ಮುದಿ ಪೆನ್‌ಷನ್‌ದಾರನ ಅಳಲು

ಮಳೆಗೆ ಸಿಗದಂತೆ ನಿಂತಿದ್ದರೂ ಈಗ
ಮುರಿದೊಂದು ಮರದ ಕೆಳಗೆ,
ಎಲ್ಲ ಕುರ್‍ಚಿಗೂ ಮೊದಲು ಬೆಚ್ಚನೆಯ ಜಾಗದಲಿ
ಕಾದಿರುತ್ತಿತ್ತೊಂದು ಕುರ್‍ಚಿ ನನಗೆ
ರಾಜಕಾರಣ, ಪ್ರೇಮ ಇತ್ಯಾದಿ ಚರ್‍ಚಿಸುವ ಗೋಷ್ಠಿಯೊಳಗೆ,
ಕಾಲ ಏಕಾ‌ಏಕಿ ನನ್ನ ಪರಿವರ್‍ತಿಸುವ ಮುಂಚೆ ಹೀಗೆ.

ಭಲ್ಲೆಗಳ ಸಿದ್ಧಮಾಡುತ್ತಿದ್ದರೂ ಹುಡುಗರು
ಮತ್ತೊಮ್ಮೆ ಯಾವುದೋ ಸಂಚಿಗೆ,
ಹುಚ್ಚು ಪೋಕರಿಗಳು ದಬ್ಬಾಳಿಕೆಯ ಜರಿದು
ಹಳಿದರೂ ಮನ ಬಂದ ಹಾಗೆ,
ನನ್ನ ಯೋಚನೆಯೆಲ್ಲ ನನ್ನ ಬದಲಿಸಿಬಿಟ್ಟ
ಕಾಲಕೌಶಲ್ಯದ ಬಗೆಗೆ.

ಮುರಿದ ಈ ಮರದ ಕಡೆ ದೃಷ್ಟಿ ಚೆಲ್ಲುವ ಹೆಣ್ಣು
ಇಲ್ಲ ಒಂದೂ,
ನಾನೊಲಿದ ಚೆಲುವೆಯರು ಮಾತ್ರ ನೆನಪಿನಲಿ
ಮಾಸಿಲ್ಲ ಇಂದೂ;
ಹೀಗೆ ಪರಿವರ್‍ತಿಸಿದ ಕಾಲನ ಮುಖಕ್ಕೆ
ಉಗಿವೆ ಥೂ ಎಂದು.
*****
ಮೂಲ: ವಿಲಿಯಂ ಬಟ್ಲರ್ ಏಟ್ಸ್

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಾಮೂ ಶ್ಯಾಮೂ
Next post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೪೨

ಸಣ್ಣ ಕತೆ

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…