ಅನನ್ಯ ಹೇಮೆ

ಮುಚ್ಚಿಕೊಂಡ ಕದಗಳ
ಆಹ್ವಾನವಿಲ್ಲದ ಅಂತಃಪುರದೊಳಗೂ
ಹೇಗೋ ನುಗ್ಗಿಬಿಡುತ್ತಾಳೆ
ಗೊತ್ತೇ ಆಗದಂತೆ
ಮೆಲ್ಲ ಮೆಲ್ಲಗೆ ಗೂಡುಕಟ್ಟಿ
ಕನಸಿನ ಮೊಟ್ಟೆ ಇಟ್ಟುಬಿಡುತ್ತಾಳೆ
ಇವಳದೇ ಜೀವಭಾವ
ಮೈಮನಗಳ ತುಂಬಿಕೊಂಡು
ಮೊಟ್ಟೆಯೊಡೆದು ಹುಟ್ಟಿಬಂದ
ಕನಸಿನ ಕಂದನಿಗೆ
ವರ್ಣನೆಗೆ ಸಿಲುಕದ
ಅದೆಷ್ಟು ವರ್ಣಗಳು!
ಒಳಗೆಲ್ಲಾ ಹೋಲಿ
ಎರಚಿದ ರಂಗುಗಳು!

ಬಣ್ಣದ ಅಂತಃಪುರಕೆಲ್ಲ
ಜೀವ ಬಂದಿದೆ ಈಗ
ಇವಳು ಕಚಗುಳಿ ಇರಿಸಿ
ಕುಣಿಸಿದಂತೆಲ್ಲಾ
ತಕಥೈ ಕುಣಿಯುತ್ತಾ
ಅಪೂರ್ಣ ಕಥೆಗಳೇ
ಇತಿಹಾಸವಾಗಿಬಿಡುವ
ಈ ನಾಡಿನಲ್ಲಿ
ಮಾನುಷ ಬಣ್ಣಗಳು
ಇವಳ ಆವ್ಹಾಯಿಸಿಕೊಂಡೂ
ಅರ್ಥವಿಲ್ಲದ ಕಥೆಗಳಾಗಿಬಿಡುತ್ತವೆ.

ಜೀವ ಸೆಲೆಯುಕ್ಕಿಸುವ
ಇವಳು ಮಾತ್ರ
ಏನೂ ಗೊತ್ತಿಲ್ಲದಂತೆ ಒಳಗೇ
ಎಂದೆಂದಿಗೂ ಮುಗಿಯದ
ಜೀವಂತ ಕವಿತೆಯಾಗಿ ಉಕ್ಕುತ್ತಾ
ಹರಿಯುತ್ತಲೇ ಇರುತ್ತಾಳೆ
ಎಲ್ಲೆಡೆಗೆ ಹಬ್ಬಿ
ಎಲ್ಲರನೂ ತಬ್ಬಿ
ಪ್ರೇಮಸಂದೇಶ ಸಾರುತ್ತಲೇ ಉಳಿಯುತ್ತಾಳೆ
ಈ ಅನನ್ಯ ಹೇಮೆ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅವತಾರಿ ಬರುತ್ತಾನೆ
Next post ಶೋಭಾಯಾತ್ರೆ ಹೊಂಟ ಯಡೂರಿ ಹಿಕಮತ್ತು

ಸಣ್ಣ ಕತೆ

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

cheap jordans|wholesale air max|wholesale jordans|wholesale jewelry|wholesale jerseys