Home / ಕವನ / ಕವಿತೆ / ರಾಮಿಯ ಗಂಡು

ರಾಮಿಯ ಗಂಡು

ಸರಸಿಯ ದಡದೊಳು ಹೊಂಗೆಯ ನೆಳಲೊಳು
ಗರುಕೆ ಮೆತ್ತೆಯ ಮೇಲೆ ಉರುಳಿ,
ಹರುಷದ ಮುದ್ದೆಯೆ ತಾನೆಂಬ ತೆರದೊಳ-
ಗಿರುವನು ರಾಮಿಯ ಗಂಡು.

ಹೊಲ್ಲಳು ರಾಮಿ; ಇಂದವಳಿಗೆ ಮನೆಯಿಲ್ಲ-
ಇಲ್ಲ ಬಾಂಧವ್ಯದ ಅಂಟು.
ಎಲ್ಲವು ಆ ಕಂದನೊಬ್ಬನೆ ಬಾಳಿನೊ-
ಳುಲ್ಲಸ ಹೂಡುವ ನಂಟು.

ಹಸುರೊಳಗಾಡುವ ಕಂದನ ನೋಡುತ
ಬಸಿರನ್ನು ನೆನೆವಳು ರಾಮಿ-
ಕಸಕಿಂತ ಹೀನನು ತನು ಮನ ಮಾನವ
ಕಸಿದುಕೊಂಡಾ ಹಳೆ ಕತೆಯ.

ನೋಟಕ್ಕೆ ರೂಪಿಲ್ಲ, ಕೂಟಕ್ಕೆ ಸಮನಲ್ಲ,
ಬೇಟಕ್ಕು ನಯವಿಲ್ಲ ಕನಕ.
ಮಾಟಗಾರಿಕೆಯೇನೊ? ಬಲ್ಲಳೆ? ಆವುದೊ
ಹೂಟದಿ ಗೆದ್ದನು ತನ್ನ.

“ರಾಮಿ, ನನ್ನೊಲುಮೆಯೆ, ನನ್ನೆದೆ ಹಣತೆಯೆ,
ಕಾಮಿಸಿ ಬಂದಿಹೆ ನಿನ್ನ,
ಪ್ರೇಮದ ಚಿಲುಮೆಯ ಚಿಮ್ಮಿಸುತೀ ಮರು-
ಭೂಮಿಯ ದಾಹವ ತಣಿಸು.

“ಮನೆ ಇದೆ- ಆದೊಡೆ – ದೀಪ ಹಚ್ಚುವರಿಲ್ಲ,
ದನ ಕರು ಹೊಲ ಗದ್ದೆ ವ್ಯರ್‍ಥ.
ಮನೆಸಿರಿಯಾಗು ಬಾ, ಬದುಕಿಗೆ ಬೆಳಕಾಗು,
ಮನದನ್ನೆ, ಬಾಳಿನ ಕಣ್ಣೆ.”

ಕನಕ ಸಾಮಾನ್ಯನೆ? ಒಲಿಸಲಿದೇ ಮೊದಲೆ?
ಪ್ರಣಯಿಗಳೊಳು ಕಡುಜಾಣ.
ಇನಿದಾಯ್ತು, ರಾಮಿಯ ಕಿವಿಗತವ ಹೊಯ್ದಿ.
ತನುನಯದಾ ಸವಿಸೊಲ್ಲು.

ಬಿಟ್ಟಳು ತೌರೂರ, ನೆಚ್ಚಿದ ತಂದೆಯ,
ದಿಟ್ಟ ಕನಕಣ್ಣನ ಮೆಚ್ಚಿ,
ಕಟ್ಟುಂಟೆ ಪ್ರಾಯದೊಳುಕ್ಕುವ ಮೋಹಕೆ?
ದುಷ್ಟನ ಹುಚ್ಚಿ ನೆಚ್ಚಿದಳು.

ದಿನ ದಿನ ಊರೂರನಲೆಯುತ ಕಳೆದರು.
ಕನಕನ ಮನೆಮಠವೆಲ್ಲಾ
ಕನಸಿನ ಗಂಟಾಯ್ತು, ರಾಮಿಯ ಕನಸೊಡೆ-
ದನುತಾಪದುರಿ ತಾಗಿತೆದೆಗೆ.

ಕಾಮಿ ಬಿಟ್ಟೋಡಿದನಬಲೆಯ ಸತ್ರದಿ
ಕಾಮದ ಬಿಸಿಯಾರಿಹೋಗೆ,
ಭೀಮಭವಾರ್‍ಣವದೊಳಗೀಜಲಿಬ್ಬರೆ:
ರಾಮಿ- ಮತ್ತಾಕೆಯ ಪಾಪ!

ಹತ್ತಿರ ಕರೆದಳು ಮೋಹದ ಮುದ್ದನ,
ಮುತ್ತಲು ಕಂಬನಿ ಕಣ್ಣ.
ಕತ್ತನಾಲಿಂಗಿಸಿ ಮುಡಿಯ ನೇವರಿಸುತ್ತ-
ಲೊತ್ತಿದಳಧರವ ತಲೆಗೆ.

“ಒಲುಮೆಯ ಕುರುಡಿಗೆ ಬಲಿಯಾದೆವಿಬ್ಬರು,
ಬಳುವಳಿಗೀ ಬಾಳೆ ನಿನಗೆ?
ಕುಲವಿತ್ತೆ, ರೂಪಿತ್ತೆ, ಶೀಲವೆ ಕನಕಗೆ?
ಹುಲುಮನುಜಗೆ ನಾನೆಂತೊಲಿದೆ?

“ಪ್ರಣಯ ಪ್ರಪಾತಕ್ಕೆ ಧುಮುಕೆಂದು ನಚ್ಚೊಂದು
ಕೆಣಕಿತೊ ಮನವ? ನಾನರಿಯೆ.
ಕನಕನ ನೆಮ್ಮುವ ನರಕವೆ ಬಾಗಿಲೊ,
ಗಿಣಿ, ನಿನ್ನ ನಪ್ಪುವ ದಿವಕೆ?

“ಒಲುಮೆಯ ಹುಚ್ಚೊಳು ನೀ ಬಹ ನೆಚ್ಹಿತ್ತೊ?
ಒಲಿದೆನೊ ನಿನಗಾಗಿ, ಚಿನ್ನ?”
ಬಲು ಮೋಹದಿಂದಣುಗನ ಮುತ್ತಿಟ್ಟಳು ರಾಮಿ-
ಇಳೆಯೊಳು ತನ್ನೊಂದೆ ನಚ್ಚ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...