Home / ಲೇಖನ / ಇತರೆ / ಕುರುಹು

ಕುರುಹು

ಗಿಣಿಯಿಲ್ಲದ ಪಂಜರ ಹಲವು ಮಾತನಾಡಬಲ್ಲುದೆ
ದೇವರಿಲ್ಲದ ದೇಗುಲಕ್ಕೆ ಮಂತ್ರ ಅಭಿಷೇಕವುಂಟೆ
ಅರಿವು ನಷ್ಟವಾಗಿ
ಕುರುವಿನ ಹಾವಚೆಯ ನಾನರಿಯೆನೆಂದನಂಬಿಗ ಚವುಡಯ್ಯ

ಮಾತನಾಡುವುದು ಗಿಣಿ ಮಾತ್ರ, ಪಂಜರವಲ್ಲ. ಅಭಿಷೇಕ ದೇವರಿಗೇ ಹೊರತು ದೇಗುಲಕ್ಕಲ್ಲ. ಪಂಜರ, ದೇಗುಲ ಇವು ಕೇವಲ ಕುರುಹುಗಳು. ಅರಿವಿಲ್ಲದ ಕುರುಹು ಕೇವಲ ಹಾವಸೆ, ಅಥವಾ ಪಾಚಿ, ಅದರ ಹಂಗು ಬೇಡ ಅನ್ನುತ್ತಾನೆ ಅಂಬಿಗ ಚವುಡಯ್ಯ.

ಇದೇ ಮಾತನ್ನು ಮುಂದುವರೆಸಿದರೆ ಕವಿತೆ ಮುಖ್ಯವಾಗಬೇಕಲ್ಲದೆ ಕವಿಯಲ್ಲ, ಕಾರ್ಯ ಮುಖ್ಯವಾಗಬೇಕಲ್ಲದೆ ಕರ್ತೃವಲ್ಲ, ಅಡುಗೆ ಮುಖ್ಯವಾಗಬೇಕಲ್ಲದೆ ಅಡುಗೆಯವರಲ್ಲ, ತಜ್ಞತೆ ಮುಖ್ಯವಾಗಬೇಕಲ್ಲದೆ ತಜ್ಞರು ಅಲ್ಲ ಎಂದು ಎಷ್ಟು ಬೇಕಾದರೂ ಹೇಳಬಹುದು.

ಹಾಗೆ ಎರಡನ್ನೂ ಬಿಡಿಸಿ ಬಿಡಿಸಿ ನೋಡಲು ಆಗುವುದೇ? ಕವಿತೆಯನ್ನು ನಿಂದಿಸಿದರೆ ಕವಿ ನೋಯುವುದಿಲ್ಲವೇ? ಮಾಡಿದ ಕೆಲಸ ಅಸಮರ್ಪಕ ಎಂದರೆ ಮಾಡಿದವರಿಗೆ ಬೇಸರವಾಗದೇ? ತಜ್ಞತೆಯನ್ನು ಪ್ರಶ್ನಿಸಿದರೆ ತಜ್ಞರು ಕೆರಳರೇ? ಬಿಡಿಸಿ ನೋಡುವ, ಒಟ್ಟಾಗಿ ಅರಿವ ಹದ ತಿಳಿಯಬೇಕೆನ್ನುವುದೇ ವಚನಗಳ ಮುಖ್ಯ ಉದ್ದೇಶಗಳಲ್ಲಿ ಒಂದು. ಕಷ್ಟ, ಆದರೆ ಅಸಾಧ್ಯವೇ? ವ್ಯಕ್ತಿಯನ್ನು ಟೀಕಿಸದೆ ವ್ಯಕ್ತಿಯ ಕಾರ್ಯವನ್ನು ಮಾತ್ರ ಟೀಕಿಸುವ ಪ್ರೀತಿ ಸಾಧ್ಯವಾದರೆ ಎಷ್ಟು ಚೆನ್ನ!
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...