Home / ಕವನ / ಕವಿತೆ / ರಾಷ್ಟ್ರೀಯ ಶಿಕ್ಷಣದ ಸಪ್ತಾಹದ ಕರೆ

ರಾಷ್ಟ್ರೀಯ ಶಿಕ್ಷಣದ ಸಪ್ತಾಹದ ಕರೆ

ದಾಯಿ ಹಾಲನೆ ನಂಬಿ ಬಾಯಾರಿ ಬಸವಳಿದು
ತಾಯೆ ಎಂದರಚಲುಂ ಮಿಸುಕದಿರೆ ರಸನೆ,
ನೀನೆಮ್ಮನರಸುತಯ್ತಂದು ತೊಡೆಯಲಿ ತಳೆದು
ಮೊಲೆಯಿನಿಂತೆಮ್ಮ ಬಾಯ್ದುಂಬಿಸಲು ಸಸಿನೆ, ೪

ಧನ್ಯರಾವೆಮ! ದಾಯಿಯೂಡಿಸಿದ ಮಗು ಮುಂದು
ತನ್ನ ತಾನರಿತೆದ್ದು ನಿಡುನಿಲ್ಲಲಹುದೇ?
ರವಿ ಚಿತ್ರಿಪಂತೆ ಚಿತ್ರಿಪನೆ ಪುಷ್ಪಮನಿಂದು?
ನೀನೀನ ಜೀವ ದಾಯಿಯಿನೆಮಗೆ ಬಹುದೇ? ೮

ತಾಯೆ ನಿನ್ನಯ ಪುಣ್ಯಪೀಯೂಷಸ್ತನ್ಯಂ
ಸೂಸುತಿದೆ, ರಾಷ್ಟ್ರೀಯ ಶಿಕ್ಷಣಮನನ್ಯಂ ?
ನವಜೀವನದ ಬುಗ್ಗೆಯಿದನೊಂದನೆಮ್ಮ
ಹೃದಯದ ನಿದಾಘದಿಂ ಬತ್ತಿಸದಿರಮ್ಮ! ೧೨

ಕತ್ತಲೆ ಕವಿದ ನಮ್ಮ ಕಂಗಳಿಗೆ ಪರೆ ನೆರೆಯೆ,
ನಮ್ಮ ನಾವ್ಮರೆತು ನಮ್ಮವರ ಮರೆವನ್ನಂ,
ಚೆದರಿ ನಮ್ಮೊಳಗೆ ಜಗಳಾಡಲೇನಚ್ಚರಿಯೆ?
ಸಾಕಿನಿತು! ರಾಷ್ಟ್ರೀಯ ಶಿಕ್ಷಣಮೆ ನಿನ್ನ ೧೬

ದೀಧಿತಿಯಿನೆಮ್ಮಯ ಮನೋನಯನಮಂ ತೆರೆದು,
ಭೇದಗಳ ಬಿರುವರೆಯ ಹೆರೆಯಿಸುವುದಲ್ಲಿ!
ನಾನೆ ನಾ ನೀನೆ ನೀನಿದನೆಮ್ಮೆದೆಯಿನರೆದು
ನಾವು ನಾವೆಂಬ ಭಾಷೆಯ ಕೆತ್ತಿಸಲ್ಲಿ! ೨೦

ಕ್ರೈಸ್ತ ಪಾರಸಿ ಜೈನ ಮುಸಲಮಾನ್‌ ಹಿಂದು
ವೆಮಗೆಲ್ಲರಿಗೆ ನಮ್ಮ ಭಾರತಮಿದೊಂದು
ತವರು ಗಡ! ರಾಷ್ಟ್ರೀಯ ಶಿಕ್ಷಣಮೆ ಬಂದು
ಒಟ್ಟಿನ ತವರ್‍ತನವನೆಸಗಿನ್ನು ಮುಂದು! ೨೪

ಎದ್ದೇಳಿರೈ ಬಂಧುಗಳಿರ! ಕೆಲವರಿಯುತಿದೆ
ರಾಷ್ಟ್ರೀಯ ಶಿಕ್ಷಣದ ಸಪ್ತಾಹಮಿಂದು!
ತಂತನೂಳಿಗವ ಗೆಯ್ಯಿರಿಮೆಂದು ಕರೆಯುತಿದೆ,
ಬಂಗಾರಮಪ್ಪುದು ಭವಿಷ್ಯ ವಲಮೆಂದು! ೨೮

ತನ್ನ ತಾಯ್ನುಡಿಯಿಂದ ದುಡಿದ ಬಿಜ್ಜೆಯೆ ಬಿಜ್ಜೆ!
ಹೆರರ ನಾಲಗೆಯೆಂಜಲೆನ್ನೆಗಂ ಸವಿಯೊ?
ತನ್ನ ಮುಂಗತಿ ತೋರೆ ತನ್ನ ಹಿರಿಯರ ಹೆಜ್ಜೆ!
ಹೆರರ ಬೆಳಕೊಳೆ ಕಾಂಬ ತನ್ನವರ ೧ ಕವಿಯೊ? ೩೨

ಅವರವರ ನುಡಿಗಳಿಂದವರವರ ಜಾಣಿ
ಕೆಯನೆಚ್ಚರಿಸುವ ನುಡಿಗಳ ತಾಯೆ ವಾಣಿ!
ನಿರವಶೇಷ ಜ್ಞಾನದರ್‍ಜನವನೆಮ್ಮ
ನುಡಿಯಿನೆಮಗಿತ್ತು ಭಾರತವ ಸಲಹಮ್ಮ! ೩೬
*****
ದ್ರುಷ್ಟಾರ (seer)

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...