Home / ಲೇಖನ / ಇತರೆ / ನೋವಿನಿಂದಲೇ ಜ್ಞಾನ

ನೋವಿನಿಂದಲೇ ಜ್ಞಾನ

ಗಾಣದಲ್ಲಿ ಸಿಲುಕಿದ ಎಳ್ಳು
ನೋಯದೆ ಎಣ್ಣೆಯ ಬಿಡುವುದೆ
ಕಾಯದಲ್ಲಿ ಸಿಲುಕಿದ ಜೀವ
ನೋಯದ ಕರಣಂಗಳ ಬಿಡುವನೆ
ಭಾವದಲ್ಲಿ ಸಿಲುಕಿದ ಭ್ರಮೆ
ನೋಯದೆ ವಿಕಾರವ ಬಿಡುವುದೆ
ಇಂತಿವನರಿದಲ್ಲದೆ ಜ್ಞಾನಲೇಪವಿಲ್ಲ
ನಿಃಕಳಂಕ ಮಲ್ಲಿಕಾರ್ಜುನಾ

ವೇದ ಎಂದರೆ ಜ್ಞಾನವಂತೆ. ವೇದನೆ ಎಂದರೆ ನೋವು. ನೋಯದೆ ಜ್ಞಾನವಿಲ್ಲ. ವೇದನೆ ಇಲ್ಲದೆ ವೇದವಿಲ್ಲ. ಜೀವ ಮತ್ತು ದೇಹ ಬೇರೆ ಎಂದುಕೊಳ್ಳುವುದಾದರೆ ಎಳ್ಳಿನೊಳಗಿರುವ ಎಣ್ಣೆಯಂತೆ. ಗಾಣಕ್ಕೆ ಸಿಕ್ಕಿ ನೋಯದೆ ಎಣ್ಣೆ ಬಾರದು. ದೇಹ ನೋವಿಗೀಡಾಗದೆ ಜ್ಞಾನ ಸಿಗದು. ಮನಸ್ಸು, ಮಾತು, ದೇಹ ಇವು ಕರಣಗಳು. ಇವುಗಳ ಮಿತಿ ತಿಳಿಯುವುದು ನೋವಿನಿಂದಲೇ.

ಭಾವಗಳು ಭ್ರಮೆಗೆ ಕಾರಣ. ನಮಗೆ ಇಷ್ಟವಾದದ್ದು, ಪ್ರಿಯವಾದದ್ದು, ಅವು ಮಾತ್ರವೇ ಒಳ್ಳೆಯದು ಎಂದು ತಿಳಿಯುವುದು, ಅವನ್ನೇ ಆಶಿಸುವುದು, ಹೊಂದಲು ಬಯಸುವುದು ಇವೆಲ್ಲ ಸಹಜವೆಂದು ತೋರಿದರೂ ನಿಜವಾಗಿ ಭ್ರಮೆಗಳೇ. ಭ್ರಮೆಗಳು ಹುಟ್ಟುವುದೇ ಇಷ್ಟ, ಇಷ್ಟವಿಲ್ಲ, ಬೇಕು, ಬೇಡ, ಇತ್ಯಾದಿ ಭಾವಗಳಿಂದ. ನೋವಿನಿಂದ ಮಾತ್ರವೇ ಇಂಥ ಭ್ರಮೆ ಇಲ್ಲವಾಗುವುದು. ನೋವನ್ನು ತಿಳಿಯದಿದ್ದರೆ ಜ್ಞಾನದ ಲೇಪ ಇಲ್ಲ. ಲೇಪ ಅಂದರೆ ಮುಲಾಮು ಕೂಡ ಹೌದು. ನೋವಿಗೆ ಔಷಧ ತಿಳಿವಳಿಕೆಯೊಂದೇ.

`ನನಗೇ ಯಾಕೆ ಈ ಕಷ್ಟ, ಈ ನೋವು?’ ಎಂದು ಸಾವಿರ ಸಲ ಅಂದುಕೊಂಡಿರುತ್ತೇವೆ. ಅಂದುಕೊಂಡಿರುತ್ತೇವೆ, ಅಷ್ಟೆ. ಆ ನೋವನ್ನೇ ತಿಳಿವಳಿಕೆಯ ಲೇಪಮಾಡಿಕೊಳ್ಳುವುದು ಅಗತ್ಯ ಎಂದು ಮೋಳಿಗೆ ಮಾರಯ್ಯನ ಈ ವಚನ ಹೇಳುತ್ತದೆ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...