ಬಾಳಿನ ಹಂಬಲು


ಕೂಸಿಗಂದು ಏನು ಬೇಡ,
ತಿಂಡಿ ಗೊಂಬೆ ಮುದ್ದು ಬೇಡ.
ಏನೊ ಅರಕೆ, ಏನೊ ಬೇನೆ,
ಅತ್ತು ಸೊರಗಿತು :
“ಅಮ್ಮ ಎಲ್ಲಿ ಹೋತು” ಎನುತ
ಅತ್ತು ಸೊರಗಿತು.

ಅಳುವ ಕೇಳಿ ಬಂದ ತಾಯ
ಅಮೃತಸ್ಪರ್‍ಶಕಾರೆ ಗಾಯ,
ತೊಯ್ದ ಕಣ್ಣ ಬಿಚ್ಚಿ, ಸುಳಿಸಿ,
ತೊಂದು ನಗೆಯನು-
“ನಿನ್ನ ನುಳಿಯೆ ಬಾಳು ಶೂನ್ಯ!”
ಎನುವ ನಗೆಯನು.


ಕೂಸು ಬೆಳೆದು ಆದ ರಾಮು,
ಇಂದು ನೆರೆಯ ಮನೆಯ ಶಾಮು
ರಾಮನೊಂದೆ ಬಯಕೆ, ಕನಸು,
ಬಾಳ ಧ್ಯೇಯವು ;
ಆಸೆಗಳಿಗೆ ಕಲ್ಪತರುವು,
ನೋವಿಗಮೃತವು.

ಒಂದೆ ಜೀವದೆರಡು ಕವಲು;
ರಾಮ-ಶಾಮು: ಹಾಡು-ಹೊಳಲು.
ತುಂಬುಗಣ್ಣೊಳವನ ರಾಮು
ಸೆರೆಯಕೊಳುವನು:
“ನಿನ್ನ ನುಳಿಯೆ ಬಾಳು ಬಯಲು”
ಎಂದುಕೊಳುವನು.


ರಾಮುವೀಗ ರಾಮರಾಯ!
ಏನು ಠೀವಿ! ಎಂಥ ಪ್ರಾಯ!
ನಿತ್ಯ ಕನಸುಕಾಂಬ ತೆರದ
ನೋಟದಲೆತವು;
ಒಲುಮೆನೆರೆಗೆ ಸಿಲುಕಿದವನ
ಮನದ ಸೆಳೆತವು!

ಇಂದು ಸರಳೆ ಅವನ ಜಗವ
ತುಂಬಿ, ಬಾಳ ಸೂರೆಗೊಳುವ-
ಳಾತ್ಮವನ್ನೆ ಮೀಸಲಿಟ್ಟು
ರಾಮು ಒಲಿವನು;
“ಸುಳಿದೆ, ಸರಳ, ಬಾಳ ಟೊಳ್ಳು
ತುಂಬಿ”ತೆನುವನು.


ಸರಳೆ ರಾಮರೊಲುಮೆ ಸೂತ್ರ
ಹಸುಳೆ ಕಿಟ್ಟು, ಮೊದಲು – ಚಿತ್ರ!
ರಾಮಗದರ ಬಾಳ ಗುಟ್ಟು
ಅರ್‍ಥವಾಗದು:
“ನಮ್ಮ ಪ್ರೇಮಕಡ್ಡಬಂದ
ಗಂಡವೇನಿದು?”

ಒಂದು ದಿನದಿ ಕೂಸು ತನ್ನ
ಬೆಳಕೆ ದ್ರವಿಸಿ ಹರಿವ ಕಣ್ಣ
ಮೊಗದಿ ನೆಟ್ಟು, ಅವನ ಬೆರಳ
ಬಾಯಿಗೊಯ್ಯಲು,
ರಾಮನೆಂದ, “ತೀರಿತಿಂದು
ಬಾಳ ಹಂಬಲು!”


ರಾಮರಾಯನೆಂಥ ಮನುಜ!
ಸಿರಿಯ ಘೃಣೆಯ ಹಿರಿಯ ಕಣಜ!
ಏನು ಪ್ರತಿಭೆ, ಎಂಥ ವಿನಯ!-
ಯಶದ ಹೊಗಳದು.
ಆತನೊಂದೆ ಬಯಕೆ ಒಲಿದು
ಬರುವ ಮೊಳಗದು.

ಜಸದ ಹೆಣ್ಣು ಒಲಿದು ನಗಲು,
ನಗೆಯು ಮೊಗದಿ ಬಿಂಬಿಸಿರಲು,
ಬಾಳ ಸಂಜೆಯಲ್ಲಿ ಯಶಕೆ
ರಾಮರಾಯರು,
“ಬಂದೆ, ಬಾಳು ಪೂರ್ಣವಾಯ್ತು”
ಎಂದು ನುಡಿದರು.


“ಇಲ್ಲಿ ಹಳ್ಳ, ಅಲ್ಲಿ ತಿಟ್ಟು”
ಎನುತ ಕೋಲ ಹಿಡಿದು ಪುಟ್ಟು
ನಡೆಸುತಿರುವ ಪಲಿತ ಶಿರದ
ತಾತ-ರಾಯರು!
ಕೂಸಿಗಿಂತ ತ್ರಾಣಿಯಲ್ಲ
ಪಾಪ!-ರಾಯರು.

ಒಂದು ದಿನದೊಳಿರುಳಿನಲ್ಲಿ
ಕಿರಣವೊಂದು ಹೊನ್ನ ಚೆಲ್ಲಿ,
ಬಾಳ ಸೆರೆಯ ಬೆಳಗೆ, ತಾತ
ಚಕಿತರಾದರು:
“ಬಂದು ಬಾಳಿಗರ್‍ಥವಿತ್ತೆ,
ಮೃತ್ಯು” ಎಂದರು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಾಲಿ ತಾ ಮೈನೆರದು
Next post ಅನಾಥ ಬಂಧು

ಸಣ್ಣ ಕತೆ

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

cheap jordans|wholesale air max|wholesale jordans|wholesale jewelry|wholesale jerseys