ಸತ್ಮೇಲ್ ಏನೈತಣ್ಣ?

ಬೆಳದಿಂಗಳ ರಾತ್ರೇಲಿ ಈಚೋರಿ ಬತ್ತಂದ್ರೆ
ಈಚೆಂಡ ಚೆಲ್ಲಂಗೆ ನೆಪ್ಪಾಯ್ತದೆ.
ಆಕಾಸದ್ ಚಂದ್ರನ್ನ ಪಡಕಾನೆ ದೀಪಕ್ಕೆ
ವೋಲೀಸ್ದೆ ವೋಯ್ತಂದ್ರೆ ತಪ್ಪಾಯ್ತದೆ. ೧

ಕುಡದೋರು ಮತ್ಬಂದು ಬೀಳೋಹಂಗ್ ಬಿದ್ರೋವೆ
ಮನೆಗೋಳು ಮರಗೋಳು ಬೀದೀಲೆಲ್ಲಾ.
ಪಡಕಾನೆ ಜನದಂಗೆ ಬಡದಾಡ್ತ ಕಾಯ್ತಾವೆ
ಕಾಗೇಗಳ್ಗ್ ಒಸ್ಸೀನ ಬುದ್ದೀನಿಲ್ಲ. ೨

ಇದ್ ಕಂಡ್ರೆ ಪಡಕಾನೆ ಕಣ್ಗ್ ಕಟ್ದಂಗಾಯ್ತದೆ
ತೊಟ್ಟ್ ಯೆಂಡ ಬೇಕಂದ್ರೆ ಬುಂಡೇಲಿಲ್ಲ.
ಯೆಂಡ್ ಇಲ್ಲಾಂತ್ ಅಲದಾಡೊ ನನ್ನಂತ ಪಾಪೀನ
ಇದುವರೆಗೆ ಬೂಂತಾಯಿ ಕಂಡೋಳಲ್ಲ. ೩

ಸುಂಕ್ ಅತ್ಕೊಂಡ್ ಏನ್ಬತ್ತು? ಇಲ್ಲದ್ ಅತ್ತ್ ಏನ್ಬತ್ತು?
ಕಟ್ಟೈತೆ ಕಸ್ಟ್ ಸುಕ ವುಟ್ದೇಟ್ಗೇನೆ!
ಕಟ್ಟಿದ್ದನ್ ಅಟ್ಟ್ ಉಂಡು ಅನಬೌಸೋಕ್ ಆಗದಿದ್ರೆ
ಪ್ರಾಣಾನ ಕಳಕೋಬೇಕ್ ಒಂದೇಟ್ಗೇನೆ! ೪

ಅಳಗೀಳೋದ್ ಎಲ್ಲಾನ ಯೆಂಗಿಸ್ಗೆ ವೊಪ್ತಾದೆ-
ನೆಗತಿರಬೇಕ್ ಗಂಡಸ್ರು ಪ್ರಾಣ್ ಓದ್ರೂನೆ!
ಬದಕಿದ್ರೆ ಯೆವ್ತಾರ ಪಡಕಾನೇಗ್ ಓಗ್ ಬೌದು!
ಸತ್ಮೇಲ್ ಏನೈತಣ್ಣ? ದೊಡ್ ಸೊನ್ನೇನೆ! ೫
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸುಖಸ್ಪರ್‍ಶ
Next post ಗಾಂಧಿ-ಡಿಮಿಥಿಫೈಡ್

ಸಣ್ಣ ಕತೆ

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…