Home / ಕವನ / ಕವಿತೆ / ರಾಮಿಯ ಗಂಡು

ರಾಮಿಯ ಗಂಡು

ಸರಸಿಯ ದಡದೊಳು ಹೊಂಗೆಯ ನೆಳಲೊಳು
ಗರುಕೆ ಮೆತ್ತೆಯ ಮೇಲೆ ಉರುಳಿ,
ಹರುಷದ ಮುದ್ದೆಯೆ ತಾನೆಂಬ ತೆರದೊಳ-
ಗಿರುವನು ರಾಮಿಯ ಗಂಡು.

ಹೊಲ್ಲಳು ರಾಮಿ; ಇಂದವಳಿಗೆ ಮನೆಯಿಲ್ಲ-
ಇಲ್ಲ ಬಾಂಧವ್ಯದ ಅಂಟು.
ಎಲ್ಲವು ಆ ಕಂದನೊಬ್ಬನೆ ಬಾಳಿನೊ-
ಳುಲ್ಲಸ ಹೂಡುವ ನಂಟು.

ಹಸುರೊಳಗಾಡುವ ಕಂದನ ನೋಡುತ
ಬಸಿರನ್ನು ನೆನೆವಳು ರಾಮಿ-
ಕಸಕಿಂತ ಹೀನನು ತನು ಮನ ಮಾನವ
ಕಸಿದುಕೊಂಡಾ ಹಳೆ ಕತೆಯ.

ನೋಟಕ್ಕೆ ರೂಪಿಲ್ಲ, ಕೂಟಕ್ಕೆ ಸಮನಲ್ಲ,
ಬೇಟಕ್ಕು ನಯವಿಲ್ಲ ಕನಕ.
ಮಾಟಗಾರಿಕೆಯೇನೊ? ಬಲ್ಲಳೆ? ಆವುದೊ
ಹೂಟದಿ ಗೆದ್ದನು ತನ್ನ.

“ರಾಮಿ, ನನ್ನೊಲುಮೆಯೆ, ನನ್ನೆದೆ ಹಣತೆಯೆ,
ಕಾಮಿಸಿ ಬಂದಿಹೆ ನಿನ್ನ,
ಪ್ರೇಮದ ಚಿಲುಮೆಯ ಚಿಮ್ಮಿಸುತೀ ಮರು-
ಭೂಮಿಯ ದಾಹವ ತಣಿಸು.

“ಮನೆ ಇದೆ- ಆದೊಡೆ – ದೀಪ ಹಚ್ಚುವರಿಲ್ಲ,
ದನ ಕರು ಹೊಲ ಗದ್ದೆ ವ್ಯರ್‍ಥ.
ಮನೆಸಿರಿಯಾಗು ಬಾ, ಬದುಕಿಗೆ ಬೆಳಕಾಗು,
ಮನದನ್ನೆ, ಬಾಳಿನ ಕಣ್ಣೆ.”

ಕನಕ ಸಾಮಾನ್ಯನೆ? ಒಲಿಸಲಿದೇ ಮೊದಲೆ?
ಪ್ರಣಯಿಗಳೊಳು ಕಡುಜಾಣ.
ಇನಿದಾಯ್ತು, ರಾಮಿಯ ಕಿವಿಗತವ ಹೊಯ್ದಿ.
ತನುನಯದಾ ಸವಿಸೊಲ್ಲು.

ಬಿಟ್ಟಳು ತೌರೂರ, ನೆಚ್ಚಿದ ತಂದೆಯ,
ದಿಟ್ಟ ಕನಕಣ್ಣನ ಮೆಚ್ಚಿ,
ಕಟ್ಟುಂಟೆ ಪ್ರಾಯದೊಳುಕ್ಕುವ ಮೋಹಕೆ?
ದುಷ್ಟನ ಹುಚ್ಚಿ ನೆಚ್ಚಿದಳು.

ದಿನ ದಿನ ಊರೂರನಲೆಯುತ ಕಳೆದರು.
ಕನಕನ ಮನೆಮಠವೆಲ್ಲಾ
ಕನಸಿನ ಗಂಟಾಯ್ತು, ರಾಮಿಯ ಕನಸೊಡೆ-
ದನುತಾಪದುರಿ ತಾಗಿತೆದೆಗೆ.

ಕಾಮಿ ಬಿಟ್ಟೋಡಿದನಬಲೆಯ ಸತ್ರದಿ
ಕಾಮದ ಬಿಸಿಯಾರಿಹೋಗೆ,
ಭೀಮಭವಾರ್‍ಣವದೊಳಗೀಜಲಿಬ್ಬರೆ:
ರಾಮಿ- ಮತ್ತಾಕೆಯ ಪಾಪ!

ಹತ್ತಿರ ಕರೆದಳು ಮೋಹದ ಮುದ್ದನ,
ಮುತ್ತಲು ಕಂಬನಿ ಕಣ್ಣ.
ಕತ್ತನಾಲಿಂಗಿಸಿ ಮುಡಿಯ ನೇವರಿಸುತ್ತ-
ಲೊತ್ತಿದಳಧರವ ತಲೆಗೆ.

“ಒಲುಮೆಯ ಕುರುಡಿಗೆ ಬಲಿಯಾದೆವಿಬ್ಬರು,
ಬಳುವಳಿಗೀ ಬಾಳೆ ನಿನಗೆ?
ಕುಲವಿತ್ತೆ, ರೂಪಿತ್ತೆ, ಶೀಲವೆ ಕನಕಗೆ?
ಹುಲುಮನುಜಗೆ ನಾನೆಂತೊಲಿದೆ?

“ಪ್ರಣಯ ಪ್ರಪಾತಕ್ಕೆ ಧುಮುಕೆಂದು ನಚ್ಚೊಂದು
ಕೆಣಕಿತೊ ಮನವ? ನಾನರಿಯೆ.
ಕನಕನ ನೆಮ್ಮುವ ನರಕವೆ ಬಾಗಿಲೊ,
ಗಿಣಿ, ನಿನ್ನ ನಪ್ಪುವ ದಿವಕೆ?

“ಒಲುಮೆಯ ಹುಚ್ಚೊಳು ನೀ ಬಹ ನೆಚ್ಹಿತ್ತೊ?
ಒಲಿದೆನೊ ನಿನಗಾಗಿ, ಚಿನ್ನ?”
ಬಲು ಮೋಹದಿಂದಣುಗನ ಮುತ್ತಿಟ್ಟಳು ರಾಮಿ-
ಇಳೆಯೊಳು ತನ್ನೊಂದೆ ನಚ್ಚ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...