ರಾಷ್ಟ್ರೀಯ ಶಿಕ್ಷಣದ ಸಪ್ತಾಹದ ಕರೆ

ದಾಯಿ ಹಾಲನೆ ನಂಬಿ ಬಾಯಾರಿ ಬಸವಳಿದು
ತಾಯೆ ಎಂದರಚಲುಂ ಮಿಸುಕದಿರೆ ರಸನೆ,
ನೀನೆಮ್ಮನರಸುತಯ್ತಂದು ತೊಡೆಯಲಿ ತಳೆದು
ಮೊಲೆಯಿನಿಂತೆಮ್ಮ ಬಾಯ್ದುಂಬಿಸಲು ಸಸಿನೆ, ೪

ಧನ್ಯರಾವೆಮ! ದಾಯಿಯೂಡಿಸಿದ ಮಗು ಮುಂದು
ತನ್ನ ತಾನರಿತೆದ್ದು ನಿಡುನಿಲ್ಲಲಹುದೇ?
ರವಿ ಚಿತ್ರಿಪಂತೆ ಚಿತ್ರಿಪನೆ ಪುಷ್ಪಮನಿಂದು?
ನೀನೀನ ಜೀವ ದಾಯಿಯಿನೆಮಗೆ ಬಹುದೇ? ೮

ತಾಯೆ ನಿನ್ನಯ ಪುಣ್ಯಪೀಯೂಷಸ್ತನ್ಯಂ
ಸೂಸುತಿದೆ, ರಾಷ್ಟ್ರೀಯ ಶಿಕ್ಷಣಮನನ್ಯಂ ?
ನವಜೀವನದ ಬುಗ್ಗೆಯಿದನೊಂದನೆಮ್ಮ
ಹೃದಯದ ನಿದಾಘದಿಂ ಬತ್ತಿಸದಿರಮ್ಮ! ೧೨

ಕತ್ತಲೆ ಕವಿದ ನಮ್ಮ ಕಂಗಳಿಗೆ ಪರೆ ನೆರೆಯೆ,
ನಮ್ಮ ನಾವ್ಮರೆತು ನಮ್ಮವರ ಮರೆವನ್ನಂ,
ಚೆದರಿ ನಮ್ಮೊಳಗೆ ಜಗಳಾಡಲೇನಚ್ಚರಿಯೆ?
ಸಾಕಿನಿತು! ರಾಷ್ಟ್ರೀಯ ಶಿಕ್ಷಣಮೆ ನಿನ್ನ ೧೬

ದೀಧಿತಿಯಿನೆಮ್ಮಯ ಮನೋನಯನಮಂ ತೆರೆದು,
ಭೇದಗಳ ಬಿರುವರೆಯ ಹೆರೆಯಿಸುವುದಲ್ಲಿ!
ನಾನೆ ನಾ ನೀನೆ ನೀನಿದನೆಮ್ಮೆದೆಯಿನರೆದು
ನಾವು ನಾವೆಂಬ ಭಾಷೆಯ ಕೆತ್ತಿಸಲ್ಲಿ! ೨೦

ಕ್ರೈಸ್ತ ಪಾರಸಿ ಜೈನ ಮುಸಲಮಾನ್‌ ಹಿಂದು
ವೆಮಗೆಲ್ಲರಿಗೆ ನಮ್ಮ ಭಾರತಮಿದೊಂದು
ತವರು ಗಡ! ರಾಷ್ಟ್ರೀಯ ಶಿಕ್ಷಣಮೆ ಬಂದು
ಒಟ್ಟಿನ ತವರ್‍ತನವನೆಸಗಿನ್ನು ಮುಂದು! ೨೪

ಎದ್ದೇಳಿರೈ ಬಂಧುಗಳಿರ! ಕೆಲವರಿಯುತಿದೆ
ರಾಷ್ಟ್ರೀಯ ಶಿಕ್ಷಣದ ಸಪ್ತಾಹಮಿಂದು!
ತಂತನೂಳಿಗವ ಗೆಯ್ಯಿರಿಮೆಂದು ಕರೆಯುತಿದೆ,
ಬಂಗಾರಮಪ್ಪುದು ಭವಿಷ್ಯ ವಲಮೆಂದು! ೨೮

ತನ್ನ ತಾಯ್ನುಡಿಯಿಂದ ದುಡಿದ ಬಿಜ್ಜೆಯೆ ಬಿಜ್ಜೆ!
ಹೆರರ ನಾಲಗೆಯೆಂಜಲೆನ್ನೆಗಂ ಸವಿಯೊ?
ತನ್ನ ಮುಂಗತಿ ತೋರೆ ತನ್ನ ಹಿರಿಯರ ಹೆಜ್ಜೆ!
ಹೆರರ ಬೆಳಕೊಳೆ ಕಾಂಬ ತನ್ನವರ ೧ ಕವಿಯೊ? ೩೨

ಅವರವರ ನುಡಿಗಳಿಂದವರವರ ಜಾಣಿ
ಕೆಯನೆಚ್ಚರಿಸುವ ನುಡಿಗಳ ತಾಯೆ ವಾಣಿ!
ನಿರವಶೇಷ ಜ್ಞಾನದರ್‍ಜನವನೆಮ್ಮ
ನುಡಿಯಿನೆಮಗಿತ್ತು ಭಾರತವ ಸಲಹಮ್ಮ! ೩೬
*****
ದ್ರುಷ್ಟಾರ (seer)

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೋಡಲು ಕ್ರಿಕೇಟು ಮ್ಯಾಚು
Next post ಭಾರತ ಕಮ್ಮಿಯಿಲ್ಲ

ಸಣ್ಣ ಕತೆ

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

cheap jordans|wholesale air max|wholesale jordans|wholesale jewelry|wholesale jerseys