Home / ಲೇಖನ / ಕೃಷಿ / ಭೂತಾಯಿ ರಕ್ಷಣೆ

ಭೂತಾಯಿ ರಕ್ಷಣೆ

ಬೆಳಗಾಗಿ ನಾನೆದ್ದು ಯಾರಾರ ನೆನೆಯಲಿ
ಎಳ್ಳು ಜೀರಿಗೆ ಬೆಳಿಯೋಳ-ಭೂಮಿ ತಾಯಿಯ
ಎದ್ದೊಂದ ಗಳಿಗೆ ನೆನೆದೇನ.

ಹಳ್ಳಿಯ ಮಹಿಳೆಯೊಬ್ಬಳು ಈ ಜಾನಪದ ಹಾಡಿನ ಮೂಲಕ ಭೂಮಿತಾಯಿಯ ಬಗ್ಗೆ ಅಭಿಮಾನದಿಂದ ನೆನೆದು ಹಾಡುತ್ತಾಳೆ. ಭಾರತ ಹಳ್ಳಿಗಳ ದೇಶವಾಗಿದೆ. ರೈತನೆ ಅನ್ನದಾತ. ನಮ್ಮೆಲ್ಲರನ್ನು ಸಲಹುವಳೆ ಭೂಮಿತಾಯಿ. ಅಂತಲೇ ಭುದೇವಿಯ ನೆನೆಯದೇ ವಿಧಿಯಿಲ್ಲ. ಬದುಕಿನುದ್ದಕ್ಕೂ ಭೂಮಿಯನ್ನೇ ನಂಬಿಕೊಂಡು ಬಾಳಿರುವ ರೈತ ಅವನ ಬೆವರಿನ ಫಲವೇ ನಮ್ಮ ಕೈಯೊಳಗಿನ ತುತ್ತು. ಆದರೆ ಇಂದು ಕಾಲ ಬದಲಾಗಿದೆ. ನಮ್ಮ ರಕ್ತದ ಕಣ ಕಣದಲ್ಲೂ ಭೂದೇವಿಯು ನೀಡಿದ ಆಹಾರದಂಶವಿದ್ದರೂ ಜಾಗತೀಕರಣದ ಅವಸರದಲ್ಲಿ ಭೂಮಿಯ ಫಲವತತ್ತೆ ಮತ್ತು ಅದರ ಮಹತ್ವ ನಾವು ಮರೆಯುತ್ತಿದ್ದೇವೆ.

ಇವತ್ತು ಹಳ್ಳಿ ಹಳ್ಳಿಗಳಲ್ಲೂ ಜಾಗತೀಕರಣದ ಬಿಸಿ ತಟ್ಟಿದೆ. ಎಲ್ಲರಿಗೂ ಹಣ ಸಂಪಾದನೆಯೇ ಗುರಿಯಾಗಿದೆ. ಟಿವಿಗಳು ನಮ್ಮ ಮನೆಗೆ ಲಗ್ಗೆ ಹಾಕಿದ ಮೇಲೆ ದುಡಿಮೆ, ಪರಿಶ್ರಮಗಳಿಗೆ ಗ್ರಹಣ ಹಿಡಿಯಿತ್ತಿದೆಯೋ ಎನಿಸದೆ ಇರದು. ಅಂತಲೇ ಸರ್‍ವಜ್ಞ ತನ್ನ ತ್ರಿಪದಿಗಳಲ್ಲಿ ಬೇಸಾಯಕ್ಕೆ ಮಹತ್ವ ಕೊಡುತ್ತಾನೆ.

ಕೋಟಿ ವಿದ್ಯೆಗಳಲ್ಲಿ ಮೇಟಿ ವಿದ್ಯೆಯ ಮೇಲು
ಮೇಟಿಯಿಂ ರಾಟಿ ನಡೆದುದಲ್ಲದೆ ದೇಶ
ದಾಟವೇ ಕೆಡಗು ಸರ್‍ವಜ್ಞ

ಅನೇಕ ವಿದ್ಯೆಗಳಲ್ಲಿ ವ್ಯವಸಾಯವೇ ಶ್ರೇಷ್ಠ, ಅದು ಮೇಟಿ ವಿದ್ಯೆ. ಅದರಿಂದ ರಾಟಿ ನಡೆದು ದೇಶವೇ ಬೆಳಗುವುದು. ಇಲ್ಲದಿದ್ದರೆ ಇನ್ನಾವ ಆಟವೂ ಕೆಡಗು ಎನ್ನುವ ಕವಿಯ ಭಾವ ನಿಜಕ್ಕೂ ಮೆಚ್ಚುವಂಥದ್ದು. ಆದರೆ ಇಂದು ಬೇಸಾಯಕ್ಕೆ ಜನರು ನಿರ್‍ಲಕ್ಷ್ಯ ಮಾಡುತ್ತಿರುವುದು ದುರ್‍ದೈವದ ಸಂಗತಿ. ಇಂದಿನ ದಿನಗಳಲ್ಲಿ ರೈತನು ವ್ಯವಸಾಯ ಮಾಡಿ ಹೆಚ್ಚಿನ ಇಳುವರಿ ತೆಗೆಯುವ ನಿಟ್ಟಿನಲ್ಲಿ ರಾಸಾಯನಿಕ ಗೊಬ್ಬರ, ವಿಷಯುಕ್ತ ಔಷಧಗಳನ್ನು ಬೆಳೆಗಳಿಗೆ ನೀಡಿ ಹೆಚ್ಚಿನ ಬೆಳೆ ರಾಶಿಯ ನಿರೀಕ್ಷೆಯಲ್ಲಿ ಭೂಮಿಯನ್ನು ಬಂಜರುಗೊಳಿಸುತ್ತಿದ್ದಾನೆ. ಇದರಿಂದಾಗಿ ವಾತಾವರಣ ಕಲುಷಿತಗೊಳ್ಳುವುದಷ್ಟೇ ಅಲ್ಲದೆ ಬೆಳೆಗಳಲ್ಲಿ ವಿಷದಂಶವು ತುಂಬಿ ಜನರು ರೋಗ-ರುಜಿನಗಳಿಗೆ ತುತ್ತಾಗುತ್ತಿದ್ದಾರೆ. ಆದ್ದರಿಂದ ಇಂದು ಇಂಥ ರಾಸಾಯನಿಕ ಪದಾರ್‍ಥಗಳಿಂದ ಮುಕ್ತಗೊಳ್ಳಲು ನಾವು ಸಾವಯವ ಕೃಷಿ ಮಾಡಬೇಕಿದೆ. ಈಗೀಗ ಜಗತ್ತಿನಲ್ಲಿ ಯಂತ್ರ, ವಾಹನಗಳ ಸಂಖ್ಯೆ ಜಾಸ್ತಿಯಾಗಿ ಇಂಧನ ಉಪಯೋಗದಿಂದ ವಾತಾವರಣ ಕೆಡುತಿದ್ದು ಜೈವಿಕ ಇಂಧನಕ್ಕೆ ಸಂಬಂಧಿಸಿದ ಗಿಡ-ಮರಗಳನ್ನು ನೆಟ್ಟು ದೇಶದ ಆರೋಗ್ಯ ಕಾಪಾಡಬೇಕಿದೆ.

ರೈತನು ದೇಶದ ಬೆನ್ನೆಲುಬು, ಅನ್ನದಾತನೆಂದು ಹೊಗಳಿದರೂ ಇಂದು ರೈತನಿಗೆ ಉಳಿಗಾಲವಿಲ್ಲವಾಗಿದೆ. ಬಿತ್ತಿದ ಬೀಜ ಮೊಳಕೆಯೊಡೆಯದಿದ್ದಾಗ ಮೊಳಕೆಯೊಡೆದರೂ ಬೆಳೆ ಬೆಳೆಯದಿದ್ದಾಗ ಬೆಳೆ ಬೆಳೆದರೂ ಧಾನ್ಯಕ್ಕೆ ಕೈತುಂಬ ಹಣ ಬರದೇ ಇದ್ದಾಗ ಅವನ ಬದುಕು ನಿತ್ಯ ಸಾಯುತ್ತಿದೆ. ಬದುಕನ್ನು ಎದುರಿಸಲಾರದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾನೆ. ಅಂತಲೇ ಇಂದು ಭೂಮಿತಾಯಿ ಅವನ ಮೇಲೆ ಮುನಿದಿದ್ದಾಳೆ, ಹೆಜ್ಜೆ ಹೆಜ್ಜೆಗೂ ರಕ್ಷಿಸುವ ಭೂತಾಯಿ ಫಲವತತ್ತೆ ಕಾಪಾಡುವುದು ನಮ್ಮೆಲ್ಲರ ಕರ್‍ತವ್ಯವಾಗಿದೆ. ಅಂತಲೇ ಇಂದು ಸರ್‍ಕಾರ ಮತ್ತು ಸಮಾಜ ಭೂತಾಯಿಯತ್ತ ವಾಲುತ್ತಿದೆ. ರೈತನಿಗೆ ಭೂಮಿಯ ಮಣ್ಣಿನ ಬಗ್ಗೆ ತಿಳುವಳಿಕೆ, ಬೀಜ, ಗೊಬ್ಬರ, ಸಾವಯವ ಕೃಷಿ ಸೊನ್ನೆ ಬಂಡವಾಳದಲ್ಲಿ ಭೂಮಿಯಲ್ಲಿ ಬೆಳೆ ಇಳುವರಿಗಳತ್ತ ನಾವು ದಾಪುಗಾಲು ಆರೋಗ್ಯಕರ ಲಕ್ಷಣವಾಗಿದೆ. ಹಾಕುತ್ತಿರುವುದು ಆರೋಗ್ಯಕರ ಲಕ್ಷಣವಾಗಿದೆ.

ಸ್ವಚ್ಛವಾದ ಪರಿಸರ, ನಿರಾಂತರವಾದ ಬಾಳಾಗಬೇಕಾದರೆ ಪರಿಸರ ಮಾಲಿನ್ಯ ತಡೆಗಟ್ಟಬೇಕಾದರೆ ಸಾವಯವ ಕೃಷಿ ಮಾಡಬೇಕಿದೆ. ಜೀವನ ಸಾರ್‍ಥಕಗೊಳಿಸಬೇಕಿದೆ. ಭೂಮಿಯ ರಕ್ಷಣೆ ನಮ್ಮೆಲ್ಲರ ಕರ್‍ತವ್ಯವಾಗಬೇಕು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...