ಮನುಜನಿಗೆ

ಮನುಜ ಬಾಳಿನಾಳ ಅರಿಬೇಕು
ಹೆಜ್ಜೆ ಹೆಜ್ಜೆಗೂ ಬದುಕು ಉರುಳುತ್ತಿದೆ
ನಾಳಿನ ಕನ್ಸುಗಳ ಹೊತ್ತು
ಕ್ಷಣ ಕ್ಷಣಕ್ಕೂ ಬಾಳು ನವಿಯುತ್ತಿದೆ

ನಿನ್ನ ಮೂಲ ಎಲ್ಲಯದು ಅರಿಯದೇ
ಬರಿದೆ ದೊಂಬರಾಟ ನಿತ್ಯವೂ
ಇಂದ್ರಿಯ ಸೌಖ್ಯ ಮೋಜೆಂದು
ಮರೆತು ಬಿಟ್ಟಿಯಾ ನಿ ಸತ್ಯವು

ಜ್ಞಾನವನ್ನು ನಿ ಸಂಪಾದಿಸಬೇಕು
ಭಕ್ತಿ ಮಾರ್‍ಗವೇ ಅನುಸರಿಸಬೇಕು
ಅಹಂಕಾರ ಮನದಿ ತೊರೆಯಬೇಕು
ಸದ್ಗ್ರಂಥಗಳ ಸ್ವಾಧ್ಯಾಯ ಮಾಡಬೇಕು

ನಿದ್ರೆ ಆಹಾರ ಕಾಮ ವ್ಯವಹಾರ
ಪ್ರಾಣಿಗಳಲ್ಲೂ ನಿ ನೋಡಲಾರೆಯಾ
ಪಶುಗಳಿಗಿಂತ ನಿ ಭಿನ್ನನಲ್ಲವೆ
ಮಾಣಿಕ್ಯ ವಿಠಲನು ನೀನಾಗಲಾರೆಯಾ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಉಮರನ ಒಸಗೆ – ೬
Next post ಪಾಪಿಯ ಪಾಡು – ೯

ಸಣ್ಣ ಕತೆ

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…