Home / ಲೇಖನ / ಇತರೆ / ಕುರುಹು

ಕುರುಹು

ಗಿಣಿಯಿಲ್ಲದ ಪಂಜರ ಹಲವು ಮಾತನಾಡಬಲ್ಲುದೆ
ದೇವರಿಲ್ಲದ ದೇಗುಲಕ್ಕೆ ಮಂತ್ರ ಅಭಿಷೇಕವುಂಟೆ
ಅರಿವು ನಷ್ಟವಾಗಿ
ಕುರುವಿನ ಹಾವಚೆಯ ನಾನರಿಯೆನೆಂದನಂಬಿಗ ಚವುಡಯ್ಯ

ಮಾತನಾಡುವುದು ಗಿಣಿ ಮಾತ್ರ, ಪಂಜರವಲ್ಲ. ಅಭಿಷೇಕ ದೇವರಿಗೇ ಹೊರತು ದೇಗುಲಕ್ಕಲ್ಲ. ಪಂಜರ, ದೇಗುಲ ಇವು ಕೇವಲ ಕುರುಹುಗಳು. ಅರಿವಿಲ್ಲದ ಕುರುಹು ಕೇವಲ ಹಾವಸೆ, ಅಥವಾ ಪಾಚಿ, ಅದರ ಹಂಗು ಬೇಡ ಅನ್ನುತ್ತಾನೆ ಅಂಬಿಗ ಚವುಡಯ್ಯ.

ಇದೇ ಮಾತನ್ನು ಮುಂದುವರೆಸಿದರೆ ಕವಿತೆ ಮುಖ್ಯವಾಗಬೇಕಲ್ಲದೆ ಕವಿಯಲ್ಲ, ಕಾರ್ಯ ಮುಖ್ಯವಾಗಬೇಕಲ್ಲದೆ ಕರ್ತೃವಲ್ಲ, ಅಡುಗೆ ಮುಖ್ಯವಾಗಬೇಕಲ್ಲದೆ ಅಡುಗೆಯವರಲ್ಲ, ತಜ್ಞತೆ ಮುಖ್ಯವಾಗಬೇಕಲ್ಲದೆ ತಜ್ಞರು ಅಲ್ಲ ಎಂದು ಎಷ್ಟು ಬೇಕಾದರೂ ಹೇಳಬಹುದು.

ಹಾಗೆ ಎರಡನ್ನೂ ಬಿಡಿಸಿ ಬಿಡಿಸಿ ನೋಡಲು ಆಗುವುದೇ? ಕವಿತೆಯನ್ನು ನಿಂದಿಸಿದರೆ ಕವಿ ನೋಯುವುದಿಲ್ಲವೇ? ಮಾಡಿದ ಕೆಲಸ ಅಸಮರ್ಪಕ ಎಂದರೆ ಮಾಡಿದವರಿಗೆ ಬೇಸರವಾಗದೇ? ತಜ್ಞತೆಯನ್ನು ಪ್ರಶ್ನಿಸಿದರೆ ತಜ್ಞರು ಕೆರಳರೇ? ಬಿಡಿಸಿ ನೋಡುವ, ಒಟ್ಟಾಗಿ ಅರಿವ ಹದ ತಿಳಿಯಬೇಕೆನ್ನುವುದೇ ವಚನಗಳ ಮುಖ್ಯ ಉದ್ದೇಶಗಳಲ್ಲಿ ಒಂದು. ಕಷ್ಟ, ಆದರೆ ಅಸಾಧ್ಯವೇ? ವ್ಯಕ್ತಿಯನ್ನು ಟೀಕಿಸದೆ ವ್ಯಕ್ತಿಯ ಕಾರ್ಯವನ್ನು ಮಾತ್ರ ಟೀಕಿಸುವ ಪ್ರೀತಿ ಸಾಧ್ಯವಾದರೆ ಎಷ್ಟು ಚೆನ್ನ!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...