Home / ಲೇಖನ / ಕೃಷಿ / ಭೂತಾಯಿ ರಕ್ಷಣೆ

ಭೂತಾಯಿ ರಕ್ಷಣೆ

ಬೆಳಗಾಗಿ ನಾನೆದ್ದು ಯಾರಾರ ನೆನೆಯಲಿ
ಎಳ್ಳು ಜೀರಿಗೆ ಬೆಳಿಯೋಳ-ಭೂಮಿ ತಾಯಿಯ
ಎದ್ದೊಂದ ಗಳಿಗೆ ನೆನೆದೇನ.

ಹಳ್ಳಿಯ ಮಹಿಳೆಯೊಬ್ಬಳು ಈ ಜಾನಪದ ಹಾಡಿನ ಮೂಲಕ ಭೂಮಿತಾಯಿಯ ಬಗ್ಗೆ ಅಭಿಮಾನದಿಂದ ನೆನೆದು ಹಾಡುತ್ತಾಳೆ. ಭಾರತ ಹಳ್ಳಿಗಳ ದೇಶವಾಗಿದೆ. ರೈತನೆ ಅನ್ನದಾತ. ನಮ್ಮೆಲ್ಲರನ್ನು ಸಲಹುವಳೆ ಭೂಮಿತಾಯಿ. ಅಂತಲೇ ಭುದೇವಿಯ ನೆನೆಯದೇ ವಿಧಿಯಿಲ್ಲ. ಬದುಕಿನುದ್ದಕ್ಕೂ ಭೂಮಿಯನ್ನೇ ನಂಬಿಕೊಂಡು ಬಾಳಿರುವ ರೈತ ಅವನ ಬೆವರಿನ ಫಲವೇ ನಮ್ಮ ಕೈಯೊಳಗಿನ ತುತ್ತು. ಆದರೆ ಇಂದು ಕಾಲ ಬದಲಾಗಿದೆ. ನಮ್ಮ ರಕ್ತದ ಕಣ ಕಣದಲ್ಲೂ ಭೂದೇವಿಯು ನೀಡಿದ ಆಹಾರದಂಶವಿದ್ದರೂ ಜಾಗತೀಕರಣದ ಅವಸರದಲ್ಲಿ ಭೂಮಿಯ ಫಲವತತ್ತೆ ಮತ್ತು ಅದರ ಮಹತ್ವ ನಾವು ಮರೆಯುತ್ತಿದ್ದೇವೆ.

ಇವತ್ತು ಹಳ್ಳಿ ಹಳ್ಳಿಗಳಲ್ಲೂ ಜಾಗತೀಕರಣದ ಬಿಸಿ ತಟ್ಟಿದೆ. ಎಲ್ಲರಿಗೂ ಹಣ ಸಂಪಾದನೆಯೇ ಗುರಿಯಾಗಿದೆ. ಟಿವಿಗಳು ನಮ್ಮ ಮನೆಗೆ ಲಗ್ಗೆ ಹಾಕಿದ ಮೇಲೆ ದುಡಿಮೆ, ಪರಿಶ್ರಮಗಳಿಗೆ ಗ್ರಹಣ ಹಿಡಿಯಿತ್ತಿದೆಯೋ ಎನಿಸದೆ ಇರದು. ಅಂತಲೇ ಸರ್‍ವಜ್ಞ ತನ್ನ ತ್ರಿಪದಿಗಳಲ್ಲಿ ಬೇಸಾಯಕ್ಕೆ ಮಹತ್ವ ಕೊಡುತ್ತಾನೆ.

ಕೋಟಿ ವಿದ್ಯೆಗಳಲ್ಲಿ ಮೇಟಿ ವಿದ್ಯೆಯ ಮೇಲು
ಮೇಟಿಯಿಂ ರಾಟಿ ನಡೆದುದಲ್ಲದೆ ದೇಶ
ದಾಟವೇ ಕೆಡಗು ಸರ್‍ವಜ್ಞ

ಅನೇಕ ವಿದ್ಯೆಗಳಲ್ಲಿ ವ್ಯವಸಾಯವೇ ಶ್ರೇಷ್ಠ, ಅದು ಮೇಟಿ ವಿದ್ಯೆ. ಅದರಿಂದ ರಾಟಿ ನಡೆದು ದೇಶವೇ ಬೆಳಗುವುದು. ಇಲ್ಲದಿದ್ದರೆ ಇನ್ನಾವ ಆಟವೂ ಕೆಡಗು ಎನ್ನುವ ಕವಿಯ ಭಾವ ನಿಜಕ್ಕೂ ಮೆಚ್ಚುವಂಥದ್ದು. ಆದರೆ ಇಂದು ಬೇಸಾಯಕ್ಕೆ ಜನರು ನಿರ್‍ಲಕ್ಷ್ಯ ಮಾಡುತ್ತಿರುವುದು ದುರ್‍ದೈವದ ಸಂಗತಿ. ಇಂದಿನ ದಿನಗಳಲ್ಲಿ ರೈತನು ವ್ಯವಸಾಯ ಮಾಡಿ ಹೆಚ್ಚಿನ ಇಳುವರಿ ತೆಗೆಯುವ ನಿಟ್ಟಿನಲ್ಲಿ ರಾಸಾಯನಿಕ ಗೊಬ್ಬರ, ವಿಷಯುಕ್ತ ಔಷಧಗಳನ್ನು ಬೆಳೆಗಳಿಗೆ ನೀಡಿ ಹೆಚ್ಚಿನ ಬೆಳೆ ರಾಶಿಯ ನಿರೀಕ್ಷೆಯಲ್ಲಿ ಭೂಮಿಯನ್ನು ಬಂಜರುಗೊಳಿಸುತ್ತಿದ್ದಾನೆ. ಇದರಿಂದಾಗಿ ವಾತಾವರಣ ಕಲುಷಿತಗೊಳ್ಳುವುದಷ್ಟೇ ಅಲ್ಲದೆ ಬೆಳೆಗಳಲ್ಲಿ ವಿಷದಂಶವು ತುಂಬಿ ಜನರು ರೋಗ-ರುಜಿನಗಳಿಗೆ ತುತ್ತಾಗುತ್ತಿದ್ದಾರೆ. ಆದ್ದರಿಂದ ಇಂದು ಇಂಥ ರಾಸಾಯನಿಕ ಪದಾರ್‍ಥಗಳಿಂದ ಮುಕ್ತಗೊಳ್ಳಲು ನಾವು ಸಾವಯವ ಕೃಷಿ ಮಾಡಬೇಕಿದೆ. ಈಗೀಗ ಜಗತ್ತಿನಲ್ಲಿ ಯಂತ್ರ, ವಾಹನಗಳ ಸಂಖ್ಯೆ ಜಾಸ್ತಿಯಾಗಿ ಇಂಧನ ಉಪಯೋಗದಿಂದ ವಾತಾವರಣ ಕೆಡುತಿದ್ದು ಜೈವಿಕ ಇಂಧನಕ್ಕೆ ಸಂಬಂಧಿಸಿದ ಗಿಡ-ಮರಗಳನ್ನು ನೆಟ್ಟು ದೇಶದ ಆರೋಗ್ಯ ಕಾಪಾಡಬೇಕಿದೆ.

ರೈತನು ದೇಶದ ಬೆನ್ನೆಲುಬು, ಅನ್ನದಾತನೆಂದು ಹೊಗಳಿದರೂ ಇಂದು ರೈತನಿಗೆ ಉಳಿಗಾಲವಿಲ್ಲವಾಗಿದೆ. ಬಿತ್ತಿದ ಬೀಜ ಮೊಳಕೆಯೊಡೆಯದಿದ್ದಾಗ ಮೊಳಕೆಯೊಡೆದರೂ ಬೆಳೆ ಬೆಳೆಯದಿದ್ದಾಗ ಬೆಳೆ ಬೆಳೆದರೂ ಧಾನ್ಯಕ್ಕೆ ಕೈತುಂಬ ಹಣ ಬರದೇ ಇದ್ದಾಗ ಅವನ ಬದುಕು ನಿತ್ಯ ಸಾಯುತ್ತಿದೆ. ಬದುಕನ್ನು ಎದುರಿಸಲಾರದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾನೆ. ಅಂತಲೇ ಇಂದು ಭೂಮಿತಾಯಿ ಅವನ ಮೇಲೆ ಮುನಿದಿದ್ದಾಳೆ, ಹೆಜ್ಜೆ ಹೆಜ್ಜೆಗೂ ರಕ್ಷಿಸುವ ಭೂತಾಯಿ ಫಲವತತ್ತೆ ಕಾಪಾಡುವುದು ನಮ್ಮೆಲ್ಲರ ಕರ್‍ತವ್ಯವಾಗಿದೆ. ಅಂತಲೇ ಇಂದು ಸರ್‍ಕಾರ ಮತ್ತು ಸಮಾಜ ಭೂತಾಯಿಯತ್ತ ವಾಲುತ್ತಿದೆ. ರೈತನಿಗೆ ಭೂಮಿಯ ಮಣ್ಣಿನ ಬಗ್ಗೆ ತಿಳುವಳಿಕೆ, ಬೀಜ, ಗೊಬ್ಬರ, ಸಾವಯವ ಕೃಷಿ ಸೊನ್ನೆ ಬಂಡವಾಳದಲ್ಲಿ ಭೂಮಿಯಲ್ಲಿ ಬೆಳೆ ಇಳುವರಿಗಳತ್ತ ನಾವು ದಾಪುಗಾಲು ಆರೋಗ್ಯಕರ ಲಕ್ಷಣವಾಗಿದೆ. ಹಾಕುತ್ತಿರುವುದು ಆರೋಗ್ಯಕರ ಲಕ್ಷಣವಾಗಿದೆ.

ಸ್ವಚ್ಛವಾದ ಪರಿಸರ, ನಿರಾಂತರವಾದ ಬಾಳಾಗಬೇಕಾದರೆ ಪರಿಸರ ಮಾಲಿನ್ಯ ತಡೆಗಟ್ಟಬೇಕಾದರೆ ಸಾವಯವ ಕೃಷಿ ಮಾಡಬೇಕಿದೆ. ಜೀವನ ಸಾರ್‍ಥಕಗೊಳಿಸಬೇಕಿದೆ. ಭೂಮಿಯ ರಕ್ಷಣೆ ನಮ್ಮೆಲ್ಲರ ಕರ್‍ತವ್ಯವಾಗಬೇಕು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...