸಭರಿತ ಗಳಿಗೆಗಳನ್ನ?
ನಿಜದ ಪ್ರೀತಿಯೊ ಸುಳ್ಳೊ, ಪ್ರೀತಿಸಿದ್ದರು ಅವರು ನಿನ್ನ ಚೆಲುವನ್ನ
ಪ್ರೀತಿಸಿದ್ದೊಬ್ಬನೇ ನಿನ್ನಲ್ಲಿ ಹುದುಗಿದ್ದ ಯಾತ್ರಿಕ ಪವಿತ್ರಾತ್ಮವನ್ನ
ಪ್ರೀತಿಸಿದ ಹಾಗೆಯೇ, ಬದಲುತ್ತಿದ್ದ ನಿನ್ನ ಮುಖದ ದುಗುಡಗಳನ್ನ

ಜಗಜಗಿಸಿ ಹೊಳೆವ ಉರಿ ಸರಳುಗಳ ಬಳಿ ಕೂತು ಮುಖ ಬಾಗಿಸಿ,
ಉಸುರಿಕೋ ನಿನ್ನೊಳಗೆ ನೀನೆ ವ್ಯಥೆದನಿಯಲ್ಲಿ, ಹೇಗೆ ಪ್ರೀತಿ
ಓಡಿಹೋಯಿತು ಎಂದು ದೂರದಲ್ಲಿರುವ ಗಿರಿಶಿಖರವೇರಿ
ಮರೆಸಿಕೊಂಡಿತು ತನ್ನ ಮುಖವ ನಕ್ಷತ್ರಗಳ ಮಧ್ಯೆ ತೂರಿ.
*****
ಮೂಲ: ವಿಲಿಯಂ ಬಟ್ಲರ್ ಏಟ್ಸ್

ಟಿಪ್ಪಣಿ:
ಕವಿ ತಾನು ಪ್ರೇಮಿಸಿದ ಹೆಣ್ಣು ಮಾಡ್ ಗಾನಳನ್ನು ಕೇಂದ್ರವಾಗಿಟ್ಟುಕೊಂಡು ಕೆಲವು ಪದ್ಯಗಳನ್ನು ಬರೆದಿದ್ದಾನೆ.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಡಗಿಗಳೂ ಆನೆಯೂ
Next post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೪೧

ಸಣ್ಣ ಕತೆ

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

cheap jordans|wholesale air max|wholesale jordans|wholesale jewelry|wholesale jerseys