Home / ಲೇಖನ / ಕೃಷಿ / ಭೂತಾಯಿ ರಕ್ಷಣೆ

ಭೂತಾಯಿ ರಕ್ಷಣೆ

ಬೆಳಗಾಗಿ ನಾನೆದ್ದು ಯಾರಾರ ನೆನೆಯಲಿ
ಎಳ್ಳು ಜೀರಿಗೆ ಬೆಳಿಯೋಳ-ಭೂಮಿ ತಾಯಿಯ
ಎದ್ದೊಂದ ಗಳಿಗೆ ನೆನೆದೇನ.

ಹಳ್ಳಿಯ ಮಹಿಳೆಯೊಬ್ಬಳು ಈ ಜಾನಪದ ಹಾಡಿನ ಮೂಲಕ ಭೂಮಿತಾಯಿಯ ಬಗ್ಗೆ ಅಭಿಮಾನದಿಂದ ನೆನೆದು ಹಾಡುತ್ತಾಳೆ. ಭಾರತ ಹಳ್ಳಿಗಳ ದೇಶವಾಗಿದೆ. ರೈತನೆ ಅನ್ನದಾತ. ನಮ್ಮೆಲ್ಲರನ್ನು ಸಲಹುವಳೆ ಭೂಮಿತಾಯಿ. ಅಂತಲೇ ಭುದೇವಿಯ ನೆನೆಯದೇ ವಿಧಿಯಿಲ್ಲ. ಬದುಕಿನುದ್ದಕ್ಕೂ ಭೂಮಿಯನ್ನೇ ನಂಬಿಕೊಂಡು ಬಾಳಿರುವ ರೈತ ಅವನ ಬೆವರಿನ ಫಲವೇ ನಮ್ಮ ಕೈಯೊಳಗಿನ ತುತ್ತು. ಆದರೆ ಇಂದು ಕಾಲ ಬದಲಾಗಿದೆ. ನಮ್ಮ ರಕ್ತದ ಕಣ ಕಣದಲ್ಲೂ ಭೂದೇವಿಯು ನೀಡಿದ ಆಹಾರದಂಶವಿದ್ದರೂ ಜಾಗತೀಕರಣದ ಅವಸರದಲ್ಲಿ ಭೂಮಿಯ ಫಲವತತ್ತೆ ಮತ್ತು ಅದರ ಮಹತ್ವ ನಾವು ಮರೆಯುತ್ತಿದ್ದೇವೆ.

ಇವತ್ತು ಹಳ್ಳಿ ಹಳ್ಳಿಗಳಲ್ಲೂ ಜಾಗತೀಕರಣದ ಬಿಸಿ ತಟ್ಟಿದೆ. ಎಲ್ಲರಿಗೂ ಹಣ ಸಂಪಾದನೆಯೇ ಗುರಿಯಾಗಿದೆ. ಟಿವಿಗಳು ನಮ್ಮ ಮನೆಗೆ ಲಗ್ಗೆ ಹಾಕಿದ ಮೇಲೆ ದುಡಿಮೆ, ಪರಿಶ್ರಮಗಳಿಗೆ ಗ್ರಹಣ ಹಿಡಿಯಿತ್ತಿದೆಯೋ ಎನಿಸದೆ ಇರದು. ಅಂತಲೇ ಸರ್‍ವಜ್ಞ ತನ್ನ ತ್ರಿಪದಿಗಳಲ್ಲಿ ಬೇಸಾಯಕ್ಕೆ ಮಹತ್ವ ಕೊಡುತ್ತಾನೆ.

ಕೋಟಿ ವಿದ್ಯೆಗಳಲ್ಲಿ ಮೇಟಿ ವಿದ್ಯೆಯ ಮೇಲು
ಮೇಟಿಯಿಂ ರಾಟಿ ನಡೆದುದಲ್ಲದೆ ದೇಶ
ದಾಟವೇ ಕೆಡಗು ಸರ್‍ವಜ್ಞ

ಅನೇಕ ವಿದ್ಯೆಗಳಲ್ಲಿ ವ್ಯವಸಾಯವೇ ಶ್ರೇಷ್ಠ, ಅದು ಮೇಟಿ ವಿದ್ಯೆ. ಅದರಿಂದ ರಾಟಿ ನಡೆದು ದೇಶವೇ ಬೆಳಗುವುದು. ಇಲ್ಲದಿದ್ದರೆ ಇನ್ನಾವ ಆಟವೂ ಕೆಡಗು ಎನ್ನುವ ಕವಿಯ ಭಾವ ನಿಜಕ್ಕೂ ಮೆಚ್ಚುವಂಥದ್ದು. ಆದರೆ ಇಂದು ಬೇಸಾಯಕ್ಕೆ ಜನರು ನಿರ್‍ಲಕ್ಷ್ಯ ಮಾಡುತ್ತಿರುವುದು ದುರ್‍ದೈವದ ಸಂಗತಿ. ಇಂದಿನ ದಿನಗಳಲ್ಲಿ ರೈತನು ವ್ಯವಸಾಯ ಮಾಡಿ ಹೆಚ್ಚಿನ ಇಳುವರಿ ತೆಗೆಯುವ ನಿಟ್ಟಿನಲ್ಲಿ ರಾಸಾಯನಿಕ ಗೊಬ್ಬರ, ವಿಷಯುಕ್ತ ಔಷಧಗಳನ್ನು ಬೆಳೆಗಳಿಗೆ ನೀಡಿ ಹೆಚ್ಚಿನ ಬೆಳೆ ರಾಶಿಯ ನಿರೀಕ್ಷೆಯಲ್ಲಿ ಭೂಮಿಯನ್ನು ಬಂಜರುಗೊಳಿಸುತ್ತಿದ್ದಾನೆ. ಇದರಿಂದಾಗಿ ವಾತಾವರಣ ಕಲುಷಿತಗೊಳ್ಳುವುದಷ್ಟೇ ಅಲ್ಲದೆ ಬೆಳೆಗಳಲ್ಲಿ ವಿಷದಂಶವು ತುಂಬಿ ಜನರು ರೋಗ-ರುಜಿನಗಳಿಗೆ ತುತ್ತಾಗುತ್ತಿದ್ದಾರೆ. ಆದ್ದರಿಂದ ಇಂದು ಇಂಥ ರಾಸಾಯನಿಕ ಪದಾರ್‍ಥಗಳಿಂದ ಮುಕ್ತಗೊಳ್ಳಲು ನಾವು ಸಾವಯವ ಕೃಷಿ ಮಾಡಬೇಕಿದೆ. ಈಗೀಗ ಜಗತ್ತಿನಲ್ಲಿ ಯಂತ್ರ, ವಾಹನಗಳ ಸಂಖ್ಯೆ ಜಾಸ್ತಿಯಾಗಿ ಇಂಧನ ಉಪಯೋಗದಿಂದ ವಾತಾವರಣ ಕೆಡುತಿದ್ದು ಜೈವಿಕ ಇಂಧನಕ್ಕೆ ಸಂಬಂಧಿಸಿದ ಗಿಡ-ಮರಗಳನ್ನು ನೆಟ್ಟು ದೇಶದ ಆರೋಗ್ಯ ಕಾಪಾಡಬೇಕಿದೆ.

ರೈತನು ದೇಶದ ಬೆನ್ನೆಲುಬು, ಅನ್ನದಾತನೆಂದು ಹೊಗಳಿದರೂ ಇಂದು ರೈತನಿಗೆ ಉಳಿಗಾಲವಿಲ್ಲವಾಗಿದೆ. ಬಿತ್ತಿದ ಬೀಜ ಮೊಳಕೆಯೊಡೆಯದಿದ್ದಾಗ ಮೊಳಕೆಯೊಡೆದರೂ ಬೆಳೆ ಬೆಳೆಯದಿದ್ದಾಗ ಬೆಳೆ ಬೆಳೆದರೂ ಧಾನ್ಯಕ್ಕೆ ಕೈತುಂಬ ಹಣ ಬರದೇ ಇದ್ದಾಗ ಅವನ ಬದುಕು ನಿತ್ಯ ಸಾಯುತ್ತಿದೆ. ಬದುಕನ್ನು ಎದುರಿಸಲಾರದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾನೆ. ಅಂತಲೇ ಇಂದು ಭೂಮಿತಾಯಿ ಅವನ ಮೇಲೆ ಮುನಿದಿದ್ದಾಳೆ, ಹೆಜ್ಜೆ ಹೆಜ್ಜೆಗೂ ರಕ್ಷಿಸುವ ಭೂತಾಯಿ ಫಲವತತ್ತೆ ಕಾಪಾಡುವುದು ನಮ್ಮೆಲ್ಲರ ಕರ್‍ತವ್ಯವಾಗಿದೆ. ಅಂತಲೇ ಇಂದು ಸರ್‍ಕಾರ ಮತ್ತು ಸಮಾಜ ಭೂತಾಯಿಯತ್ತ ವಾಲುತ್ತಿದೆ. ರೈತನಿಗೆ ಭೂಮಿಯ ಮಣ್ಣಿನ ಬಗ್ಗೆ ತಿಳುವಳಿಕೆ, ಬೀಜ, ಗೊಬ್ಬರ, ಸಾವಯವ ಕೃಷಿ ಸೊನ್ನೆ ಬಂಡವಾಳದಲ್ಲಿ ಭೂಮಿಯಲ್ಲಿ ಬೆಳೆ ಇಳುವರಿಗಳತ್ತ ನಾವು ದಾಪುಗಾಲು ಆರೋಗ್ಯಕರ ಲಕ್ಷಣವಾಗಿದೆ. ಹಾಕುತ್ತಿರುವುದು ಆರೋಗ್ಯಕರ ಲಕ್ಷಣವಾಗಿದೆ.

ಸ್ವಚ್ಛವಾದ ಪರಿಸರ, ನಿರಾಂತರವಾದ ಬಾಳಾಗಬೇಕಾದರೆ ಪರಿಸರ ಮಾಲಿನ್ಯ ತಡೆಗಟ್ಟಬೇಕಾದರೆ ಸಾವಯವ ಕೃಷಿ ಮಾಡಬೇಕಿದೆ. ಜೀವನ ಸಾರ್‍ಥಕಗೊಳಿಸಬೇಕಿದೆ. ಭೂಮಿಯ ರಕ್ಷಣೆ ನಮ್ಮೆಲ್ಲರ ಕರ್‍ತವ್ಯವಾಗಬೇಕು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...