Home / ಕವನ / ಕವಿತೆ / ರಾಷ್ಟ್ರೀಯ ಶಿಕ್ಷಣದ ಸಪ್ತಾಹದ ಕರೆ

ರಾಷ್ಟ್ರೀಯ ಶಿಕ್ಷಣದ ಸಪ್ತಾಹದ ಕರೆ

ದಾಯಿ ಹಾಲನೆ ನಂಬಿ ಬಾಯಾರಿ ಬಸವಳಿದು
ತಾಯೆ ಎಂದರಚಲುಂ ಮಿಸುಕದಿರೆ ರಸನೆ,
ನೀನೆಮ್ಮನರಸುತಯ್ತಂದು ತೊಡೆಯಲಿ ತಳೆದು
ಮೊಲೆಯಿನಿಂತೆಮ್ಮ ಬಾಯ್ದುಂಬಿಸಲು ಸಸಿನೆ, ೪

ಧನ್ಯರಾವೆಮ! ದಾಯಿಯೂಡಿಸಿದ ಮಗು ಮುಂದು
ತನ್ನ ತಾನರಿತೆದ್ದು ನಿಡುನಿಲ್ಲಲಹುದೇ?
ರವಿ ಚಿತ್ರಿಪಂತೆ ಚಿತ್ರಿಪನೆ ಪುಷ್ಪಮನಿಂದು?
ನೀನೀನ ಜೀವ ದಾಯಿಯಿನೆಮಗೆ ಬಹುದೇ? ೮

ತಾಯೆ ನಿನ್ನಯ ಪುಣ್ಯಪೀಯೂಷಸ್ತನ್ಯಂ
ಸೂಸುತಿದೆ, ರಾಷ್ಟ್ರೀಯ ಶಿಕ್ಷಣಮನನ್ಯಂ ?
ನವಜೀವನದ ಬುಗ್ಗೆಯಿದನೊಂದನೆಮ್ಮ
ಹೃದಯದ ನಿದಾಘದಿಂ ಬತ್ತಿಸದಿರಮ್ಮ! ೧೨

ಕತ್ತಲೆ ಕವಿದ ನಮ್ಮ ಕಂಗಳಿಗೆ ಪರೆ ನೆರೆಯೆ,
ನಮ್ಮ ನಾವ್ಮರೆತು ನಮ್ಮವರ ಮರೆವನ್ನಂ,
ಚೆದರಿ ನಮ್ಮೊಳಗೆ ಜಗಳಾಡಲೇನಚ್ಚರಿಯೆ?
ಸಾಕಿನಿತು! ರಾಷ್ಟ್ರೀಯ ಶಿಕ್ಷಣಮೆ ನಿನ್ನ ೧೬

ದೀಧಿತಿಯಿನೆಮ್ಮಯ ಮನೋನಯನಮಂ ತೆರೆದು,
ಭೇದಗಳ ಬಿರುವರೆಯ ಹೆರೆಯಿಸುವುದಲ್ಲಿ!
ನಾನೆ ನಾ ನೀನೆ ನೀನಿದನೆಮ್ಮೆದೆಯಿನರೆದು
ನಾವು ನಾವೆಂಬ ಭಾಷೆಯ ಕೆತ್ತಿಸಲ್ಲಿ! ೨೦

ಕ್ರೈಸ್ತ ಪಾರಸಿ ಜೈನ ಮುಸಲಮಾನ್‌ ಹಿಂದು
ವೆಮಗೆಲ್ಲರಿಗೆ ನಮ್ಮ ಭಾರತಮಿದೊಂದು
ತವರು ಗಡ! ರಾಷ್ಟ್ರೀಯ ಶಿಕ್ಷಣಮೆ ಬಂದು
ಒಟ್ಟಿನ ತವರ್‍ತನವನೆಸಗಿನ್ನು ಮುಂದು! ೨೪

ಎದ್ದೇಳಿರೈ ಬಂಧುಗಳಿರ! ಕೆಲವರಿಯುತಿದೆ
ರಾಷ್ಟ್ರೀಯ ಶಿಕ್ಷಣದ ಸಪ್ತಾಹಮಿಂದು!
ತಂತನೂಳಿಗವ ಗೆಯ್ಯಿರಿಮೆಂದು ಕರೆಯುತಿದೆ,
ಬಂಗಾರಮಪ್ಪುದು ಭವಿಷ್ಯ ವಲಮೆಂದು! ೨೮

ತನ್ನ ತಾಯ್ನುಡಿಯಿಂದ ದುಡಿದ ಬಿಜ್ಜೆಯೆ ಬಿಜ್ಜೆ!
ಹೆರರ ನಾಲಗೆಯೆಂಜಲೆನ್ನೆಗಂ ಸವಿಯೊ?
ತನ್ನ ಮುಂಗತಿ ತೋರೆ ತನ್ನ ಹಿರಿಯರ ಹೆಜ್ಜೆ!
ಹೆರರ ಬೆಳಕೊಳೆ ಕಾಂಬ ತನ್ನವರ ೧ ಕವಿಯೊ? ೩೨

ಅವರವರ ನುಡಿಗಳಿಂದವರವರ ಜಾಣಿ
ಕೆಯನೆಚ್ಚರಿಸುವ ನುಡಿಗಳ ತಾಯೆ ವಾಣಿ!
ನಿರವಶೇಷ ಜ್ಞಾನದರ್‍ಜನವನೆಮ್ಮ
ನುಡಿಯಿನೆಮಗಿತ್ತು ಭಾರತವ ಸಲಹಮ್ಮ! ೩೬
*****
ದ್ರುಷ್ಟಾರ (seer)

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...